ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ ಕವಿಗೋಷ್ಠಿಯಲ್ಲಿ ಜಾನಪದ ಕಲರವ

ಮೈಸೂರು: ದಸರಾ ಕವಿಗೋಷ್ಠಿಯಲ್ಲಿ ಇದೇ ಮೊದಲ ಬಾರಿಗೆ ವಿವಿಧ ಜನಪದಗಳ ಕಾವ್ಯವಾಚನ ಹಾಗೂ ಗಾಯನಕ್ಕೆ ವೇದಿಕೆ ಕಲ್ಪಿಸಿದ್ದು, ಪ್ರತಿಭಾ ಕವಿಗೋಷ್ಠಿಯಲ್ಲಿ ಇಂದು ಈ ನೆಲದ ಮಣ್ಣಿನ ಮಕ್ಕಳು ಕಟ್ಟಿದ ಜಾನಪದ, ಗೀಗಿಪದ, ಲಾವಣಿ ಪದ, ಸೋಬಾನೆ ಪದ, ಅಣಕುಪದ, ಪಾಡ್ದನಗಳ ಪದ ಪಾಕವೇ ಹರಿಯಿತು. ಗೋಷ್ಠಿಗೆ ಆಗಮಿಸಿದ್ದ ಜಾನಪದ ಆರಾಧಕರು ಇದರ ಸವಿ ಸವಿದು ಖುಷಿಪಟ್ಟರು.

ಇದನ್ನು ಓದಿ : ದಸರಾ ಡ್ರೋನ್ ಶೋ: ಅನಧಿಕೃತವಾಗಿ ಡ್ರೋನ್ ವಿಡಿಯೋ ಚಿತ್ರೀಕರಣ ಮಾಡುವವರ ವಿರುದ್ಧ ಕ್ರಮ

ದಸರಾ ಮಹೋತ್ಸವ ಅಂಗವಾಗಿ ಮಾನಸ ಗಂಗೋತ್ರಿಯ ಕನ್ನಡ ಅಧ್ಯಯನ ಸಂಸ್ಥೆಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ನಡೆಯುತ್ತಿರುವ ಪಂಚ ಕಾವ್ಯದೌತಣ ಕವಿಗೋಷ್ಠಿಯಲ್ಲಿ ನಾಲ್ಕನೇ ದಿನವಾದ ಇಂದು ಜರುಗಿದ ಪ್ರತಿಭಾ ಕವಿಗೋಷ್ಟಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ 16 ವಿವಿಧ ಜನಪದ ಕಾವ್ಯವಾಚಕರು ಹಾಗೂ ಗಾಯಕರು ಕಂಸಾಳೆ, ತಂಬೂರಿ, ತಾಳ, ಮದ್ದಳೆಗಳ ಸಂಗೀತದೊಂದಿಗೆ ಸರಸ-ಸಲ್ಲಾಪ, ಬಸುರಿ ಬಯಕೆ, ಜರಿವ ಪದ, ಒಗಟು ಪದ, ತುಳುನಾಡಿನ ದೈವ ಪದ, ಮಲೆ ಮಾದಪ್ಪ, ಬಿಳಿಗಿರಿರಂಗಪ್ಪನ ಮೇಲಿನ ಪದಗಳ ಜನಪದದ ವಿವಿಧ ಪ್ರಕಾರಗಳ ಗಾಯನಕ್ಕೆ ನೆರೆದಿದ್ದವರು ಕುಳಿತಲ್ಲೆ ತಲೆದೂಗಿದರು.

ಕಾರ್ಯಕ್ರಮದಲ್ಲಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿರುವ ಪ್ರೊ.ಡಿ.ಕೆ.ರಾಜೇಂದ್ರ, ಮುಖ್ಯ ಅತಿಥಿಗಳಾದ ಪ್ರೊ. ಶೈಲಜಾ ಹಿರೇಮಠ್, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಹಾಗೂ ಕವಿಗೋಷ್ಟಿಯ ಉಪಸಮಿತಿಯ ಕಾರ್ಯದರ್ಶಿ ಪ್ರೊ.ಎನ್.ಕೆ.ಲೋಲಾಕ್ಷಿ, ಕಾರ್ಯದರ್ಶಿಗಳಾದ ಚೇತನ್ ಕುಮಾರ್, ಅಧಿಕಾರೇತರ ಸಮಿತಿಯ ಅಧ್ಯಕ್ಷರಾದ ಸುರೇಶ್, ಉಪಾಧ್ಯಕ್ಷ ರಾದ ಮನೋನ್ಮಣಿ ಹಾಗೂ ಸದಸ್ಯರು ಸೇರಿದಂತೆ ಹಲವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

3 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

3 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

3 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

3 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago