ನಮ್ಮ ಮೈಸೂರ ದಸರಾ 2025

ದಸರಾ ವೇಳೆ ಯಾವುದೇ ಅನಾಹುತವಾಗದಂತೆ ನೋಡಿಕೊಳ್ಳಿ : ಡಿಜಿಪಿ ಡಾ.ಎಂ.ಎ.ಸಲೀಂ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ದಸರಾ ವೇಳೆ ಯಾವರೀತಿ ಬಂದೋಬಸ್ತ್ ಏರ್ಪಡಿಸಬೇಕು ಎಂಬ ಕುರಿತು ರಾಜ್ಯ ಪೋಲಿಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಅವರು ನಗರದ ಹಿರಿಯ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.

ನಗರದ ನಜರ್‌ಬಾದ್‌ನಲ್ಲಿರುವ ನಗರ ಪೋಲಿಸ್ ಆಯುಕ್ತರ ಕಛೇರಿ ಸಭಾಂಗಣದಲ್ಲಿ ಬುಧವಾರ ಬೆಳಿಗ್ಗೆ ದಸರಾ ಮಹೋತ್ಸವದ ಭದ್ರತೆಗೆ ಕೈಗೊಂಡಿರುವ ಸಿದ್ಧತೆ ಕುರಿತಂತೆ ಅವರು ಎಸಿಪಿ ಹಾಗೂ ಮೇಲ್ಪಟ್ಟ ಪೋಲಿಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ಬಾರಿಯ ದಸರಾ ಸೂಕ್ಷವಾಗಿದ್ದು, ಇಲಾಖೆ ವತಿಯಿಂದ ವ್ಯಾಪಕ ಬಂದೋಬಸ್ತ್ ಏರ್ಪಡಿಸಬೇಕು. ದಸರಾ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ತೀವ್ರ ಕಟ್ಟೆಚ್ಚರ ವಹಿಸಬೇಕು. ಈ ಸಂಬಂದ ಆಗಿಂದಾಗ್ಗೆ ಸಭೆಗಳನ್ನು ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಣಿತ, ಬಾಣು ಮುಷ್ತಾಕ್ ಆಯ್ಕೆ ವಿವಾದ, ಮದ್ದೂರಿನಲ್ಲಿ ನಡೆದ ಘಟನೆಗಳ ಬಗ್ಗೆ ನೀವುಗಳು ಗಂಭೀರವಾಗಿ ಆಲೋಚಿಸಬೇಕು. ಈ ಹಿನ್ನೆಲೆಯಲ್ಲಿ ಸೆ.೨೨ ರಿಂದ ಆರಂಭವಾಗುವ ದಸರಾ ನವರಾತ್ರಿ ಉತ್ಸವಕ್ಕೆ ಹೆಚ್ಚಿನ ಭದ್ರತೆ ವಹಿಸಬೇಕು ಎಂದು ಹೇಳಿದರು.

ಸೆ.೨೨ ರಂದು ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಉದ್ಘಾಟನೆ ವೇಳೆ ತೀವ್ರ ವಿರೋಧ ಅಥವಾ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವುದರಿಂದ ಅಲ್ಲಿ ಎಸ್ಪಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಬಂದೋಬಸ್ತ್ ಏರ್ಪಡಿಸಬೇಕು ಎಂದಿದ್ದಾರೆ.

ಇದೇ ವೇಳೆ ದಸರಾ ಉದ್ಘಾಟಕರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಅವರು ಕಾರ್ಯಕ್ರಮ ಮುಗಿಸಿ ಸುರಕ್ಷಿತವಾಗಿ ತೆರಳುವವರೆಗೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಖಡಕ್ ಸೂಚನೆ ನಿಡಿದ್ದಾರೆ.

ವಿಜಯದಶಮಿ ಮೆರವಣಿಗೆ ವೇಳೆ ಅರಮನೆ ಆವರಣ, ಸುತ್ತಲಿನ ಪ್ರವೇಶದ್ವಾರಗಳು, ಮೆರವಣಿಗೆ ಸಾಗುವ ರಾಜಮಾರ್ಗ ಹಾಗೂ ಪಂಜಿನ ಕವಾಯಿತು ಪ್ರದರ್ಶನ ನಡೆಯಲಿರುವ ಬನ್ನಿಮಂಟಪದ ಟಾರ್ಚಲೈಟ್ ಪೆರೇಡ್ ಮೈದಾನದಲ್ಲೂ ಕಟ್ಟೆಚ್ಚರ ವಹಿಸಬೇಕು ಎಂದರು.

ಮಾರ್ಗದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ದಸರಾ ವೇಳೆ ದೇಶವಿದೇಶದಿಂದ ಲಕ್ಷಾಂತರ ಮಂದಿ ಸೇರುವುದರಿಂದ ಚಾಮುಂಡಿಬೆಟ್ಟ, ಯುವ ದಸರಾ, ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ದಸರಾ ವಸ್ತುಪ್ರದರ್ಶನ, ವೈಮಾನಿಕ ಪ್ರದರ್ಶನದಂತಹ ಕಾರ್ಯಕ್ರಮ ನಡೆಯುವ ಸ್ಥಳದಲ್ಲೂ ಮೆಟಲ್ ಡೋರ್ ಡಿಟೆಕ್ಟರ್ ಅಳವಡಿಸಿ, ಪ್ರತಿಯೊಬ್ಬರನ್ನೂ ತಪಾಸಣೆ ನಡೆಸುವಂತೆ ಸೂಚನೆ ನಿಡಿದ್ದಾರೆ.

ಸಭೆಯಲ್ಲಿ ಡಿಸಿಪಿಗಳಾದ ಆರ್.ಎನ್. ಬಿಂದುಮಣಿ, ಕೆ.ಎಸ್.ಸುಂದರ್ ರಾಜ್, ಸಿದ್ಧನಗೌಡ ಪಾಟೀಲ್, ಮೌಂಟೆಂಡ್ ಪೋಲಿಸ್ ಕಮಾಂಡೆಂಟ್ ಎ.ಮಾರುತಿ, ನಗರ ಸಂಚಾರ ವಿಭಾಗದ ಎಂ. ಶಿವಶಂಕರ್, ಅರಮನೆ ಭದ್ರತಾ ವಿಭಾಗದ ಚಂದ್ರಶೇಖರ್ ಸೇರಿದದಂತೆ ಎಲ್ಲಾ ಉಪ ವಿಭಾಗಗಳ ಎಸಿಪಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಡಿಐಜಿ ಡಾ. ಭೋರಲಿಂಗಯ್ಯ, ನಗರ ಪೋಲಿಸ್ ಆಯುಕ್ತರಾದ ಸೀಮಾ ಲಾಟ್ಕರ್ ಹಾಗೂ ಎಸ್ಪಿ ಎನ್.ವಿಷ್ಣುವರ್ಧನ ಅವರು ಪುಷ್ಪಗುಚ್ಛ ನೀಡುವ ಮೂಲಕ ಬರಮಾಡಿಕೊಂಡರು.

ಆಂದೋಲನ ಡೆಸ್ಕ್

Recent Posts

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

4 mins ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

15 mins ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

20 mins ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

42 mins ago

ಮೈಸೂರು: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಮ್ 119ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ…

49 mins ago

ಬೆಂಗಳೂರಿನಲ್ಲಿಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಕದನ

ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌…

1 hour ago