ನಮ್ಮ ಮೈಸೂರ ದಸರಾ 2025

ಕವಿ ವಿಶ್ವಮಾನವ ಪ್ರಜ್ಞೆ ಹೊಂದಲಿ : ನಾಡಗೀತೆಗೆ ನೂರರ ಸಂಭ್ರಮದಲ್ಲಿ ಪ್ರೊ.ಅರವಿಂದ ಮಾಲಗತ್ತಿ ಸಲಹೆ

ಮೈಸೂರು : ದಸರೆಯ ಅಂಗವಾಗಿ ನಡೆಯುವ ಕವಿಗೋಷ್ಠಿಯು ವಿಶ್ವವಿಖ್ಯಾತ ಎನ್ನುವ ವಾಡಿಕೆ ಉಂಟು. ಆದರೆ, ಅದು ವಿಶ್ವಮಾನ್ಯವಾಗಬೇಕಾದರೇ ವಿಶ್ವದ ಕವಿಗಳನ್ನು ಗೋಷ್ಠಿಗೆ ಆಹ್ವಾನಿಸಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಅಭಿಪ್ರಾಯಪಟ್ಟರು.

ನಗರದ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಮೈಸೂರು ದಸರಾ ಕವಿಗೋಷ್ಠಿ ಉಪ ಸಮಿತಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ‘ನಾಡಗೀತೆಗೆ ನೂರರ ಸಂಭ್ರಮ-ಸಾವಿರಾರು ಸ್ವರಗಳ ಸಂಗಮ ಮತ್ತು ಪಂಚಕಾವ್ಯದೌತಣ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದಸರೆ ಕವಿಗೋಷ್ಠಿಯಲ್ಲಿ ಈಗ ಹಮ್ಮಿಕೊಂಡಿರುವ ಪಂಚ ಕವಿಗೋಷ್ಠಿಗಳೂ ಕೂಡ ಬಹಳ ಉತ್ತಮವಾದ ಗೋಷ್ಠಿಗಳೇ. ಆದರೆ ದಸರೆಯ ವಿಖ್ಯಾತಿ ವಿಶ್ವಮಟ್ಟಕ್ಕೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ತಲುಪಬೇಕು. ಅದಕ್ಕಾಗಿ ಪ್ರತಿವರ್ಷ ವಿಶ್ವ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿರುವ ಬೇರೆ-ಬೇರೆ ದೇಶಗಳ, ನಮ್ಮ ದೇಶದ ಸುಮಾರು ಏಳೆಂಟು ಮಂದಿಯನ್ನು ಆಹ್ವಾನಿಸಿ ಕವಿಗೋಷ್ಠಿಯಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ:- ಬೌದ್ಧರುದ್ಯಾನ ಪದ ಸೇರಿಸಿ ನಾಡಗೀತೆ ಪೂರ್ಣಗೊಳಿಸಿ : ಪ್ರೊ.ಅರವಿಂದ ಮಾಲಗತ್ತಿ

ಸರ್ಕಾರದಿಂದ ನಾಡಗೀತೆ ನೂರರ ಸಂಭ್ರಮ ಆಯೋಜಿಸಿ
ರಾಷ್ಟ್ರಕವಿ ಕುವೆಂಪು ಅವರ ಜನ್ಮಶತಮಾನೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಅವರು ರಚಿಸಿರುವ ಗೀತೆಯನ್ನು ಅಧಿಕೃತ ನಾಡಗೀತೆಯಾಗಿ ಘೋಷಣೆ ಮಾಡಿದೆ. ನಾಡಗೀತೆಗೆ ನೂರು ವರ್ಷಗಳು ತುಂಬಿರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ ಮತ್ತು ಮುಖ್ಯಮಂತ್ರಿಗಳು ಚರ್ಚಿಸಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ದಸರಾ ಕವಿಗೋಷ್ಠಿಯಲ್ಲಿ ವಿಶ್ವದ ಕವಿಗಳನ್ನು ಆಹ್ವಾನಿಸುವ ವಿಚಾರವಾಗಿ ನಿರ್ಧಾರ ತಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಯುವ ಸಮುದಾಯದ ಕವಿ ಮನಸ್ಸು
ಈಗ ಕವಿಗಳ ಕಾಲವಲ್ಲ. ಕುಣಿಯುವ ಕಾಲ. ಕವಿಗಳ ಹಾಡಿಗೆ, ಗಾಯನಕ್ಕೆ ಯುವ ಸಮೂಹ ಡ್ಯಾನ್ಸ್ ಮಾಡುವುದನ್ನು ನೋಡಿದರೆ ಅವರಿಗೆಲ್ಲ ಕವಿ ಮನಸ್ಸು ಇದೇ ಎನ್ನುವುದು ಗೊತ್ತಾಗಲಿದೆ. ಆದರೆ ಅವರು ಮನಸ್ಸು ಮಾಡುತ್ತಿಲ್ಲ. ಕವಿ ಮತ್ತು ಕಲಾವಿದರಾಗಲು ಯುವ ಮನಸ್ಸುಗಳು ಮನಸ್ಸು ಮಾಡಬೇಕು. ರೀಲ್ಸ್‌ಗಳ ರೀಲು ಬಿಡುವುದನ್ನು ಬಿಟ್ಟು ಮಾತುಗಳನ್ನು ಅಭಿವ್ಯಕ್ತಿಗೊಳಿಸಿ, ದಾಖಲು ಮಾಡಬೇಕು. ಬೇರೆ-ಬೇರೆ ಹಾಡುಗಳಿಗೆ ಕುಣಿಯುವುದು-ಧ್ವನಿಯಾಗುವುದನ್ನು ಬಿಟ್ಟು ನಿಮ್ಮ ಹಾಡಿಗೆ ನೀವೇ ಧ್ವನಿಯಾಗಬೇಕು. ನೀವೇ ಕುಣಿಯುಂತೆ ಆಗಬೇಕು ಎಂದು ಮಾಲಗತ್ತಿ ಆಶಯ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮಾತನಾಡಿ, ಯುವ ಸಮೂಹವು ಮೊಬೈಲ್ ಬಳಕೆ ಕಡಿಮೆ ಮಾಡಿ, ಆ ಸಮಯದಲ್ಲಿ ಉತ್ತಮ ಪುಸ್ತಕಗಳು, ಗ್ರಂಥಗಳನ್ನು ಓದಬೇಕು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇರುವ ಹಳೇ ತಾಳೆಗರಿಗಳ ವಿಷಯಗಳನ್ನು ಡಿಜಿಟಲೀಕರಣ ಮಾಡಲು ಸರ್ಕಾರವು ಒಂದು ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆಗೊಳಿಸಿದೆ ಎಂದು ತಿಳಿಸಿದರು.

ಶಾಸಕ ಕೆ.ಹರೀಶ್‌ಗೌಡ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಟಿ.ಎಸ್.ಶ್ರೀವತ್ಸ, ಜಿ.ಟಿ.ದೇವೇಗೌಡ, ಡಿ.ರವಿಶಂಕರ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್, ಜಿಲ್ಲಾಽಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಕವಿಗೋಷ್ಠಿ ಉಪ ಸಮಿತಿ ವಿಶೇಷಾಧಿಕಾರಿ ಜಿ.ಎಸ್. ಸೋಮಶೇಖರ್,ಕಾರ್ಯಾಧ್ಯಕ್ಷೆ ಪ್ರೊ.ಎನ್.ಕೆ.ಲೋಲಾಕ್ಷಿ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

3 mins ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

22 mins ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

60 mins ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

1 hour ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

2 hours ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

2 hours ago