ನಮ್ಮ ಮೈಸೂರ ದಸರಾ 2025

ಮೈಸೂರು ದಸರಾದಲ್ಲಿ ಎಲ್ಲರೂ ಭಾಗವಹಿಸಿ: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ಇದೇ ಸೆಪ್ಟೆಂಬರ್.22ರಂದು ವಿದ್ಯುಕ್ತವಾಗಿ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಆಗಲಿದ್ದು, ಅದೇ ದಿನ ಫಲಪುಷ್ಪ ಪ್ರದರ್ಶನ, ಕುಸ್ತಿ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್.‌10ರಂದು ಉದ್ಘಾಟನೆಯಾಗಿರುವ ಯುವ ಸಂಭ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಯುವ ಸಂಭ್ರಮದಲ್ಲಿ 480 ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಮಳೆ ಬಂದರು 10 ರಿಂದ 15 ಸಾವಿರ ಯುವಕರು ಭಾಗವಹಿಸಿ ಯಶಸ್ವಿ ಮಾಡುತ್ತಿದ್ದಾರೆ. ನಿನ್ನೆ ಚಲನಚಿತ್ರೋತ್ಸವ ಉದ್ಘಾಟನೆಯಾಗಿದೆ. ಅಲ್ಲಿ ಹಳೆಯ ಚಿತ್ರಗಳ ಪ್ರದರ್ಶನವಾಗುತ್ತಿದೆ.

ಇದನ್ನು ಓದಿ: ಮೈಸೂರು ದಸರಾ | ಸಮಾಜಮುಖಿ ಕೆಲಸ ಮಾಡುತ್ತಿರುವ ಸಿನಿಮಾ : ಸಚಿವ ಮಹದೇವಪ್ಪ

ಸೆ.22ರಂದು ವಿದ್ಯುಕ್ತವಾಗಿ ದಸರಾ ಉದ್ಘಾಟನೆ ಆಗಲಿದ್ದು, ಅದೇ ದಿನ ಫಲಪುಷ್ಪ ಪ್ರದರ್ಶನ, ಕುಸ್ತಿ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಇನ್ನು ಸೆಪ್ಟೆಂಬರ್.23ರಿಂದ 27ರವರೆಗೆ ಯುವ ದಸರಾ ಕಾರ್ಯಕ್ರಮ ನಡೆಯಲಿದೆ. ಉತ್ತನಹಳ್ಳಿ ಬಳಿ ದೊಡ್ಡ ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಕಳೆದ ಬಾರಿಯಂತೆ ಉತ್ತಮ ಕಲಾವಿದರನ್ನು ಆಯ್ಕೆ ಮಾಡಲಾಗುತ್ತಿದೆ. ಅರ್ಜುನ್ ಜನ್ಯ ಮೊದಲ ದಿನ ಚಾಲನೆ ನೀಡಲಿದ್ದಾರೆ. ಸೆಪ್ಟೆಂಬರ್.27ರಂದು ಏರ್ ಶೋ ಮಾಡುತ್ತಿದ್ದೇವೆ.

ಅಕ್ಟೋಬರ್.1ಕ್ಕೆ ಏರ್ ಶೋ ಇದೆ. ಸೆ.28, 29, ಅಕ್ಟೋಬರ್.1 ಹಾಗೂ 2ರಂದು ಒಟ್ಟು ನಾಲ್ಕು ದಿನ ಈ ಬಾರಿ 3 ಸಾವಿರ ಡ್ರೋನ್‌ಗಳ ಶೋ ಮಾಡುತ್ತೇವೆ. ಹಾಗಾಗಿ ದಸರಾದಲ್ಲಿ ಎಲ್ಲರೂ ಭಾಗವಹಿಸಿ. ನಮ್ಮೂರು ಮೈಸೂರು ಇದಕ್ಕೆ ತನ್ನದೇ ಆದ ಸಂಸ್ಕೃತಿ ಇದೆ. ಅತಿಥಿಗಳನ್ನು ಗೌರವಿಸುವ ಸನ್ನಡತೆ ಇದೆ. ಮೈಸೂರು ಎಂದರೆ ಜನರ ಒಗ್ಗೂಡುವಿಕೆ. ಮಹಾರಾಣಿ ಕಾಲೇಜು ಕಟ್ಟಿದ್ದು ಎಲ್ಲಾ ಜನರಿಗಾಗಿ ಕೇವಲ ಯಾರೋ ಒಬ್ಬರಿಗೆ ಮಾತ್ರವಲ್ಲ. ದಸರಾ ವೇಳೆ ಯಾವುದೇ ತಂಟೆ ತಕರಾರು ಇರೋದಿಲ್ಲ. ಇಂದು ಇರೋಲ್ಲ ನಾಳೆಯೂ ಇರೋದಿಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

42 mins ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

50 mins ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

5 hours ago