ಮೈಸೂರು : ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ದಸರಾ ಮಹೋತ್ಸವದ ಅಂಗವಾಗಿ ಉತ್ತನಹಳ್ಳಿ ಸಮೀಪದಲ್ಲಿ ಸೆ.23 ರಿಂದ ಜರುಗಲಿರುವ ಯುವದಸರಾ ಕಾರ್ಯಕ್ರಮದ ಸ್ಥಳವನ್ನು ಇಂದು ಪರಿಶೀಲನೆ ಮಾಡಿದರು.
ಕಾರ್ಯಕ್ರಮದ ಆಯೋಜನೆಯ ರೂಪುರೇಷೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಕಳೆದ ಬಾರಿಯಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಅತೀ ಹೆಚ್ಚು ಜನರು ಸೇರುವ ಯುವ ದಸರಾದಲ್ಲಿ ಯಾವುದೇ ಅನಾನುಕೂಲವಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಯುವದಸರಾ ಕಾರ್ಯಕ್ರಮ ವೀಕ್ಷಣೆಗೆಂದು ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯವನ್ನು ಕಲ್ಪಿಸಬೇಕು ಎಂದು ತಿಳಿಸಿದರು.
ಯುವ ದಸರಾಗೆ ಸಹಸ್ರಾರು ಸಂಖ್ಯೆಯಲ್ಲಿ ಯುವಸಮೂಹ ಆಗಮಿಸಿ ಸಂಭ್ರಮಿಸುತ್ತಾರೆ. ಬಹುಮುಖ್ಯವಾಗಿ ಮಹಿಳೆಯರು ಹೆಚ್ಚಿನ ಭದ್ರತೆ ಒದಗಿಸಬೇಕು. ರಾತ್ರಿ ವೇಳೆ ಕಾರ್ಯಕ್ರಮ ನಡೆಯುವುದರಿಂದ ಎಲ್ಲಾ ಬಗೆಯ ಕ್ರಮ ಅನುಸರಿಸಬೇಕು. ಬೀದಿದೀಪದ ವ್ಯವಸ್ಥೆ, ವಾಹನ ನಿಲುಗಡೆಗೆ ಪಾರ್ಕಿಂಗ್ ಸ್ಥಳ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಿ ಮಾರ್ಗದರ್ಶನ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ.ಆರ್.ರಕ್ಷಿತ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…