ನಮ್ಮ ಮೈಸೂರ ದಸರಾ 2025

ಕವಿ ವಿಶ್ವಮಾನವ ಪ್ರಜ್ಞೆ ಹೊಂದಲಿ : ನಾಡಗೀತೆಗೆ ನೂರರ ಸಂಭ್ರಮದಲ್ಲಿ ಪ್ರೊ.ಅರವಿಂದ ಮಾಲಗತ್ತಿ ಸಲಹೆ

ಮೈಸೂರು : ದಸರೆಯ ಅಂಗವಾಗಿ ನಡೆಯುವ ಕವಿಗೋಷ್ಠಿಯು ವಿಶ್ವವಿಖ್ಯಾತ ಎನ್ನುವ ವಾಡಿಕೆ ಉಂಟು. ಆದರೆ, ಅದು ವಿಶ್ವಮಾನ್ಯವಾಗಬೇಕಾದರೇ ವಿಶ್ವದ ಕವಿಗಳನ್ನು ಗೋಷ್ಠಿಗೆ ಆಹ್ವಾನಿಸಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಅಭಿಪ್ರಾಯಪಟ್ಟರು.

ನಗರದ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಮೈಸೂರು ದಸರಾ ಕವಿಗೋಷ್ಠಿ ಉಪ ಸಮಿತಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ‘ನಾಡಗೀತೆಗೆ ನೂರರ ಸಂಭ್ರಮ-ಸಾವಿರಾರು ಸ್ವರಗಳ ಸಂಗಮ ಮತ್ತು ಪಂಚಕಾವ್ಯದೌತಣ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದಸರೆ ಕವಿಗೋಷ್ಠಿಯಲ್ಲಿ ಈಗ ಹಮ್ಮಿಕೊಂಡಿರುವ ಪಂಚ ಕವಿಗೋಷ್ಠಿಗಳೂ ಕೂಡ ಬಹಳ ಉತ್ತಮವಾದ ಗೋಷ್ಠಿಗಳೇ. ಆದರೆ ದಸರೆಯ ವಿಖ್ಯಾತಿ ವಿಶ್ವಮಟ್ಟಕ್ಕೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ತಲುಪಬೇಕು. ಅದಕ್ಕಾಗಿ ಪ್ರತಿವರ್ಷ ವಿಶ್ವ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿರುವ ಬೇರೆ-ಬೇರೆ ದೇಶಗಳ, ನಮ್ಮ ದೇಶದ ಸುಮಾರು ಏಳೆಂಟು ಮಂದಿಯನ್ನು ಆಹ್ವಾನಿಸಿ ಕವಿಗೋಷ್ಠಿಯಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ:- ಬೌದ್ಧರುದ್ಯಾನ ಪದ ಸೇರಿಸಿ ನಾಡಗೀತೆ ಪೂರ್ಣಗೊಳಿಸಿ : ಪ್ರೊ.ಅರವಿಂದ ಮಾಲಗತ್ತಿ

ಸರ್ಕಾರದಿಂದ ನಾಡಗೀತೆ ನೂರರ ಸಂಭ್ರಮ ಆಯೋಜಿಸಿ
ರಾಷ್ಟ್ರಕವಿ ಕುವೆಂಪು ಅವರ ಜನ್ಮಶತಮಾನೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಅವರು ರಚಿಸಿರುವ ಗೀತೆಯನ್ನು ಅಧಿಕೃತ ನಾಡಗೀತೆಯಾಗಿ ಘೋಷಣೆ ಮಾಡಿದೆ. ನಾಡಗೀತೆಗೆ ನೂರು ವರ್ಷಗಳು ತುಂಬಿರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ ಮತ್ತು ಮುಖ್ಯಮಂತ್ರಿಗಳು ಚರ್ಚಿಸಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ದಸರಾ ಕವಿಗೋಷ್ಠಿಯಲ್ಲಿ ವಿಶ್ವದ ಕವಿಗಳನ್ನು ಆಹ್ವಾನಿಸುವ ವಿಚಾರವಾಗಿ ನಿರ್ಧಾರ ತಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಯುವ ಸಮುದಾಯದ ಕವಿ ಮನಸ್ಸು
ಈಗ ಕವಿಗಳ ಕಾಲವಲ್ಲ. ಕುಣಿಯುವ ಕಾಲ. ಕವಿಗಳ ಹಾಡಿಗೆ, ಗಾಯನಕ್ಕೆ ಯುವ ಸಮೂಹ ಡ್ಯಾನ್ಸ್ ಮಾಡುವುದನ್ನು ನೋಡಿದರೆ ಅವರಿಗೆಲ್ಲ ಕವಿ ಮನಸ್ಸು ಇದೇ ಎನ್ನುವುದು ಗೊತ್ತಾಗಲಿದೆ. ಆದರೆ ಅವರು ಮನಸ್ಸು ಮಾಡುತ್ತಿಲ್ಲ. ಕವಿ ಮತ್ತು ಕಲಾವಿದರಾಗಲು ಯುವ ಮನಸ್ಸುಗಳು ಮನಸ್ಸು ಮಾಡಬೇಕು. ರೀಲ್ಸ್‌ಗಳ ರೀಲು ಬಿಡುವುದನ್ನು ಬಿಟ್ಟು ಮಾತುಗಳನ್ನು ಅಭಿವ್ಯಕ್ತಿಗೊಳಿಸಿ, ದಾಖಲು ಮಾಡಬೇಕು. ಬೇರೆ-ಬೇರೆ ಹಾಡುಗಳಿಗೆ ಕುಣಿಯುವುದು-ಧ್ವನಿಯಾಗುವುದನ್ನು ಬಿಟ್ಟು ನಿಮ್ಮ ಹಾಡಿಗೆ ನೀವೇ ಧ್ವನಿಯಾಗಬೇಕು. ನೀವೇ ಕುಣಿಯುಂತೆ ಆಗಬೇಕು ಎಂದು ಮಾಲಗತ್ತಿ ಆಶಯ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮಾತನಾಡಿ, ಯುವ ಸಮೂಹವು ಮೊಬೈಲ್ ಬಳಕೆ ಕಡಿಮೆ ಮಾಡಿ, ಆ ಸಮಯದಲ್ಲಿ ಉತ್ತಮ ಪುಸ್ತಕಗಳು, ಗ್ರಂಥಗಳನ್ನು ಓದಬೇಕು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇರುವ ಹಳೇ ತಾಳೆಗರಿಗಳ ವಿಷಯಗಳನ್ನು ಡಿಜಿಟಲೀಕರಣ ಮಾಡಲು ಸರ್ಕಾರವು ಒಂದು ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆಗೊಳಿಸಿದೆ ಎಂದು ತಿಳಿಸಿದರು.

ಶಾಸಕ ಕೆ.ಹರೀಶ್‌ಗೌಡ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಟಿ.ಎಸ್.ಶ್ರೀವತ್ಸ, ಜಿ.ಟಿ.ದೇವೇಗೌಡ, ಡಿ.ರವಿಶಂಕರ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್, ಜಿಲ್ಲಾಽಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಕವಿಗೋಷ್ಠಿ ಉಪ ಸಮಿತಿ ವಿಶೇಷಾಧಿಕಾರಿ ಜಿ.ಎಸ್. ಸೋಮಶೇಖರ್,ಕಾರ್ಯಾಧ್ಯಕ್ಷೆ ಪ್ರೊ.ಎನ್.ಕೆ.ಲೋಲಾಕ್ಷಿ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

2 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

3 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

4 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

5 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

10 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

12 hours ago