ನಮ್ಮ ಮೈಸೂರ ದಸರಾ 2025

ಶ್ವಾನ ಪ್ರದರ್ಶನ : ಜರ್ಮನ್ ಶಫರ್ಡ್‌ಗೆ ಮೊದಲ ಸ್ಥಾನ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಡೆದ ಶ್ವಾನ ಮತ್ತು ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ ಜರ್ಮನ್ ಶಫರ್ಡ್ ತಳಿಯ ಮೈಸೂರು ಶ್ವಾನಕ್ಕೆ ಮೊದಲ ಸ್ಥಾನ ದೊರೆಯಿತು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ರೈತ ದಸರಾ ಉಪ ಸಮಿತಿ ವತಿಯಿಂದ ನಗರದ ಜೆ.ಕೆ.ಮೈದಾನದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಶ್ವಾನ ಮತ್ತು ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಿತು.

ಮೈಸೂರು, ಮಂಡ್ಯ, ಬೆಂಗಳೂರು, ಹೊರ ರಾಜ್ಯ ಕೇರಳ ಹಾಗೂ ಊಟಿ ಸೇರಿದಂತೆ ವಿವಿಧ ಭಾಗಗಳಿಂದ ಒಟ್ಟು 640 ಶ್ವಾನಗಳು ನೋಂದಣಿಯಾಗಿದ್ದವು. ಸೈಬಿರಿಯಾ ಹಷ್ಕಿ, ಜರ್ಮನ್ ಶಫರ್ಡ್ , ಮುಧೋಳ ಹಾಗೂ ಪಾರಿನ್ ನ ಒಟ್ಟು 51 ತಳಿಯ ಶ್ವಾನಗಳು ಸ್ಪರ್ಧೆಯಲ್ಲಿ ಪಾಲ್ಲೊಂಡಿದ್ದವು ಅಂತಿಮವಾಗಿ 7 ತಳಿಗಳು ಜಯಶೀಲ ಆದವು ಅವುಗಳ ಮಾಲೀಕರಿಗೆ ಪ್ರಮಾಣ ಪತ್ರ ಹಾಗೂ ಆಕರ್ಷಕ ಟ್ರೋಪಿಯನ್ನು ನೀಡಲಾಯಿತು.

ಇದನ್ನೂ ಓದಿ:-ಮೈಸೂರು | ಸಮೀಕ್ಷೆಗೆ ಗೈರು ; 8 ಸಹ ಶಿಕ್ಷಕರು ಅಮಾನತು

ಶ್ವಾನಗಳ ನಡಿಗೆ, ಚರ್ಮದ ಬಣ್ಣ ಹಾಗೂ ಗುಣ ಲಕ್ಷಣಗಳನ್ನು ಆಧರಿಸಿ ತೀರ್ಪುಗಾರರಾದ ಡಾ. ಅಜೀಂ ಹುಲ್ಲಾ, ಡಾ.ಕೆ.ಟಿ.ಪರಮೇಶ್ವರ್, ಡಾ.ಬಸವರಾಜು ಹಾಗೂ ಡಾ.ಭಟ್ ಅವರು ಜಯಶೀಲ ತಳಿಗಳ ಹೆಸರನ್ನು ಘೋಷಿಸಿದರು.

ಜರ್ಮನ್ ಶಫರ್ಡ್ ತಳಿಗೆ ಮೊದಲ, ಬಾಕ್ಸರ್ ತಳಿಗೆ ದ್ವೀತೀಯ, ರಾಟ್ ವಲರ್ ತಳಿಗೆ ಮೂರನೇ, ಡಾಬರ್ ವೆಲಸ್ ನಾಲ್ಕನೆ, ಮಾಲ್ವಿಸ್ ತಳಿಗೆ ಐದನೇ, ಮುಧೋಳ್ ತಳಿಗೆ ಆರನೇ ಹಾಗೂ ಸೈಬೇರಿಯನ್ ಹಸ್ಕಿ ತಳಿಗೆ ಏಳನೇ ಸ್ಥಾನಗಳು ದೊರೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಅಭಿವೃದ್ಧಿ) ಭೀಮಪ್ಪ ಕೆ. ಲಾಳಿ ಅವರು, ಪಶುಪಾಲನ ಮತ್ತು ಪಶು ವೈದ್ಯಕೀಯ ಉಪನಿರ್ದೇಶಕರು (ಆಡಳಿತ) ಡಾ.ನಾಗರಾಜು ಅವರು, ಉಪನಿರ್ದೇಶಕರು (ಪಾಲಿ ಕ್ಲಿನಿಕ್) ಡಾ.ರಮೇಶ್ ಅವರು, ಸಹಾಯಕ ನಿರ್ದೇಶಕರಾದ ಡಾ.ಪೂರ್ಣನಂದ ಸೇರಿದಂತೆ ಇತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

1 hour ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

1 hour ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

1 hour ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

1 hour ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago