ಮೈಸೂರು: ಇದೇ ಸೆಪ್ಟೆಂಬರ್.22ರಂದು ವಿದ್ಯುಕ್ತವಾಗಿ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಆಗಲಿದ್ದು, ಅದೇ ದಿನ ಫಲಪುಷ್ಪ ಪ್ರದರ್ಶನ, ಕುಸ್ತಿ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್.10ರಂದು ಉದ್ಘಾಟನೆಯಾಗಿರುವ ಯುವ ಸಂಭ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಯುವ ಸಂಭ್ರಮದಲ್ಲಿ 480 ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಮಳೆ ಬಂದರು 10 ರಿಂದ 15 ಸಾವಿರ ಯುವಕರು ಭಾಗವಹಿಸಿ ಯಶಸ್ವಿ ಮಾಡುತ್ತಿದ್ದಾರೆ. ನಿನ್ನೆ ಚಲನಚಿತ್ರೋತ್ಸವ ಉದ್ಘಾಟನೆಯಾಗಿದೆ. ಅಲ್ಲಿ ಹಳೆಯ ಚಿತ್ರಗಳ ಪ್ರದರ್ಶನವಾಗುತ್ತಿದೆ.
ಇದನ್ನು ಓದಿ: ಮೈಸೂರು ದಸರಾ | ಸಮಾಜಮುಖಿ ಕೆಲಸ ಮಾಡುತ್ತಿರುವ ಸಿನಿಮಾ : ಸಚಿವ ಮಹದೇವಪ್ಪ
ಸೆ.22ರಂದು ವಿದ್ಯುಕ್ತವಾಗಿ ದಸರಾ ಉದ್ಘಾಟನೆ ಆಗಲಿದ್ದು, ಅದೇ ದಿನ ಫಲಪುಷ್ಪ ಪ್ರದರ್ಶನ, ಕುಸ್ತಿ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಇನ್ನು ಸೆಪ್ಟೆಂಬರ್.23ರಿಂದ 27ರವರೆಗೆ ಯುವ ದಸರಾ ಕಾರ್ಯಕ್ರಮ ನಡೆಯಲಿದೆ. ಉತ್ತನಹಳ್ಳಿ ಬಳಿ ದೊಡ್ಡ ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಕಳೆದ ಬಾರಿಯಂತೆ ಉತ್ತಮ ಕಲಾವಿದರನ್ನು ಆಯ್ಕೆ ಮಾಡಲಾಗುತ್ತಿದೆ. ಅರ್ಜುನ್ ಜನ್ಯ ಮೊದಲ ದಿನ ಚಾಲನೆ ನೀಡಲಿದ್ದಾರೆ. ಸೆಪ್ಟೆಂಬರ್.27ರಂದು ಏರ್ ಶೋ ಮಾಡುತ್ತಿದ್ದೇವೆ.
ಅಕ್ಟೋಬರ್.1ಕ್ಕೆ ಏರ್ ಶೋ ಇದೆ. ಸೆ.28, 29, ಅಕ್ಟೋಬರ್.1 ಹಾಗೂ 2ರಂದು ಒಟ್ಟು ನಾಲ್ಕು ದಿನ ಈ ಬಾರಿ 3 ಸಾವಿರ ಡ್ರೋನ್ಗಳ ಶೋ ಮಾಡುತ್ತೇವೆ. ಹಾಗಾಗಿ ದಸರಾದಲ್ಲಿ ಎಲ್ಲರೂ ಭಾಗವಹಿಸಿ. ನಮ್ಮೂರು ಮೈಸೂರು ಇದಕ್ಕೆ ತನ್ನದೇ ಆದ ಸಂಸ್ಕೃತಿ ಇದೆ. ಅತಿಥಿಗಳನ್ನು ಗೌರವಿಸುವ ಸನ್ನಡತೆ ಇದೆ. ಮೈಸೂರು ಎಂದರೆ ಜನರ ಒಗ್ಗೂಡುವಿಕೆ. ಮಹಾರಾಣಿ ಕಾಲೇಜು ಕಟ್ಟಿದ್ದು ಎಲ್ಲಾ ಜನರಿಗಾಗಿ ಕೇವಲ ಯಾರೋ ಒಬ್ಬರಿಗೆ ಮಾತ್ರವಲ್ಲ. ದಸರಾ ವೇಳೆ ಯಾವುದೇ ತಂಟೆ ತಕರಾರು ಇರೋದಿಲ್ಲ. ಇಂದು ಇರೋಲ್ಲ ನಾಳೆಯೂ ಇರೋದಿಲ್ಲ ಎಂದು ಹೇಳಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…