ನಮ್ಮ ಮೈಸೂರ ದಸರಾ 2025

ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಭರದ ಸಿದ್ಧತೆ

ಮೈಸೂರು: ನವರಾತ್ರಿ ಆರಂಭಕ್ಕೆ ಕೇವಲ ಇನ್ನೆರಡು ದಿನ ಮಾತ್ರ ಬಾಕಿಯಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಭರದ ಸಿದ್ಧತೆ ನಡೆಸಲಾಗಿದೆ.

ನವರಾತ್ರಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಅರಮನೆಯಲ್ಲಿ ದಸರಾ ಸಂಭ್ರಮ ಮೇಳೈಸಲಿದೆ. ಸೆಪ್ಟೆಂಬರ್.‌22ರಂದು ದಸರಾ ಉದ್ಘಾಟನೆಯ ದಿನದಂದು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ರತ್ನ ಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್‌ ನಡೆಸಲಿದ್ದಾರೆ.

ಈಗಾಗಲೇ ಸಿಂಹಾಸನವನ್ನು ಅರಮನೆಯ ಸ್ಟ್ರಾಂಗ್ ರೂಮ್‌ನಿಂದ ತಂದು ಕನ್ನಡಿ ತೊಟ್ಟಿಯಲ್ಲಿ ಜೋಡಣೆ ಮಾಡಲಾಗಿದ್ದು, ಸೆಪ್ಟೆಂಬರ್.‌22ರಂದು 5:30 ರಿಂದ 5:45ರ ಒಳಗೆ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಗುತ್ತದೆ. ಅದೇ ದಿನದಂದು 9:55 ರಿಂದ 10:15ರ ಒಳಗೆ ಚಾಮುಂಡಿ ತೊಟ್ಟಿಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ವಾಣಿವಿಲಾಸ ದೇವರ ಮನೆಯಲ್ಲಿ ಕಂಕಣಧಾರಣೆ ಮಾಡಲಾಗುತ್ತದೆ.

ಬೆಳಗ್ಗೆ 11:35ಕ್ಕೆ ಅರಮನೆಯ ಆವರಣದ ಕೋಡಿ ಸೋಮೇಶ್ವರ ದೇವಾಲಯದ ಬಳಿ ಪಟ್ಟದ ಆನೆ ಹಾಗೂ ಕುದುರೆ, ಹಸು ಜೊತೆ ಮಹಿಳೆಯರು ಕಳಸ ಹೊತ್ತು ಬರಲಿದ್ದು, ಮಂಗಳವಾದ್ಯದೊಂದಿಗೆ ಸವಾರಿ ತೊಟ್ಟಿಯ ಬಳಿ ಪೂಜಾ ಕೈಂಕರ್ಯಗಳು ನೆರವೇರಲಿವೆ.

ಸೆಪ್ಟೆಂಬರ್.‌23ರಿಂದ 29ರವರೆಗೆ ಖಾಸಗಿ ದರ್ಬಾರ್ ಜರುಗಲಿದ್ದು, ಸೆಪ್ಟೆಂಬರ್.29ರಂದು ಬೆಳಗ್ಗೆ 10:10ರಿಂದ 10:30ರ ಒಳಗೆ ಯದುವೀರ್‌ ಒಡೆಯರ್ ಅವರು ಸರಸ್ವತಿ ಪೂಜೆ ನೆರವೇರಿಸಲಿದ್ದಾರೆ. ಅಂದು ರಾತ್ರಿಯೇ ಖಾಸಗಿ ದರ್ಬಾರ್ ಕೊನೆಗೊಳ್ಳಲಿದೆ.

ಖಾಸಗಿ ದರ್ಬಾರ್ ಮುಗಿದ ಬಳಿಕ ಕನ್ನಡಿ ತೊಟ್ಟಿಯಲ್ಲಿ ಕಾಳರಾತ್ರಿ ಪೂಜೆ ನಡೆಯಲಿದ್ದು, ಆಯುಧ ಪೂಜೆಯ ದಿನದಂದು ಬೆಳಿಗ್ಗೆ 6 ಗಂಟೆಗೆ ಚಂಡಿ ಹೋಮ ಆರಂಭವಾಗಲಿದೆ. ಬೆಳಿಗ್ಗೆ 7:30 ರಿಂದ 7:42ರ ಒಳಗೆ ಪಟ್ಟದ ಕತ್ತಿ ಸೇರಿದಂತೆ ಖಾಸ ಆಯುಧಗಳನ್ನು ಅರಮನೆಯಿಂದ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ತಂದು ಪೂಜೆ ಸಲ್ಲಿಸಲಾಗುತ್ತದೆ.

8 ರಿಂದ 8:40ರ ಒಳಗೆ ಕತ್ತಿ ಹಾಗೂ ಖಾಸ ಆಯುಧಗಳನ್ನು ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಅಂದು ಸಂಜೆ ಯದುವೀರ್ ಒಡೆಯರ್ ಅವರು ಕಂಕಣ ವಿಸರ್ಜನೆ ಮಾಡಲಿದ್ದು, ಸೆಪ್ಟೆಂಬರ್.2ರಂದು 10 ಗಂಟೆಗೆ ವಿಜಯದಶಮಿ ಪೂಜೆ ನೆರವೇರಲಿದೆ. 10:55ರಿಂದ ವಿಜಯಯಾತ್ರೆ ಆರಂಭವಾಗಲಿದೆ. ಎಲ್ಲಾ ಪೂಜೆ ಮುಗಿದ ಬಳಿಕ ಜಂಬೂಸವಾರಿಗೆ ಚಾಲನೆ ದೊರೆಯಲಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

9 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

34 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

1 hour ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

2 hours ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago