ನಮ್ಮ ಮೈಸೂರ ದಸರಾ 2025

ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಭರದ ಸಿದ್ಧತೆ

ಮೈಸೂರು: ನವರಾತ್ರಿ ಆರಂಭಕ್ಕೆ ಕೇವಲ ಇನ್ನೆರಡು ದಿನ ಮಾತ್ರ ಬಾಕಿಯಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಭರದ ಸಿದ್ಧತೆ ನಡೆಸಲಾಗಿದೆ.

ನವರಾತ್ರಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಅರಮನೆಯಲ್ಲಿ ದಸರಾ ಸಂಭ್ರಮ ಮೇಳೈಸಲಿದೆ. ಸೆಪ್ಟೆಂಬರ್.‌22ರಂದು ದಸರಾ ಉದ್ಘಾಟನೆಯ ದಿನದಂದು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ರತ್ನ ಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್‌ ನಡೆಸಲಿದ್ದಾರೆ.

ಈಗಾಗಲೇ ಸಿಂಹಾಸನವನ್ನು ಅರಮನೆಯ ಸ್ಟ್ರಾಂಗ್ ರೂಮ್‌ನಿಂದ ತಂದು ಕನ್ನಡಿ ತೊಟ್ಟಿಯಲ್ಲಿ ಜೋಡಣೆ ಮಾಡಲಾಗಿದ್ದು, ಸೆಪ್ಟೆಂಬರ್.‌22ರಂದು 5:30 ರಿಂದ 5:45ರ ಒಳಗೆ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಗುತ್ತದೆ. ಅದೇ ದಿನದಂದು 9:55 ರಿಂದ 10:15ರ ಒಳಗೆ ಚಾಮುಂಡಿ ತೊಟ್ಟಿಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ವಾಣಿವಿಲಾಸ ದೇವರ ಮನೆಯಲ್ಲಿ ಕಂಕಣಧಾರಣೆ ಮಾಡಲಾಗುತ್ತದೆ.

ಬೆಳಗ್ಗೆ 11:35ಕ್ಕೆ ಅರಮನೆಯ ಆವರಣದ ಕೋಡಿ ಸೋಮೇಶ್ವರ ದೇವಾಲಯದ ಬಳಿ ಪಟ್ಟದ ಆನೆ ಹಾಗೂ ಕುದುರೆ, ಹಸು ಜೊತೆ ಮಹಿಳೆಯರು ಕಳಸ ಹೊತ್ತು ಬರಲಿದ್ದು, ಮಂಗಳವಾದ್ಯದೊಂದಿಗೆ ಸವಾರಿ ತೊಟ್ಟಿಯ ಬಳಿ ಪೂಜಾ ಕೈಂಕರ್ಯಗಳು ನೆರವೇರಲಿವೆ.

ಸೆಪ್ಟೆಂಬರ್.‌23ರಿಂದ 29ರವರೆಗೆ ಖಾಸಗಿ ದರ್ಬಾರ್ ಜರುಗಲಿದ್ದು, ಸೆಪ್ಟೆಂಬರ್.29ರಂದು ಬೆಳಗ್ಗೆ 10:10ರಿಂದ 10:30ರ ಒಳಗೆ ಯದುವೀರ್‌ ಒಡೆಯರ್ ಅವರು ಸರಸ್ವತಿ ಪೂಜೆ ನೆರವೇರಿಸಲಿದ್ದಾರೆ. ಅಂದು ರಾತ್ರಿಯೇ ಖಾಸಗಿ ದರ್ಬಾರ್ ಕೊನೆಗೊಳ್ಳಲಿದೆ.

ಖಾಸಗಿ ದರ್ಬಾರ್ ಮುಗಿದ ಬಳಿಕ ಕನ್ನಡಿ ತೊಟ್ಟಿಯಲ್ಲಿ ಕಾಳರಾತ್ರಿ ಪೂಜೆ ನಡೆಯಲಿದ್ದು, ಆಯುಧ ಪೂಜೆಯ ದಿನದಂದು ಬೆಳಿಗ್ಗೆ 6 ಗಂಟೆಗೆ ಚಂಡಿ ಹೋಮ ಆರಂಭವಾಗಲಿದೆ. ಬೆಳಿಗ್ಗೆ 7:30 ರಿಂದ 7:42ರ ಒಳಗೆ ಪಟ್ಟದ ಕತ್ತಿ ಸೇರಿದಂತೆ ಖಾಸ ಆಯುಧಗಳನ್ನು ಅರಮನೆಯಿಂದ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ತಂದು ಪೂಜೆ ಸಲ್ಲಿಸಲಾಗುತ್ತದೆ.

8 ರಿಂದ 8:40ರ ಒಳಗೆ ಕತ್ತಿ ಹಾಗೂ ಖಾಸ ಆಯುಧಗಳನ್ನು ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಅಂದು ಸಂಜೆ ಯದುವೀರ್ ಒಡೆಯರ್ ಅವರು ಕಂಕಣ ವಿಸರ್ಜನೆ ಮಾಡಲಿದ್ದು, ಸೆಪ್ಟೆಂಬರ್.2ರಂದು 10 ಗಂಟೆಗೆ ವಿಜಯದಶಮಿ ಪೂಜೆ ನೆರವೇರಲಿದೆ. 10:55ರಿಂದ ವಿಜಯಯಾತ್ರೆ ಆರಂಭವಾಗಲಿದೆ. ಎಲ್ಲಾ ಪೂಜೆ ಮುಗಿದ ಬಳಿಕ ಜಂಬೂಸವಾರಿಗೆ ಚಾಲನೆ ದೊರೆಯಲಿದೆ.

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

9 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

10 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

11 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

12 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

12 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

14 hours ago