ನಮ್ಮ ಮೈಸೂರ ದಸರಾ 2025

ಕವಿ ವಿಶ್ವಮಾನವ ಪ್ರಜ್ಞೆ ಹೊಂದಲಿ : ನಾಡಗೀತೆಗೆ ನೂರರ ಸಂಭ್ರಮದಲ್ಲಿ ಪ್ರೊ.ಅರವಿಂದ ಮಾಲಗತ್ತಿ ಸಲಹೆ

ಮೈಸೂರು : ದಸರೆಯ ಅಂಗವಾಗಿ ನಡೆಯುವ ಕವಿಗೋಷ್ಠಿಯು ವಿಶ್ವವಿಖ್ಯಾತ ಎನ್ನುವ ವಾಡಿಕೆ ಉಂಟು. ಆದರೆ, ಅದು ವಿಶ್ವಮಾನ್ಯವಾಗಬೇಕಾದರೇ ವಿಶ್ವದ ಕವಿಗಳನ್ನು ಗೋಷ್ಠಿಗೆ ಆಹ್ವಾನಿಸಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಅಭಿಪ್ರಾಯಪಟ್ಟರು.

ನಗರದ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಮೈಸೂರು ದಸರಾ ಕವಿಗೋಷ್ಠಿ ಉಪ ಸಮಿತಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ‘ನಾಡಗೀತೆಗೆ ನೂರರ ಸಂಭ್ರಮ-ಸಾವಿರಾರು ಸ್ವರಗಳ ಸಂಗಮ ಮತ್ತು ಪಂಚಕಾವ್ಯದೌತಣ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದಸರೆ ಕವಿಗೋಷ್ಠಿಯಲ್ಲಿ ಈಗ ಹಮ್ಮಿಕೊಂಡಿರುವ ಪಂಚ ಕವಿಗೋಷ್ಠಿಗಳೂ ಕೂಡ ಬಹಳ ಉತ್ತಮವಾದ ಗೋಷ್ಠಿಗಳೇ. ಆದರೆ ದಸರೆಯ ವಿಖ್ಯಾತಿ ವಿಶ್ವಮಟ್ಟಕ್ಕೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ತಲುಪಬೇಕು. ಅದಕ್ಕಾಗಿ ಪ್ರತಿವರ್ಷ ವಿಶ್ವ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿರುವ ಬೇರೆ-ಬೇರೆ ದೇಶಗಳ, ನಮ್ಮ ದೇಶದ ಸುಮಾರು ಏಳೆಂಟು ಮಂದಿಯನ್ನು ಆಹ್ವಾನಿಸಿ ಕವಿಗೋಷ್ಠಿಯಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ:- ಬೌದ್ಧರುದ್ಯಾನ ಪದ ಸೇರಿಸಿ ನಾಡಗೀತೆ ಪೂರ್ಣಗೊಳಿಸಿ : ಪ್ರೊ.ಅರವಿಂದ ಮಾಲಗತ್ತಿ

ಸರ್ಕಾರದಿಂದ ನಾಡಗೀತೆ ನೂರರ ಸಂಭ್ರಮ ಆಯೋಜಿಸಿ
ರಾಷ್ಟ್ರಕವಿ ಕುವೆಂಪು ಅವರ ಜನ್ಮಶತಮಾನೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಅವರು ರಚಿಸಿರುವ ಗೀತೆಯನ್ನು ಅಧಿಕೃತ ನಾಡಗೀತೆಯಾಗಿ ಘೋಷಣೆ ಮಾಡಿದೆ. ನಾಡಗೀತೆಗೆ ನೂರು ವರ್ಷಗಳು ತುಂಬಿರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ ಮತ್ತು ಮುಖ್ಯಮಂತ್ರಿಗಳು ಚರ್ಚಿಸಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ದಸರಾ ಕವಿಗೋಷ್ಠಿಯಲ್ಲಿ ವಿಶ್ವದ ಕವಿಗಳನ್ನು ಆಹ್ವಾನಿಸುವ ವಿಚಾರವಾಗಿ ನಿರ್ಧಾರ ತಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಯುವ ಸಮುದಾಯದ ಕವಿ ಮನಸ್ಸು
ಈಗ ಕವಿಗಳ ಕಾಲವಲ್ಲ. ಕುಣಿಯುವ ಕಾಲ. ಕವಿಗಳ ಹಾಡಿಗೆ, ಗಾಯನಕ್ಕೆ ಯುವ ಸಮೂಹ ಡ್ಯಾನ್ಸ್ ಮಾಡುವುದನ್ನು ನೋಡಿದರೆ ಅವರಿಗೆಲ್ಲ ಕವಿ ಮನಸ್ಸು ಇದೇ ಎನ್ನುವುದು ಗೊತ್ತಾಗಲಿದೆ. ಆದರೆ ಅವರು ಮನಸ್ಸು ಮಾಡುತ್ತಿಲ್ಲ. ಕವಿ ಮತ್ತು ಕಲಾವಿದರಾಗಲು ಯುವ ಮನಸ್ಸುಗಳು ಮನಸ್ಸು ಮಾಡಬೇಕು. ರೀಲ್ಸ್‌ಗಳ ರೀಲು ಬಿಡುವುದನ್ನು ಬಿಟ್ಟು ಮಾತುಗಳನ್ನು ಅಭಿವ್ಯಕ್ತಿಗೊಳಿಸಿ, ದಾಖಲು ಮಾಡಬೇಕು. ಬೇರೆ-ಬೇರೆ ಹಾಡುಗಳಿಗೆ ಕುಣಿಯುವುದು-ಧ್ವನಿಯಾಗುವುದನ್ನು ಬಿಟ್ಟು ನಿಮ್ಮ ಹಾಡಿಗೆ ನೀವೇ ಧ್ವನಿಯಾಗಬೇಕು. ನೀವೇ ಕುಣಿಯುಂತೆ ಆಗಬೇಕು ಎಂದು ಮಾಲಗತ್ತಿ ಆಶಯ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮಾತನಾಡಿ, ಯುವ ಸಮೂಹವು ಮೊಬೈಲ್ ಬಳಕೆ ಕಡಿಮೆ ಮಾಡಿ, ಆ ಸಮಯದಲ್ಲಿ ಉತ್ತಮ ಪುಸ್ತಕಗಳು, ಗ್ರಂಥಗಳನ್ನು ಓದಬೇಕು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇರುವ ಹಳೇ ತಾಳೆಗರಿಗಳ ವಿಷಯಗಳನ್ನು ಡಿಜಿಟಲೀಕರಣ ಮಾಡಲು ಸರ್ಕಾರವು ಒಂದು ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆಗೊಳಿಸಿದೆ ಎಂದು ತಿಳಿಸಿದರು.

ಶಾಸಕ ಕೆ.ಹರೀಶ್‌ಗೌಡ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಟಿ.ಎಸ್.ಶ್ರೀವತ್ಸ, ಜಿ.ಟಿ.ದೇವೇಗೌಡ, ಡಿ.ರವಿಶಂಕರ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್, ಜಿಲ್ಲಾಽಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಕವಿಗೋಷ್ಠಿ ಉಪ ಸಮಿತಿ ವಿಶೇಷಾಧಿಕಾರಿ ಜಿ.ಎಸ್. ಸೋಮಶೇಖರ್,ಕಾರ್ಯಾಧ್ಯಕ್ಷೆ ಪ್ರೊ.ಎನ್.ಕೆ.ಲೋಲಾಕ್ಷಿ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

37 mins ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

42 mins ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

44 mins ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

46 mins ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

48 mins ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

13 hours ago