ನಮ್ಮ ಮೈಸೂರ ದಸರಾ 2025

ಜಂಬೂಸವಾರಿ ವೀಕ್ಷಿಸಲು ಬಂದಿದ್ದ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಜಂಬೂಸವಾರಿ ಮೆರವಣಿಗೆ ವೀಕ್ಷಿಸುವ ಸಲುವಾಗಿ ವಿವಿಧ ಕಡೆಗಳಿಂದ ಆಗಮಿಸಿದ್ದವರಲ್ಲಿ ಹಸಿವಿನಿಂದ ಬಳಲಿ ಸುಸ್ತಾಗಿ ಅಸ್ವಸ್ಥಗೊಂಡಿದ್ದ ಕೆಲವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲಾಯಿತು.

ಇದನ್ನು ಓದಿ : Mysuru Dasara | ರೋಮಾಂಚಕ ಜಂಬೂ ಸವಾರಿ, ಸಂಭ್ರಮಿಸಿದ ಲಕ್ಷಾಂತರ ಜನ..

ನ್ಯೂ ಸಯ್ಯಾಜಿರಾವ್ ರಸ್ತೆಯ ಗುರುಸ್ವೀಟ್ಸ್, ಬಾಟಾ ಶೋರೂಂ, ಆಯುರ್ವೇದ ಆಸ್ಪತ್ರೆ ವೃತ್ತ, ಕೆ.ಆರ್.ವೃತ್ತ, ಬಂಬೂಬಜಾರ್ ಮಾರ್ಗದಲ್ಲಿ ಲಕ್ಷಾಂತರ ಜನರು ಜಂಬೂ ಸವಾರಿ ವೀಕ್ಷಿಸಲು ಕುಳಿತಿದ್ದರು. ಸ್ಥಳ ಅಭಾವ ಉಂಟಾಗಬಹುದೆಂಬ ಹಿನ್ನೆಲೆಯಲ್ಲಿ ಬಹಳ ಮುಂಚಿತವಾಗಿಯೇ ಆಗಮಿಸಿದ್ದರಿಂದ ಕೆಲವರು ಹಸಿವು ತಾಳಲಾರದೆ ಸುಸ್ತಾಗಿ ಬಳಲಿದ್ದರು. ಅಕ್ಕಪಕ್ಕದವರು ಸಂಬಂಧಿಸಿದವರಿಗೆ ವಿಚಾರ ಮುಟ್ಟಿಸಿದರು. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಆಂಬುಲೆನ್ಸ್ ಮೂಲಕ ಅವರನ್ನು ಸಕಾಲದಲ್ಲಿ ಕೆ.ಆರ್.ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಸುರಕ್ಷಿತವಾಗಿ ಮನೆಗೆ ಕಳುಹಿಸಿಕೊಟ್ಟರು.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

2 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

2 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

2 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

2 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

2 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

3 hours ago