ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | 15 ದಿನಗಳ ಕಾಲ ಆಹಾರ ಮೇಳ ; ಮಳಿಗೆಗೆ ಬೇಡಿಕೆ

ಮೈಸೂರು : ದಸರಾ ಕಾರ್ಯಕ್ರಮಗಳ ರೂಪುರೇಷಗಳು ಭರದಿಂದ ಸಾಗುತ್ತಿದೆ. ಇತ್ತ ಯುವಸಂಭ್ರಮವು ಶುರುವಾಗಿದೆ. ಹೀಗೆ ದಸರೆಯ ವೈವಿಧ್ಯಮಯ ಕಾರ್ಯಕ್ರಮ, ಅರಮನೆಯ ಮೆರಗು, ಮೈಸೂರಿನ ರಾಜ ಬೀದಿಯ ಲೈಟಿಂಗ್ಸ್‌ ನೋಡಿ ಕಣ್ತುಂಬಿಕೊಳ್ಳಲು ನಗರಕ್ಕೆ ಬರುವವರಿಗೆ ಬಗೆಬಗೆಯ ಖಾದ್ಯ ಉಣಬಡಿಸುವ ದಸರಾ ಆಹಾರ ಮೇಳಕ್ಕೆ ಸಿದ್ಧತೆ ನಡೆದಿದೆ. ದಸರಾ ಉದ್ಘಾಟನೆ ದಿನವೇ ಆಹಾರ ಮೇಳ ಸಹ ಉದ್ಘಾಟನೆಯಾಗಲಿದೆ.

ಇನ್ನೂ ಈ ಬಾರಿ ವಿಶೇಷವೆನೆಂದರೇ, ಪ್ರತಿ ವರ್ಷ ಜಂಬೂಸವಾರಿ ದಿನದಂದೇ ಅಂತ್ಯಗೊಳ್ಳುತ್ತಿದ್ದ ಆಹಾರ ಮೇಳದ ಅವಧಿಯನ್ನು ಮೂರು ದಿನ ವಿಸ್ತರಿಸಲಾಗಿದೆ. ವಾರಾಂತ್ಯದ ಭಾನುವಾರದವರೆಗೂ ಮೈಸೂರಿಗೆ ಬರುವ ಪ್ರವಾಸಿಗರು ಆಹಾರ ಮೇಳದಲ್ಲಿ ತಮಗಿಷ್ಟವಾದ ಆಹಾರದ ಸವಿಯನ್ನು ಸವಿಯಬಹುದಾಗಿದೆ.

ದಸರಾ ಉದ್ಘಾಟನೆ ದಿನವಾದ ಸೆ.22 ರಿಂದ ಅ.2 ರಂದು ಜಂಬೂಸವಾರಿ ಮೆರವಣಿಗೆ ನಡೆಯುವ ದಿನದವರೆಗೂ ಆಹಾರ ಮೇಳ ನಡೆಯಬೇಕಿತ್ತು. ಆದರೆ, ಈ ಬಾರಿ ವಾರಾಂತ್ಯವೂ ಸೇರಿದಂತೆ ಅ.5 ರವರೆಗೆ ಆಹಾರ ಮೇಳ ನಡೆಸಲು ತೀರ್ಮಾನಿಸಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳ ನಡೆಯಲಿದೆ. 120 ಮಳಿಗೆಗಳನ್ನು ತೆರೆಯಲು ಕ್ರಮವಹಿಸಲಾಗಿದೆ.

ಆಹಾರ ಮೇಳದಲ್ಲಿ ಮಕ್ಕಳ ಉತ್ಸವ
ಯುವ ಸಂಭ್ರಮದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲಾಗುತ್ತದೆ. ಆದರೆ, ಶಾಲಾ ಮಕ್ಕಳಿಗೆ ಯಾವುದೇ ಅವಕಾಶವಿರಲಿಲ್ಲ. ಈ ಬಾರಿ ಶಾಲಾ ಮಕ್ಕಳಿಂದ ಆಹಾರ ಮೇಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ವಿಜೇತರಾದ ಶಾಲೆಗಳ ಮಕ್ಕಳಿಂದ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದ್ದು, ಮೈಸೂರು ಜಿಲ್ಲೆಯ ಎಲ್ಲ ತಾಲೂಕುಗಳಿಂದ ಆಯ್ಕೆಯಾದ ನಾಲ್ಕರಿಂದ ಐದು ಶಾಲೆಗಳ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿವೆ. ಶಾಲೆ ಮಕ್ಕಳೊಂದಿಗೆ ಪೋಷಕರು ಸಹ ಆಹಾರ ಮೇಳಕ್ಕೆ ಆಗಮಿಸುವುದರಿಂದ ಹೆಚ್ಚಿನ ಜನರು ಸೇರುವ ನಿರೀಕ್ಷೆಯಿದೆ, ಎನ್ನುತ್ತಾರೆ ಅಧಿಕಾರಿಗಳು.

ಮಳಿಗೆಗೆ ಬೇಡಿಕೆ
ಆಹಾರ ಮೇಳದಲ್ಲಿ ಮಳಿಗೆ ತೆರೆಯಲು ಸಾಕಷ್ಟು ಸ್ಪರ್ಧೆ ಎದುರಾಗಿದ್ದು, ಅರ್ಜಿಗಳ ಮಹಾಪೂರವೇ ಹರಿದು ಬಂದಿದೆ. ಮೇಳದಲ್ಲಿ 120 ಮಳಿಗೆಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, 250 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಉತ್ತಮವಾಗಿ ವಿಶೇಷ ಆಹಾರ ಪದಾರ್ಥಗಳನ್ನು ತಯಾರಿಸುವ ಹೋಟೆಲ್ ಅಥವಾ ವರ್ತಕರಿಗೆ ಮಳಿಗೆಗಳನ್ನು ಬಾಡಿಗೆಗೆ ನೀಡಲಾಗುವುದು ಎನ್ನುತ್ತಾರೆ ಆಹಾರ ಮೇಳದ ಅಧಿಕಾರಿಗಳು.

ಆಂದೋಲನ ಡೆಸ್ಕ್

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

42 mins ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

1 hour ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

1 hour ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

2 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

3 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

4 hours ago