ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಕೃಷಿ ಹಾಗೂ ರೈತರನ್ನ ಉತ್ತೇಜಿಸಲು ರೈತ ದಸರಾ ಆಯೋಜನೆ ಮಾಡಲಾಗಿತ್ತು.
ಮೈಸೂರಿನ ಅರಮನೆ ಬಳಿಯಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ನಂದಿ ಧ್ವಜ ಪೂಜೆ ನೆರವೇರಿಸಿ ಬಳಿಕ ದೀಪ ಬೆಳಗುವ ಮೂಲಕ ರೈತ ದಸರಾ ಮೆರವಣಿಗೆಗೆ ಚಾಲನೆ ನೀಡಿದರು.
ಇದನ್ನು ಓದಿ : ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ವಿದ್ಯಾರ್ಥಿಗಳಿಂದ ಪಾರಂಪರಿಕ ನಡಿಗೆ
ರೈತ ದಸರಾದಲ್ಲಿ ಹಳ್ಳಿಕಾರ್ ಜೋಡೆತ್ತುಗಳು, ಎತ್ತಿನಗಾಡಿ, ಪುಂಗನೂರು ಹಸು, ಬಂಡೂರು ತಳಿಯ ಕುರಿಗಳು ಕಣ್ಮನ ಸೆಳೆದವು. ವೀರಗಾಸೆ, ಡೊಳ್ಳುಕುಣಿತ, ಪೂಜಾ ಕುಣಿತ, ತಮಟೆ, ಕಂಸಾಳೆ ಸೇರಿದಂತೆ ಹಲವು ಕಲಾತಂಡಗಳು ರೈತ ದಸರಾ ಮೆರವಣಿಗೆಗೆ ಮೆರುಗು ನೀಡಿದವು.
ಕಾರ್ಯಕ್ರಮದಲ್ಲಿ ಸಚಿವ ಕೆ.ವೆಂಕಟೇಶ್, ಶಾಸಕರಾದ ಹರೀಶ್ ಗೌಡ, ರವಿಕುಮಾರ್, ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
ವಾಷಿಂಗ್ಟನ್: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ.13ರಿಂದ 15ರವರೆಗೆ ಚೀನಾಗೆ…
ಚೆನ್ನೈ : ಜೋಸೆಫ್ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…
ಹೈದರಾಬಾದ್ : ಅಮೆರಿಕ-ಇರಾನ್ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…
ಶುಭಾ ಖಟಾವಕರ ಮ್ಹೆತ್ರಸ್ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…
ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…
ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…