ನಮ್ಮ ಮೈಸೂರ ದಸರಾ 2025

ದಸರಾ ಉದ್ಘಾಟನೆ : ಚಾಮುಂಡಿ ಬೆಟ್ಟಕ್ಕೆ ಭಾರಿ ಭದ್ರತೆ

ಮೈಸೂರು : ನಾಡಹಬ್ಬ ದಸರಾ ಸೋಮವಾರ ಬೆಳಿಗ್ಗೆ ಚಾಮುಂಡಿಬೆಟ್ಟದಲ್ಲಿ ಉದ್ಘಾಟನೆಗೊಳ್ಳಲಿದ್ದು, ಇದೇ ಪ್ರಥಮ ಬಾರಿಗೆ ಬೆಟ್ಟದ ಆವರಣಕ್ಕೆ ಭಾರೀ ಭದ್ರತೆಯನ್ನು ಒದಗಿಸಲಾಗಿದೆ. ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ಸುಮಾರು ೯೦೦ ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಬುಕರ್ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಸೋಮವಾರ ಬೆಳಿಗ್ಗೆ ನಾಡಹಬ್ಬಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಸಚಿವರು, ಶಾಸಕರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ನಡುವೆ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸುವುದು ಬೇಡ ಎಂದು ಕೆಲವು ಬಿಜೆಪಿ ಮುಖಂಡರು ವಿವಾದ ಹುಟ್ಟುಹಾಕಿದ್ದರು. ಈ ಹಿನ್ನೆಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕೆ ಬಾರೀ ಬಂದೋಬಸ್ತ್ ಏರ್ಪಡಿಸಲಾಗಿದೆ.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ರಸ್ತೆ ಬದಿಯಲ್ಲಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಪಾಸ್ ಹೊಂದಿರುವವರನ್ನು ಮಾತ್ರ ಚಾಮುಂಡಿಬೆಟ್ಟದ ಆವರಣಕ್ಕೆ ಬಿಡಲು ಪೊಲೀಸರು ನಿರ್ಧರಿಸಿದ್ದಾರೆ.

ಇದೇ ವೇಳೆ ನಗರದ ಆಹಾರ ಮೇಳೆ ಉದ್ಘಾಟನೆಗೊಳ್ಳುವ ಮಹಾರಾಜ ಕಾಲೇಜು ಮೈದಾನ, ಫಲಪುಷ್ಪ ಪ್ರದರ್ಶನ ನಡೆಯಲಿರುವ ಕುಪ್ಪಣ್ಣ ಪಾರ್ಕ್, ವಸ್ತು ಪ್ರದರ್ಶನ ಆವರಣ, ಅರಮನೆ ಆವರಣ ಸೇರಿದಂತೆ ದಸರಾ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಪೊಲೀಸರನ್ನು ಭದ್ರತೆಗೆ ನಿಯೋಜಿಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

29 mins ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

6 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

6 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

9 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

9 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

9 hours ago