ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ ಕವಿಗೋಷ್ಠಿಯಲ್ಲಿ ಜಾನಪದ ಕಲರವ

ಮೈಸೂರು: ದಸರಾ ಕವಿಗೋಷ್ಠಿಯಲ್ಲಿ ಇದೇ ಮೊದಲ ಬಾರಿಗೆ ವಿವಿಧ ಜನಪದಗಳ ಕಾವ್ಯವಾಚನ ಹಾಗೂ ಗಾಯನಕ್ಕೆ ವೇದಿಕೆ ಕಲ್ಪಿಸಿದ್ದು, ಪ್ರತಿಭಾ ಕವಿಗೋಷ್ಠಿಯಲ್ಲಿ ಇಂದು ಈ ನೆಲದ ಮಣ್ಣಿನ ಮಕ್ಕಳು ಕಟ್ಟಿದ ಜಾನಪದ, ಗೀಗಿಪದ, ಲಾವಣಿ ಪದ, ಸೋಬಾನೆ ಪದ, ಅಣಕುಪದ, ಪಾಡ್ದನಗಳ ಪದ ಪಾಕವೇ ಹರಿಯಿತು. ಗೋಷ್ಠಿಗೆ ಆಗಮಿಸಿದ್ದ ಜಾನಪದ ಆರಾಧಕರು ಇದರ ಸವಿ ಸವಿದು ಖುಷಿಪಟ್ಟರು.

ಇದನ್ನು ಓದಿ : ದಸರಾ ಡ್ರೋನ್ ಶೋ: ಅನಧಿಕೃತವಾಗಿ ಡ್ರೋನ್ ವಿಡಿಯೋ ಚಿತ್ರೀಕರಣ ಮಾಡುವವರ ವಿರುದ್ಧ ಕ್ರಮ

ದಸರಾ ಮಹೋತ್ಸವ ಅಂಗವಾಗಿ ಮಾನಸ ಗಂಗೋತ್ರಿಯ ಕನ್ನಡ ಅಧ್ಯಯನ ಸಂಸ್ಥೆಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ನಡೆಯುತ್ತಿರುವ ಪಂಚ ಕಾವ್ಯದೌತಣ ಕವಿಗೋಷ್ಠಿಯಲ್ಲಿ ನಾಲ್ಕನೇ ದಿನವಾದ ಇಂದು ಜರುಗಿದ ಪ್ರತಿಭಾ ಕವಿಗೋಷ್ಟಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ 16 ವಿವಿಧ ಜನಪದ ಕಾವ್ಯವಾಚಕರು ಹಾಗೂ ಗಾಯಕರು ಕಂಸಾಳೆ, ತಂಬೂರಿ, ತಾಳ, ಮದ್ದಳೆಗಳ ಸಂಗೀತದೊಂದಿಗೆ ಸರಸ-ಸಲ್ಲಾಪ, ಬಸುರಿ ಬಯಕೆ, ಜರಿವ ಪದ, ಒಗಟು ಪದ, ತುಳುನಾಡಿನ ದೈವ ಪದ, ಮಲೆ ಮಾದಪ್ಪ, ಬಿಳಿಗಿರಿರಂಗಪ್ಪನ ಮೇಲಿನ ಪದಗಳ ಜನಪದದ ವಿವಿಧ ಪ್ರಕಾರಗಳ ಗಾಯನಕ್ಕೆ ನೆರೆದಿದ್ದವರು ಕುಳಿತಲ್ಲೆ ತಲೆದೂಗಿದರು.

ಕಾರ್ಯಕ್ರಮದಲ್ಲಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿರುವ ಪ್ರೊ.ಡಿ.ಕೆ.ರಾಜೇಂದ್ರ, ಮುಖ್ಯ ಅತಿಥಿಗಳಾದ ಪ್ರೊ. ಶೈಲಜಾ ಹಿರೇಮಠ್, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಹಾಗೂ ಕವಿಗೋಷ್ಟಿಯ ಉಪಸಮಿತಿಯ ಕಾರ್ಯದರ್ಶಿ ಪ್ರೊ.ಎನ್.ಕೆ.ಲೋಲಾಕ್ಷಿ, ಕಾರ್ಯದರ್ಶಿಗಳಾದ ಚೇತನ್ ಕುಮಾರ್, ಅಧಿಕಾರೇತರ ಸಮಿತಿಯ ಅಧ್ಯಕ್ಷರಾದ ಸುರೇಶ್, ಉಪಾಧ್ಯಕ್ಷ ರಾದ ಮನೋನ್ಮಣಿ ಹಾಗೂ ಸದಸ್ಯರು ಸೇರಿದಂತೆ ಹಲವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

5 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

5 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

5 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

5 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

5 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

5 hours ago