ಮೈಸೂರು : ದಸರಾ ಕಾರ್ಯಕ್ರಮಗಳ ರೂಪುರೇಷಗಳು ಭರದಿಂದ ಸಾಗುತ್ತಿದೆ. ಇತ್ತ ಯುವಸಂಭ್ರಮವು ಶುರುವಾಗಿದೆ. ಹೀಗೆ ದಸರೆಯ ವೈವಿಧ್ಯಮಯ ಕಾರ್ಯಕ್ರಮ, ಅರಮನೆಯ ಮೆರಗು, ಮೈಸೂರಿನ ರಾಜ ಬೀದಿಯ ಲೈಟಿಂಗ್ಸ್ ನೋಡಿ ಕಣ್ತುಂಬಿಕೊಳ್ಳಲು ನಗರಕ್ಕೆ ಬರುವವರಿಗೆ ಬಗೆಬಗೆಯ ಖಾದ್ಯ ಉಣಬಡಿಸುವ ದಸರಾ ಆಹಾರ ಮೇಳಕ್ಕೆ ಸಿದ್ಧತೆ ನಡೆದಿದೆ. ದಸರಾ ಉದ್ಘಾಟನೆ ದಿನವೇ ಆಹಾರ ಮೇಳ ಸಹ ಉದ್ಘಾಟನೆಯಾಗಲಿದೆ.
ಇನ್ನೂ ಈ ಬಾರಿ ವಿಶೇಷವೆನೆಂದರೇ, ಪ್ರತಿ ವರ್ಷ ಜಂಬೂಸವಾರಿ ದಿನದಂದೇ ಅಂತ್ಯಗೊಳ್ಳುತ್ತಿದ್ದ ಆಹಾರ ಮೇಳದ ಅವಧಿಯನ್ನು ಮೂರು ದಿನ ವಿಸ್ತರಿಸಲಾಗಿದೆ. ವಾರಾಂತ್ಯದ ಭಾನುವಾರದವರೆಗೂ ಮೈಸೂರಿಗೆ ಬರುವ ಪ್ರವಾಸಿಗರು ಆಹಾರ ಮೇಳದಲ್ಲಿ ತಮಗಿಷ್ಟವಾದ ಆಹಾರದ ಸವಿಯನ್ನು ಸವಿಯಬಹುದಾಗಿದೆ.
ದಸರಾ ಉದ್ಘಾಟನೆ ದಿನವಾದ ಸೆ.22 ರಿಂದ ಅ.2 ರಂದು ಜಂಬೂಸವಾರಿ ಮೆರವಣಿಗೆ ನಡೆಯುವ ದಿನದವರೆಗೂ ಆಹಾರ ಮೇಳ ನಡೆಯಬೇಕಿತ್ತು. ಆದರೆ, ಈ ಬಾರಿ ವಾರಾಂತ್ಯವೂ ಸೇರಿದಂತೆ ಅ.5 ರವರೆಗೆ ಆಹಾರ ಮೇಳ ನಡೆಸಲು ತೀರ್ಮಾನಿಸಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳ ನಡೆಯಲಿದೆ. 120 ಮಳಿಗೆಗಳನ್ನು ತೆರೆಯಲು ಕ್ರಮವಹಿಸಲಾಗಿದೆ.
ಆಹಾರ ಮೇಳದಲ್ಲಿ ಮಕ್ಕಳ ಉತ್ಸವ
ಯುವ ಸಂಭ್ರಮದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲಾಗುತ್ತದೆ. ಆದರೆ, ಶಾಲಾ ಮಕ್ಕಳಿಗೆ ಯಾವುದೇ ಅವಕಾಶವಿರಲಿಲ್ಲ. ಈ ಬಾರಿ ಶಾಲಾ ಮಕ್ಕಳಿಂದ ಆಹಾರ ಮೇಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ವಿಜೇತರಾದ ಶಾಲೆಗಳ ಮಕ್ಕಳಿಂದ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದ್ದು, ಮೈಸೂರು ಜಿಲ್ಲೆಯ ಎಲ್ಲ ತಾಲೂಕುಗಳಿಂದ ಆಯ್ಕೆಯಾದ ನಾಲ್ಕರಿಂದ ಐದು ಶಾಲೆಗಳ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿವೆ. ಶಾಲೆ ಮಕ್ಕಳೊಂದಿಗೆ ಪೋಷಕರು ಸಹ ಆಹಾರ ಮೇಳಕ್ಕೆ ಆಗಮಿಸುವುದರಿಂದ ಹೆಚ್ಚಿನ ಜನರು ಸೇರುವ ನಿರೀಕ್ಷೆಯಿದೆ, ಎನ್ನುತ್ತಾರೆ ಅಧಿಕಾರಿಗಳು.
ಮಳಿಗೆಗೆ ಬೇಡಿಕೆ
ಆಹಾರ ಮೇಳದಲ್ಲಿ ಮಳಿಗೆ ತೆರೆಯಲು ಸಾಕಷ್ಟು ಸ್ಪರ್ಧೆ ಎದುರಾಗಿದ್ದು, ಅರ್ಜಿಗಳ ಮಹಾಪೂರವೇ ಹರಿದು ಬಂದಿದೆ. ಮೇಳದಲ್ಲಿ 120 ಮಳಿಗೆಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, 250 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಉತ್ತಮವಾಗಿ ವಿಶೇಷ ಆಹಾರ ಪದಾರ್ಥಗಳನ್ನು ತಯಾರಿಸುವ ಹೋಟೆಲ್ ಅಥವಾ ವರ್ತಕರಿಗೆ ಮಳಿಗೆಗಳನ್ನು ಬಾಡಿಗೆಗೆ ನೀಡಲಾಗುವುದು ಎನ್ನುತ್ತಾರೆ ಆಹಾರ ಮೇಳದ ಅಧಿಕಾರಿಗಳು.
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…