ನಮ್ಮ ಮೈಸೂರ ದಸರಾ 2025

ವಿಶ್ವವಿಖ್ಯಾತ ಮೈಸೂರು ದಸರಾ ಬಂದೋಬಸ್ತ್‌ಗೆ ಆಗಮಿಸಿರುವ ಪೊಲೀಸರಿಗೆ ಊಟದ ವ್ಯವಸ್ಥೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಬಂದೋಬಸ್ತ್‌ಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮೈಸೂರಿಗೆ ಆಗಮಿಸಿರುವ ಪೊಲೀಸರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕೇವಲ ಎರಡು ದಿನ ಮಾತ್ರ ಬಾಕಿಯಿದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಸಿಎಂ, ಡಿಸಿಎಂಗೆ ವಿಶೇಷ ಉಡುಗೊರೆ ರೆಡಿ

ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 6900ಕ್ಕೂ ಹೆಚ್ಚಿನ ಪೊಲೀಸರು ಆಗಮಿಸಿದ್ದು, ಇವರೆಲ್ಲರಿಗೂ ನಗರದ ಪೊಲೀಸ್‌ ಭವನದಲ್ಲಿ ಊಟ ತಯಾರಿ ಮಾಡಲಾಗುತ್ತಿದೆ.

ಅನಿಲ್ ಅಪೂರ್ವ ವೆಜ್ ಕ್ಯಾಂಟರಿನ್ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗುತ್ತಿದ್ದು, ನೂರಾರು ಅಡುಗೆ ಸಿಬ್ಬಂದಿಗಳಿಂದ ಊಟ ತಯಾರಿ ಕೆಲಸ ನಡೆಯುತ್ತಿದೆ. ಊಟದ ಗುಣಮಟ್ಟ ಕಾಪಾಡಿಕೊಂಡಿರುವ ಕ್ಯಾಟರಿಂಗ್ ಮಾಲೀಕರು, ಅಡುಗೆ ಮಾಡುವ ಸ್ಥಳದಲ್ಲೂ ಸ್ವಚ್ಛತೆ ಕಾಪಾಡಿಕೊಂಡು ಬಂದಿದ್ದಾರೆ.

ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಊಟ ಹಾಗೂ ಸಂಜೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಪೊಲೀಸ್ ಭವನದಲ್ಲೇ ಊಟ ಪ್ಯಾಕಿಂಗ್ ಮಾಡಲಾಗುತ್ತಿದೆ. ಪ್ಯಾಕಿಂಗ್ ಬಳಿಕ ಪೊಲೀಸರ ಕರ್ತವ್ಯದ ಸ್ಥಳಕ್ಕೆ ಊಟ ಸರಬರಾಜು ಆಗಲಿದೆ.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

3 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

4 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

5 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

17 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago