ಮೈಸೂರು: ನವರಾತ್ರಿ ಆರಂಭಕ್ಕೆ ಕೇವಲ ಇನ್ನೆರಡು ದಿನ ಮಾತ್ರ ಬಾಕಿಯಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ಗೆ ಭರದ ಸಿದ್ಧತೆ ನಡೆಸಲಾಗಿದೆ.
ನವರಾತ್ರಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಅರಮನೆಯಲ್ಲಿ ದಸರಾ ಸಂಭ್ರಮ ಮೇಳೈಸಲಿದೆ. ಸೆಪ್ಟೆಂಬರ್.22ರಂದು ದಸರಾ ಉದ್ಘಾಟನೆಯ ದಿನದಂದು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರತ್ನ ಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.
ಈಗಾಗಲೇ ಸಿಂಹಾಸನವನ್ನು ಅರಮನೆಯ ಸ್ಟ್ರಾಂಗ್ ರೂಮ್ನಿಂದ ತಂದು ಕನ್ನಡಿ ತೊಟ್ಟಿಯಲ್ಲಿ ಜೋಡಣೆ ಮಾಡಲಾಗಿದ್ದು, ಸೆಪ್ಟೆಂಬರ್.22ರಂದು 5:30 ರಿಂದ 5:45ರ ಒಳಗೆ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಗುತ್ತದೆ. ಅದೇ ದಿನದಂದು 9:55 ರಿಂದ 10:15ರ ಒಳಗೆ ಚಾಮುಂಡಿ ತೊಟ್ಟಿಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ವಾಣಿವಿಲಾಸ ದೇವರ ಮನೆಯಲ್ಲಿ ಕಂಕಣಧಾರಣೆ ಮಾಡಲಾಗುತ್ತದೆ.
ಬೆಳಗ್ಗೆ 11:35ಕ್ಕೆ ಅರಮನೆಯ ಆವರಣದ ಕೋಡಿ ಸೋಮೇಶ್ವರ ದೇವಾಲಯದ ಬಳಿ ಪಟ್ಟದ ಆನೆ ಹಾಗೂ ಕುದುರೆ, ಹಸು ಜೊತೆ ಮಹಿಳೆಯರು ಕಳಸ ಹೊತ್ತು ಬರಲಿದ್ದು, ಮಂಗಳವಾದ್ಯದೊಂದಿಗೆ ಸವಾರಿ ತೊಟ್ಟಿಯ ಬಳಿ ಪೂಜಾ ಕೈಂಕರ್ಯಗಳು ನೆರವೇರಲಿವೆ.
ಸೆಪ್ಟೆಂಬರ್.23ರಿಂದ 29ರವರೆಗೆ ಖಾಸಗಿ ದರ್ಬಾರ್ ಜರುಗಲಿದ್ದು, ಸೆಪ್ಟೆಂಬರ್.29ರಂದು ಬೆಳಗ್ಗೆ 10:10ರಿಂದ 10:30ರ ಒಳಗೆ ಯದುವೀರ್ ಒಡೆಯರ್ ಅವರು ಸರಸ್ವತಿ ಪೂಜೆ ನೆರವೇರಿಸಲಿದ್ದಾರೆ. ಅಂದು ರಾತ್ರಿಯೇ ಖಾಸಗಿ ದರ್ಬಾರ್ ಕೊನೆಗೊಳ್ಳಲಿದೆ.
ಖಾಸಗಿ ದರ್ಬಾರ್ ಮುಗಿದ ಬಳಿಕ ಕನ್ನಡಿ ತೊಟ್ಟಿಯಲ್ಲಿ ಕಾಳರಾತ್ರಿ ಪೂಜೆ ನಡೆಯಲಿದ್ದು, ಆಯುಧ ಪೂಜೆಯ ದಿನದಂದು ಬೆಳಿಗ್ಗೆ 6 ಗಂಟೆಗೆ ಚಂಡಿ ಹೋಮ ಆರಂಭವಾಗಲಿದೆ. ಬೆಳಿಗ್ಗೆ 7:30 ರಿಂದ 7:42ರ ಒಳಗೆ ಪಟ್ಟದ ಕತ್ತಿ ಸೇರಿದಂತೆ ಖಾಸ ಆಯುಧಗಳನ್ನು ಅರಮನೆಯಿಂದ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ತಂದು ಪೂಜೆ ಸಲ್ಲಿಸಲಾಗುತ್ತದೆ.
8 ರಿಂದ 8:40ರ ಒಳಗೆ ಕತ್ತಿ ಹಾಗೂ ಖಾಸ ಆಯುಧಗಳನ್ನು ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಅಂದು ಸಂಜೆ ಯದುವೀರ್ ಒಡೆಯರ್ ಅವರು ಕಂಕಣ ವಿಸರ್ಜನೆ ಮಾಡಲಿದ್ದು, ಸೆಪ್ಟೆಂಬರ್.2ರಂದು 10 ಗಂಟೆಗೆ ವಿಜಯದಶಮಿ ಪೂಜೆ ನೆರವೇರಲಿದೆ. 10:55ರಿಂದ ವಿಜಯಯಾತ್ರೆ ಆರಂಭವಾಗಲಿದೆ. ಎಲ್ಲಾ ಪೂಜೆ ಮುಗಿದ ಬಳಿಕ ಜಂಬೂಸವಾರಿಗೆ ಚಾಲನೆ ದೊರೆಯಲಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…