ನಮ್ಮ ಮೈಸೂರ ದಸರಾ 2025

ಜಂಬೂಸವಾರಿ ವೀಕ್ಷಿಸಲು ಬಂದಿದ್ದ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಜಂಬೂಸವಾರಿ ಮೆರವಣಿಗೆ ವೀಕ್ಷಿಸುವ ಸಲುವಾಗಿ ವಿವಿಧ ಕಡೆಗಳಿಂದ ಆಗಮಿಸಿದ್ದವರಲ್ಲಿ ಹಸಿವಿನಿಂದ ಬಳಲಿ ಸುಸ್ತಾಗಿ ಅಸ್ವಸ್ಥಗೊಂಡಿದ್ದ ಕೆಲವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲಾಯಿತು.

ಇದನ್ನು ಓದಿ : Mysuru Dasara | ರೋಮಾಂಚಕ ಜಂಬೂ ಸವಾರಿ, ಸಂಭ್ರಮಿಸಿದ ಲಕ್ಷಾಂತರ ಜನ..

ನ್ಯೂ ಸಯ್ಯಾಜಿರಾವ್ ರಸ್ತೆಯ ಗುರುಸ್ವೀಟ್ಸ್, ಬಾಟಾ ಶೋರೂಂ, ಆಯುರ್ವೇದ ಆಸ್ಪತ್ರೆ ವೃತ್ತ, ಕೆ.ಆರ್.ವೃತ್ತ, ಬಂಬೂಬಜಾರ್ ಮಾರ್ಗದಲ್ಲಿ ಲಕ್ಷಾಂತರ ಜನರು ಜಂಬೂ ಸವಾರಿ ವೀಕ್ಷಿಸಲು ಕುಳಿತಿದ್ದರು. ಸ್ಥಳ ಅಭಾವ ಉಂಟಾಗಬಹುದೆಂಬ ಹಿನ್ನೆಲೆಯಲ್ಲಿ ಬಹಳ ಮುಂಚಿತವಾಗಿಯೇ ಆಗಮಿಸಿದ್ದರಿಂದ ಕೆಲವರು ಹಸಿವು ತಾಳಲಾರದೆ ಸುಸ್ತಾಗಿ ಬಳಲಿದ್ದರು. ಅಕ್ಕಪಕ್ಕದವರು ಸಂಬಂಧಿಸಿದವರಿಗೆ ವಿಚಾರ ಮುಟ್ಟಿಸಿದರು. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಆಂಬುಲೆನ್ಸ್ ಮೂಲಕ ಅವರನ್ನು ಸಕಾಲದಲ್ಲಿ ಕೆ.ಆರ್.ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಸುರಕ್ಷಿತವಾಗಿ ಮನೆಗೆ ಕಳುಹಿಸಿಕೊಟ್ಟರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago