ಮೈಸೂರು : ದಸರಾ ಕಾರ್ಯಕ್ರಮಗಳ ರೂಪುರೇಷಗಳು ಭರದಿಂದ ಸಾಗುತ್ತಿದೆ. ಇತ್ತ ಯುವಸಂಭ್ರಮವು ಶುರುವಾಗಿದೆ. ಹೀಗೆ ದಸರೆಯ ವೈವಿಧ್ಯಮಯ ಕಾರ್ಯಕ್ರಮ, ಅರಮನೆಯ ಮೆರಗು, ಮೈಸೂರಿನ ರಾಜ ಬೀದಿಯ ಲೈಟಿಂಗ್ಸ್ ನೋಡಿ ಕಣ್ತುಂಬಿಕೊಳ್ಳಲು ನಗರಕ್ಕೆ ಬರುವವರಿಗೆ ಬಗೆಬಗೆಯ ಖಾದ್ಯ ಉಣಬಡಿಸುವ ದಸರಾ ಆಹಾರ ಮೇಳಕ್ಕೆ ಸಿದ್ಧತೆ ನಡೆದಿದೆ. ದಸರಾ ಉದ್ಘಾಟನೆ ದಿನವೇ ಆಹಾರ ಮೇಳ ಸಹ ಉದ್ಘಾಟನೆಯಾಗಲಿದೆ.
ಇನ್ನೂ ಈ ಬಾರಿ ವಿಶೇಷವೆನೆಂದರೇ, ಪ್ರತಿ ವರ್ಷ ಜಂಬೂಸವಾರಿ ದಿನದಂದೇ ಅಂತ್ಯಗೊಳ್ಳುತ್ತಿದ್ದ ಆಹಾರ ಮೇಳದ ಅವಧಿಯನ್ನು ಮೂರು ದಿನ ವಿಸ್ತರಿಸಲಾಗಿದೆ. ವಾರಾಂತ್ಯದ ಭಾನುವಾರದವರೆಗೂ ಮೈಸೂರಿಗೆ ಬರುವ ಪ್ರವಾಸಿಗರು ಆಹಾರ ಮೇಳದಲ್ಲಿ ತಮಗಿಷ್ಟವಾದ ಆಹಾರದ ಸವಿಯನ್ನು ಸವಿಯಬಹುದಾಗಿದೆ.
ದಸರಾ ಉದ್ಘಾಟನೆ ದಿನವಾದ ಸೆ.22 ರಿಂದ ಅ.2 ರಂದು ಜಂಬೂಸವಾರಿ ಮೆರವಣಿಗೆ ನಡೆಯುವ ದಿನದವರೆಗೂ ಆಹಾರ ಮೇಳ ನಡೆಯಬೇಕಿತ್ತು. ಆದರೆ, ಈ ಬಾರಿ ವಾರಾಂತ್ಯವೂ ಸೇರಿದಂತೆ ಅ.5 ರವರೆಗೆ ಆಹಾರ ಮೇಳ ನಡೆಸಲು ತೀರ್ಮಾನಿಸಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳ ನಡೆಯಲಿದೆ. 120 ಮಳಿಗೆಗಳನ್ನು ತೆರೆಯಲು ಕ್ರಮವಹಿಸಲಾಗಿದೆ.
ಆಹಾರ ಮೇಳದಲ್ಲಿ ಮಕ್ಕಳ ಉತ್ಸವ
ಯುವ ಸಂಭ್ರಮದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲಾಗುತ್ತದೆ. ಆದರೆ, ಶಾಲಾ ಮಕ್ಕಳಿಗೆ ಯಾವುದೇ ಅವಕಾಶವಿರಲಿಲ್ಲ. ಈ ಬಾರಿ ಶಾಲಾ ಮಕ್ಕಳಿಂದ ಆಹಾರ ಮೇಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ವಿಜೇತರಾದ ಶಾಲೆಗಳ ಮಕ್ಕಳಿಂದ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದ್ದು, ಮೈಸೂರು ಜಿಲ್ಲೆಯ ಎಲ್ಲ ತಾಲೂಕುಗಳಿಂದ ಆಯ್ಕೆಯಾದ ನಾಲ್ಕರಿಂದ ಐದು ಶಾಲೆಗಳ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿವೆ. ಶಾಲೆ ಮಕ್ಕಳೊಂದಿಗೆ ಪೋಷಕರು ಸಹ ಆಹಾರ ಮೇಳಕ್ಕೆ ಆಗಮಿಸುವುದರಿಂದ ಹೆಚ್ಚಿನ ಜನರು ಸೇರುವ ನಿರೀಕ್ಷೆಯಿದೆ, ಎನ್ನುತ್ತಾರೆ ಅಧಿಕಾರಿಗಳು.
ಮಳಿಗೆಗೆ ಬೇಡಿಕೆ
ಆಹಾರ ಮೇಳದಲ್ಲಿ ಮಳಿಗೆ ತೆರೆಯಲು ಸಾಕಷ್ಟು ಸ್ಪರ್ಧೆ ಎದುರಾಗಿದ್ದು, ಅರ್ಜಿಗಳ ಮಹಾಪೂರವೇ ಹರಿದು ಬಂದಿದೆ. ಮೇಳದಲ್ಲಿ 120 ಮಳಿಗೆಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, 250 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಉತ್ತಮವಾಗಿ ವಿಶೇಷ ಆಹಾರ ಪದಾರ್ಥಗಳನ್ನು ತಯಾರಿಸುವ ಹೋಟೆಲ್ ಅಥವಾ ವರ್ತಕರಿಗೆ ಮಳಿಗೆಗಳನ್ನು ಬಾಡಿಗೆಗೆ ನೀಡಲಾಗುವುದು ಎನ್ನುತ್ತಾರೆ ಆಹಾರ ಮೇಳದ ಅಧಿಕಾರಿಗಳು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…