ನಮ್ಮ ಮೈಸೂರ ದಸರಾ 2025

ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಭರದ ಸಿದ್ಧತೆ

ಮೈಸೂರು: ನವರಾತ್ರಿ ಆರಂಭಕ್ಕೆ ಕೇವಲ ಇನ್ನೆರಡು ದಿನ ಮಾತ್ರ ಬಾಕಿಯಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಭರದ ಸಿದ್ಧತೆ ನಡೆಸಲಾಗಿದೆ.

ನವರಾತ್ರಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಅರಮನೆಯಲ್ಲಿ ದಸರಾ ಸಂಭ್ರಮ ಮೇಳೈಸಲಿದೆ. ಸೆಪ್ಟೆಂಬರ್.‌22ರಂದು ದಸರಾ ಉದ್ಘಾಟನೆಯ ದಿನದಂದು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ರತ್ನ ಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್‌ ನಡೆಸಲಿದ್ದಾರೆ.

ಈಗಾಗಲೇ ಸಿಂಹಾಸನವನ್ನು ಅರಮನೆಯ ಸ್ಟ್ರಾಂಗ್ ರೂಮ್‌ನಿಂದ ತಂದು ಕನ್ನಡಿ ತೊಟ್ಟಿಯಲ್ಲಿ ಜೋಡಣೆ ಮಾಡಲಾಗಿದ್ದು, ಸೆಪ್ಟೆಂಬರ್.‌22ರಂದು 5:30 ರಿಂದ 5:45ರ ಒಳಗೆ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಗುತ್ತದೆ. ಅದೇ ದಿನದಂದು 9:55 ರಿಂದ 10:15ರ ಒಳಗೆ ಚಾಮುಂಡಿ ತೊಟ್ಟಿಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ವಾಣಿವಿಲಾಸ ದೇವರ ಮನೆಯಲ್ಲಿ ಕಂಕಣಧಾರಣೆ ಮಾಡಲಾಗುತ್ತದೆ.

ಬೆಳಗ್ಗೆ 11:35ಕ್ಕೆ ಅರಮನೆಯ ಆವರಣದ ಕೋಡಿ ಸೋಮೇಶ್ವರ ದೇವಾಲಯದ ಬಳಿ ಪಟ್ಟದ ಆನೆ ಹಾಗೂ ಕುದುರೆ, ಹಸು ಜೊತೆ ಮಹಿಳೆಯರು ಕಳಸ ಹೊತ್ತು ಬರಲಿದ್ದು, ಮಂಗಳವಾದ್ಯದೊಂದಿಗೆ ಸವಾರಿ ತೊಟ್ಟಿಯ ಬಳಿ ಪೂಜಾ ಕೈಂಕರ್ಯಗಳು ನೆರವೇರಲಿವೆ.

ಸೆಪ್ಟೆಂಬರ್.‌23ರಿಂದ 29ರವರೆಗೆ ಖಾಸಗಿ ದರ್ಬಾರ್ ಜರುಗಲಿದ್ದು, ಸೆಪ್ಟೆಂಬರ್.29ರಂದು ಬೆಳಗ್ಗೆ 10:10ರಿಂದ 10:30ರ ಒಳಗೆ ಯದುವೀರ್‌ ಒಡೆಯರ್ ಅವರು ಸರಸ್ವತಿ ಪೂಜೆ ನೆರವೇರಿಸಲಿದ್ದಾರೆ. ಅಂದು ರಾತ್ರಿಯೇ ಖಾಸಗಿ ದರ್ಬಾರ್ ಕೊನೆಗೊಳ್ಳಲಿದೆ.

ಖಾಸಗಿ ದರ್ಬಾರ್ ಮುಗಿದ ಬಳಿಕ ಕನ್ನಡಿ ತೊಟ್ಟಿಯಲ್ಲಿ ಕಾಳರಾತ್ರಿ ಪೂಜೆ ನಡೆಯಲಿದ್ದು, ಆಯುಧ ಪೂಜೆಯ ದಿನದಂದು ಬೆಳಿಗ್ಗೆ 6 ಗಂಟೆಗೆ ಚಂಡಿ ಹೋಮ ಆರಂಭವಾಗಲಿದೆ. ಬೆಳಿಗ್ಗೆ 7:30 ರಿಂದ 7:42ರ ಒಳಗೆ ಪಟ್ಟದ ಕತ್ತಿ ಸೇರಿದಂತೆ ಖಾಸ ಆಯುಧಗಳನ್ನು ಅರಮನೆಯಿಂದ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ತಂದು ಪೂಜೆ ಸಲ್ಲಿಸಲಾಗುತ್ತದೆ.

8 ರಿಂದ 8:40ರ ಒಳಗೆ ಕತ್ತಿ ಹಾಗೂ ಖಾಸ ಆಯುಧಗಳನ್ನು ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಅಂದು ಸಂಜೆ ಯದುವೀರ್ ಒಡೆಯರ್ ಅವರು ಕಂಕಣ ವಿಸರ್ಜನೆ ಮಾಡಲಿದ್ದು, ಸೆಪ್ಟೆಂಬರ್.2ರಂದು 10 ಗಂಟೆಗೆ ವಿಜಯದಶಮಿ ಪೂಜೆ ನೆರವೇರಲಿದೆ. 10:55ರಿಂದ ವಿಜಯಯಾತ್ರೆ ಆರಂಭವಾಗಲಿದೆ. ಎಲ್ಲಾ ಪೂಜೆ ಮುಗಿದ ಬಳಿಕ ಜಂಬೂಸವಾರಿಗೆ ಚಾಲನೆ ದೊರೆಯಲಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

34 mins ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

51 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

1 hour ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

1 hour ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

1 hour ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

2 hours ago