ಮೈಸೂರು : ದಸರಾ ಕಾರ್ಯಕ್ರಮಗಳ ರೂಪುರೇಷಗಳು ಭರದಿಂದ ಸಾಗುತ್ತಿದೆ. ಇತ್ತ ಯುವಸಂಭ್ರಮವು ಶುರುವಾಗಿದೆ. ಹೀಗೆ ದಸರೆಯ ವೈವಿಧ್ಯಮಯ ಕಾರ್ಯಕ್ರಮ, ಅರಮನೆಯ ಮೆರಗು, ಮೈಸೂರಿನ ರಾಜ ಬೀದಿಯ ಲೈಟಿಂಗ್ಸ್ ನೋಡಿ ಕಣ್ತುಂಬಿಕೊಳ್ಳಲು ನಗರಕ್ಕೆ ಬರುವವರಿಗೆ ಬಗೆಬಗೆಯ ಖಾದ್ಯ ಉಣಬಡಿಸುವ ದಸರಾ ಆಹಾರ ಮೇಳಕ್ಕೆ ಸಿದ್ಧತೆ ನಡೆದಿದೆ. ದಸರಾ ಉದ್ಘಾಟನೆ ದಿನವೇ ಆಹಾರ ಮೇಳ ಸಹ ಉದ್ಘಾಟನೆಯಾಗಲಿದೆ.
ಇನ್ನೂ ಈ ಬಾರಿ ವಿಶೇಷವೆನೆಂದರೇ, ಪ್ರತಿ ವರ್ಷ ಜಂಬೂಸವಾರಿ ದಿನದಂದೇ ಅಂತ್ಯಗೊಳ್ಳುತ್ತಿದ್ದ ಆಹಾರ ಮೇಳದ ಅವಧಿಯನ್ನು ಮೂರು ದಿನ ವಿಸ್ತರಿಸಲಾಗಿದೆ. ವಾರಾಂತ್ಯದ ಭಾನುವಾರದವರೆಗೂ ಮೈಸೂರಿಗೆ ಬರುವ ಪ್ರವಾಸಿಗರು ಆಹಾರ ಮೇಳದಲ್ಲಿ ತಮಗಿಷ್ಟವಾದ ಆಹಾರದ ಸವಿಯನ್ನು ಸವಿಯಬಹುದಾಗಿದೆ.
ದಸರಾ ಉದ್ಘಾಟನೆ ದಿನವಾದ ಸೆ.22 ರಿಂದ ಅ.2 ರಂದು ಜಂಬೂಸವಾರಿ ಮೆರವಣಿಗೆ ನಡೆಯುವ ದಿನದವರೆಗೂ ಆಹಾರ ಮೇಳ ನಡೆಯಬೇಕಿತ್ತು. ಆದರೆ, ಈ ಬಾರಿ ವಾರಾಂತ್ಯವೂ ಸೇರಿದಂತೆ ಅ.5 ರವರೆಗೆ ಆಹಾರ ಮೇಳ ನಡೆಸಲು ತೀರ್ಮಾನಿಸಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳ ನಡೆಯಲಿದೆ. 120 ಮಳಿಗೆಗಳನ್ನು ತೆರೆಯಲು ಕ್ರಮವಹಿಸಲಾಗಿದೆ.
ಆಹಾರ ಮೇಳದಲ್ಲಿ ಮಕ್ಕಳ ಉತ್ಸವ
ಯುವ ಸಂಭ್ರಮದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲಾಗುತ್ತದೆ. ಆದರೆ, ಶಾಲಾ ಮಕ್ಕಳಿಗೆ ಯಾವುದೇ ಅವಕಾಶವಿರಲಿಲ್ಲ. ಈ ಬಾರಿ ಶಾಲಾ ಮಕ್ಕಳಿಂದ ಆಹಾರ ಮೇಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ವಿಜೇತರಾದ ಶಾಲೆಗಳ ಮಕ್ಕಳಿಂದ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದ್ದು, ಮೈಸೂರು ಜಿಲ್ಲೆಯ ಎಲ್ಲ ತಾಲೂಕುಗಳಿಂದ ಆಯ್ಕೆಯಾದ ನಾಲ್ಕರಿಂದ ಐದು ಶಾಲೆಗಳ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿವೆ. ಶಾಲೆ ಮಕ್ಕಳೊಂದಿಗೆ ಪೋಷಕರು ಸಹ ಆಹಾರ ಮೇಳಕ್ಕೆ ಆಗಮಿಸುವುದರಿಂದ ಹೆಚ್ಚಿನ ಜನರು ಸೇರುವ ನಿರೀಕ್ಷೆಯಿದೆ, ಎನ್ನುತ್ತಾರೆ ಅಧಿಕಾರಿಗಳು.
ಮಳಿಗೆಗೆ ಬೇಡಿಕೆ
ಆಹಾರ ಮೇಳದಲ್ಲಿ ಮಳಿಗೆ ತೆರೆಯಲು ಸಾಕಷ್ಟು ಸ್ಪರ್ಧೆ ಎದುರಾಗಿದ್ದು, ಅರ್ಜಿಗಳ ಮಹಾಪೂರವೇ ಹರಿದು ಬಂದಿದೆ. ಮೇಳದಲ್ಲಿ 120 ಮಳಿಗೆಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, 250 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಉತ್ತಮವಾಗಿ ವಿಶೇಷ ಆಹಾರ ಪದಾರ್ಥಗಳನ್ನು ತಯಾರಿಸುವ ಹೋಟೆಲ್ ಅಥವಾ ವರ್ತಕರಿಗೆ ಮಳಿಗೆಗಳನ್ನು ಬಾಡಿಗೆಗೆ ನೀಡಲಾಗುವುದು ಎನ್ನುತ್ತಾರೆ ಆಹಾರ ಮೇಳದ ಅಧಿಕಾರಿಗಳು.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…