ನಮ್ಮ ಮೈಸೂರ ದಸರಾ 2025

ದಸರಾ ವೇಳೆ ಯಾವುದೇ ಅನಾಹುತವಾಗದಂತೆ ನೋಡಿಕೊಳ್ಳಿ : ಡಿಜಿಪಿ ಡಾ.ಎಂ.ಎ.ಸಲೀಂ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ದಸರಾ ವೇಳೆ ಯಾವರೀತಿ ಬಂದೋಬಸ್ತ್ ಏರ್ಪಡಿಸಬೇಕು ಎಂಬ ಕುರಿತು ರಾಜ್ಯ ಪೋಲಿಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಅವರು ನಗರದ ಹಿರಿಯ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.

ನಗರದ ನಜರ್‌ಬಾದ್‌ನಲ್ಲಿರುವ ನಗರ ಪೋಲಿಸ್ ಆಯುಕ್ತರ ಕಛೇರಿ ಸಭಾಂಗಣದಲ್ಲಿ ಬುಧವಾರ ಬೆಳಿಗ್ಗೆ ದಸರಾ ಮಹೋತ್ಸವದ ಭದ್ರತೆಗೆ ಕೈಗೊಂಡಿರುವ ಸಿದ್ಧತೆ ಕುರಿತಂತೆ ಅವರು ಎಸಿಪಿ ಹಾಗೂ ಮೇಲ್ಪಟ್ಟ ಪೋಲಿಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ಬಾರಿಯ ದಸರಾ ಸೂಕ್ಷವಾಗಿದ್ದು, ಇಲಾಖೆ ವತಿಯಿಂದ ವ್ಯಾಪಕ ಬಂದೋಬಸ್ತ್ ಏರ್ಪಡಿಸಬೇಕು. ದಸರಾ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ತೀವ್ರ ಕಟ್ಟೆಚ್ಚರ ವಹಿಸಬೇಕು. ಈ ಸಂಬಂದ ಆಗಿಂದಾಗ್ಗೆ ಸಭೆಗಳನ್ನು ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಣಿತ, ಬಾಣು ಮುಷ್ತಾಕ್ ಆಯ್ಕೆ ವಿವಾದ, ಮದ್ದೂರಿನಲ್ಲಿ ನಡೆದ ಘಟನೆಗಳ ಬಗ್ಗೆ ನೀವುಗಳು ಗಂಭೀರವಾಗಿ ಆಲೋಚಿಸಬೇಕು. ಈ ಹಿನ್ನೆಲೆಯಲ್ಲಿ ಸೆ.೨೨ ರಿಂದ ಆರಂಭವಾಗುವ ದಸರಾ ನವರಾತ್ರಿ ಉತ್ಸವಕ್ಕೆ ಹೆಚ್ಚಿನ ಭದ್ರತೆ ವಹಿಸಬೇಕು ಎಂದು ಹೇಳಿದರು.

ಸೆ.೨೨ ರಂದು ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಉದ್ಘಾಟನೆ ವೇಳೆ ತೀವ್ರ ವಿರೋಧ ಅಥವಾ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವುದರಿಂದ ಅಲ್ಲಿ ಎಸ್ಪಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಬಂದೋಬಸ್ತ್ ಏರ್ಪಡಿಸಬೇಕು ಎಂದಿದ್ದಾರೆ.

ಇದೇ ವೇಳೆ ದಸರಾ ಉದ್ಘಾಟಕರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಅವರು ಕಾರ್ಯಕ್ರಮ ಮುಗಿಸಿ ಸುರಕ್ಷಿತವಾಗಿ ತೆರಳುವವರೆಗೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಖಡಕ್ ಸೂಚನೆ ನಿಡಿದ್ದಾರೆ.

ವಿಜಯದಶಮಿ ಮೆರವಣಿಗೆ ವೇಳೆ ಅರಮನೆ ಆವರಣ, ಸುತ್ತಲಿನ ಪ್ರವೇಶದ್ವಾರಗಳು, ಮೆರವಣಿಗೆ ಸಾಗುವ ರಾಜಮಾರ್ಗ ಹಾಗೂ ಪಂಜಿನ ಕವಾಯಿತು ಪ್ರದರ್ಶನ ನಡೆಯಲಿರುವ ಬನ್ನಿಮಂಟಪದ ಟಾರ್ಚಲೈಟ್ ಪೆರೇಡ್ ಮೈದಾನದಲ್ಲೂ ಕಟ್ಟೆಚ್ಚರ ವಹಿಸಬೇಕು ಎಂದರು.

ಮಾರ್ಗದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ದಸರಾ ವೇಳೆ ದೇಶವಿದೇಶದಿಂದ ಲಕ್ಷಾಂತರ ಮಂದಿ ಸೇರುವುದರಿಂದ ಚಾಮುಂಡಿಬೆಟ್ಟ, ಯುವ ದಸರಾ, ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ದಸರಾ ವಸ್ತುಪ್ರದರ್ಶನ, ವೈಮಾನಿಕ ಪ್ರದರ್ಶನದಂತಹ ಕಾರ್ಯಕ್ರಮ ನಡೆಯುವ ಸ್ಥಳದಲ್ಲೂ ಮೆಟಲ್ ಡೋರ್ ಡಿಟೆಕ್ಟರ್ ಅಳವಡಿಸಿ, ಪ್ರತಿಯೊಬ್ಬರನ್ನೂ ತಪಾಸಣೆ ನಡೆಸುವಂತೆ ಸೂಚನೆ ನಿಡಿದ್ದಾರೆ.

ಸಭೆಯಲ್ಲಿ ಡಿಸಿಪಿಗಳಾದ ಆರ್.ಎನ್. ಬಿಂದುಮಣಿ, ಕೆ.ಎಸ್.ಸುಂದರ್ ರಾಜ್, ಸಿದ್ಧನಗೌಡ ಪಾಟೀಲ್, ಮೌಂಟೆಂಡ್ ಪೋಲಿಸ್ ಕಮಾಂಡೆಂಟ್ ಎ.ಮಾರುತಿ, ನಗರ ಸಂಚಾರ ವಿಭಾಗದ ಎಂ. ಶಿವಶಂಕರ್, ಅರಮನೆ ಭದ್ರತಾ ವಿಭಾಗದ ಚಂದ್ರಶೇಖರ್ ಸೇರಿದದಂತೆ ಎಲ್ಲಾ ಉಪ ವಿಭಾಗಗಳ ಎಸಿಪಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಡಿಐಜಿ ಡಾ. ಭೋರಲಿಂಗಯ್ಯ, ನಗರ ಪೋಲಿಸ್ ಆಯುಕ್ತರಾದ ಸೀಮಾ ಲಾಟ್ಕರ್ ಹಾಗೂ ಎಸ್ಪಿ ಎನ್.ವಿಷ್ಣುವರ್ಧನ ಅವರು ಪುಷ್ಪಗುಚ್ಛ ನೀಡುವ ಮೂಲಕ ಬರಮಾಡಿಕೊಂಡರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

2 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

2 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

2 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

2 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

2 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

2 hours ago