ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | 15 ದಿನಗಳ ಕಾಲ ಆಹಾರ ಮೇಳ ; ಮಳಿಗೆಗೆ ಬೇಡಿಕೆ

ಮೈಸೂರು : ದಸರಾ ಕಾರ್ಯಕ್ರಮಗಳ ರೂಪುರೇಷಗಳು ಭರದಿಂದ ಸಾಗುತ್ತಿದೆ. ಇತ್ತ ಯುವಸಂಭ್ರಮವು ಶುರುವಾಗಿದೆ. ಹೀಗೆ ದಸರೆಯ ವೈವಿಧ್ಯಮಯ ಕಾರ್ಯಕ್ರಮ, ಅರಮನೆಯ ಮೆರಗು, ಮೈಸೂರಿನ ರಾಜ ಬೀದಿಯ ಲೈಟಿಂಗ್ಸ್‌ ನೋಡಿ ಕಣ್ತುಂಬಿಕೊಳ್ಳಲು ನಗರಕ್ಕೆ ಬರುವವರಿಗೆ ಬಗೆಬಗೆಯ ಖಾದ್ಯ ಉಣಬಡಿಸುವ ದಸರಾ ಆಹಾರ ಮೇಳಕ್ಕೆ ಸಿದ್ಧತೆ ನಡೆದಿದೆ. ದಸರಾ ಉದ್ಘಾಟನೆ ದಿನವೇ ಆಹಾರ ಮೇಳ ಸಹ ಉದ್ಘಾಟನೆಯಾಗಲಿದೆ.

ಇನ್ನೂ ಈ ಬಾರಿ ವಿಶೇಷವೆನೆಂದರೇ, ಪ್ರತಿ ವರ್ಷ ಜಂಬೂಸವಾರಿ ದಿನದಂದೇ ಅಂತ್ಯಗೊಳ್ಳುತ್ತಿದ್ದ ಆಹಾರ ಮೇಳದ ಅವಧಿಯನ್ನು ಮೂರು ದಿನ ವಿಸ್ತರಿಸಲಾಗಿದೆ. ವಾರಾಂತ್ಯದ ಭಾನುವಾರದವರೆಗೂ ಮೈಸೂರಿಗೆ ಬರುವ ಪ್ರವಾಸಿಗರು ಆಹಾರ ಮೇಳದಲ್ಲಿ ತಮಗಿಷ್ಟವಾದ ಆಹಾರದ ಸವಿಯನ್ನು ಸವಿಯಬಹುದಾಗಿದೆ.

ದಸರಾ ಉದ್ಘಾಟನೆ ದಿನವಾದ ಸೆ.22 ರಿಂದ ಅ.2 ರಂದು ಜಂಬೂಸವಾರಿ ಮೆರವಣಿಗೆ ನಡೆಯುವ ದಿನದವರೆಗೂ ಆಹಾರ ಮೇಳ ನಡೆಯಬೇಕಿತ್ತು. ಆದರೆ, ಈ ಬಾರಿ ವಾರಾಂತ್ಯವೂ ಸೇರಿದಂತೆ ಅ.5 ರವರೆಗೆ ಆಹಾರ ಮೇಳ ನಡೆಸಲು ತೀರ್ಮಾನಿಸಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳ ನಡೆಯಲಿದೆ. 120 ಮಳಿಗೆಗಳನ್ನು ತೆರೆಯಲು ಕ್ರಮವಹಿಸಲಾಗಿದೆ.

ಆಹಾರ ಮೇಳದಲ್ಲಿ ಮಕ್ಕಳ ಉತ್ಸವ
ಯುವ ಸಂಭ್ರಮದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲಾಗುತ್ತದೆ. ಆದರೆ, ಶಾಲಾ ಮಕ್ಕಳಿಗೆ ಯಾವುದೇ ಅವಕಾಶವಿರಲಿಲ್ಲ. ಈ ಬಾರಿ ಶಾಲಾ ಮಕ್ಕಳಿಂದ ಆಹಾರ ಮೇಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ವಿಜೇತರಾದ ಶಾಲೆಗಳ ಮಕ್ಕಳಿಂದ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದ್ದು, ಮೈಸೂರು ಜಿಲ್ಲೆಯ ಎಲ್ಲ ತಾಲೂಕುಗಳಿಂದ ಆಯ್ಕೆಯಾದ ನಾಲ್ಕರಿಂದ ಐದು ಶಾಲೆಗಳ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿವೆ. ಶಾಲೆ ಮಕ್ಕಳೊಂದಿಗೆ ಪೋಷಕರು ಸಹ ಆಹಾರ ಮೇಳಕ್ಕೆ ಆಗಮಿಸುವುದರಿಂದ ಹೆಚ್ಚಿನ ಜನರು ಸೇರುವ ನಿರೀಕ್ಷೆಯಿದೆ, ಎನ್ನುತ್ತಾರೆ ಅಧಿಕಾರಿಗಳು.

ಮಳಿಗೆಗೆ ಬೇಡಿಕೆ
ಆಹಾರ ಮೇಳದಲ್ಲಿ ಮಳಿಗೆ ತೆರೆಯಲು ಸಾಕಷ್ಟು ಸ್ಪರ್ಧೆ ಎದುರಾಗಿದ್ದು, ಅರ್ಜಿಗಳ ಮಹಾಪೂರವೇ ಹರಿದು ಬಂದಿದೆ. ಮೇಳದಲ್ಲಿ 120 ಮಳಿಗೆಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, 250 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಉತ್ತಮವಾಗಿ ವಿಶೇಷ ಆಹಾರ ಪದಾರ್ಥಗಳನ್ನು ತಯಾರಿಸುವ ಹೋಟೆಲ್ ಅಥವಾ ವರ್ತಕರಿಗೆ ಮಳಿಗೆಗಳನ್ನು ಬಾಡಿಗೆಗೆ ನೀಡಲಾಗುವುದು ಎನ್ನುತ್ತಾರೆ ಆಹಾರ ಮೇಳದ ಅಧಿಕಾರಿಗಳು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

2 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

3 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

5 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

10 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

11 hours ago