ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | 15 ದಿನಗಳ ಕಾಲ ಆಹಾರ ಮೇಳ ; ಮಳಿಗೆಗೆ ಬೇಡಿಕೆ

ಮೈಸೂರು : ದಸರಾ ಕಾರ್ಯಕ್ರಮಗಳ ರೂಪುರೇಷಗಳು ಭರದಿಂದ ಸಾಗುತ್ತಿದೆ. ಇತ್ತ ಯುವಸಂಭ್ರಮವು ಶುರುವಾಗಿದೆ. ಹೀಗೆ ದಸರೆಯ ವೈವಿಧ್ಯಮಯ ಕಾರ್ಯಕ್ರಮ, ಅರಮನೆಯ ಮೆರಗು, ಮೈಸೂರಿನ ರಾಜ ಬೀದಿಯ ಲೈಟಿಂಗ್ಸ್‌ ನೋಡಿ ಕಣ್ತುಂಬಿಕೊಳ್ಳಲು ನಗರಕ್ಕೆ ಬರುವವರಿಗೆ ಬಗೆಬಗೆಯ ಖಾದ್ಯ ಉಣಬಡಿಸುವ ದಸರಾ ಆಹಾರ ಮೇಳಕ್ಕೆ ಸಿದ್ಧತೆ ನಡೆದಿದೆ. ದಸರಾ ಉದ್ಘಾಟನೆ ದಿನವೇ ಆಹಾರ ಮೇಳ ಸಹ ಉದ್ಘಾಟನೆಯಾಗಲಿದೆ.

ಇನ್ನೂ ಈ ಬಾರಿ ವಿಶೇಷವೆನೆಂದರೇ, ಪ್ರತಿ ವರ್ಷ ಜಂಬೂಸವಾರಿ ದಿನದಂದೇ ಅಂತ್ಯಗೊಳ್ಳುತ್ತಿದ್ದ ಆಹಾರ ಮೇಳದ ಅವಧಿಯನ್ನು ಮೂರು ದಿನ ವಿಸ್ತರಿಸಲಾಗಿದೆ. ವಾರಾಂತ್ಯದ ಭಾನುವಾರದವರೆಗೂ ಮೈಸೂರಿಗೆ ಬರುವ ಪ್ರವಾಸಿಗರು ಆಹಾರ ಮೇಳದಲ್ಲಿ ತಮಗಿಷ್ಟವಾದ ಆಹಾರದ ಸವಿಯನ್ನು ಸವಿಯಬಹುದಾಗಿದೆ.

ದಸರಾ ಉದ್ಘಾಟನೆ ದಿನವಾದ ಸೆ.22 ರಿಂದ ಅ.2 ರಂದು ಜಂಬೂಸವಾರಿ ಮೆರವಣಿಗೆ ನಡೆಯುವ ದಿನದವರೆಗೂ ಆಹಾರ ಮೇಳ ನಡೆಯಬೇಕಿತ್ತು. ಆದರೆ, ಈ ಬಾರಿ ವಾರಾಂತ್ಯವೂ ಸೇರಿದಂತೆ ಅ.5 ರವರೆಗೆ ಆಹಾರ ಮೇಳ ನಡೆಸಲು ತೀರ್ಮಾನಿಸಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳ ನಡೆಯಲಿದೆ. 120 ಮಳಿಗೆಗಳನ್ನು ತೆರೆಯಲು ಕ್ರಮವಹಿಸಲಾಗಿದೆ.

ಆಹಾರ ಮೇಳದಲ್ಲಿ ಮಕ್ಕಳ ಉತ್ಸವ
ಯುವ ಸಂಭ್ರಮದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲಾಗುತ್ತದೆ. ಆದರೆ, ಶಾಲಾ ಮಕ್ಕಳಿಗೆ ಯಾವುದೇ ಅವಕಾಶವಿರಲಿಲ್ಲ. ಈ ಬಾರಿ ಶಾಲಾ ಮಕ್ಕಳಿಂದ ಆಹಾರ ಮೇಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ವಿಜೇತರಾದ ಶಾಲೆಗಳ ಮಕ್ಕಳಿಂದ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದ್ದು, ಮೈಸೂರು ಜಿಲ್ಲೆಯ ಎಲ್ಲ ತಾಲೂಕುಗಳಿಂದ ಆಯ್ಕೆಯಾದ ನಾಲ್ಕರಿಂದ ಐದು ಶಾಲೆಗಳ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿವೆ. ಶಾಲೆ ಮಕ್ಕಳೊಂದಿಗೆ ಪೋಷಕರು ಸಹ ಆಹಾರ ಮೇಳಕ್ಕೆ ಆಗಮಿಸುವುದರಿಂದ ಹೆಚ್ಚಿನ ಜನರು ಸೇರುವ ನಿರೀಕ್ಷೆಯಿದೆ, ಎನ್ನುತ್ತಾರೆ ಅಧಿಕಾರಿಗಳು.

ಮಳಿಗೆಗೆ ಬೇಡಿಕೆ
ಆಹಾರ ಮೇಳದಲ್ಲಿ ಮಳಿಗೆ ತೆರೆಯಲು ಸಾಕಷ್ಟು ಸ್ಪರ್ಧೆ ಎದುರಾಗಿದ್ದು, ಅರ್ಜಿಗಳ ಮಹಾಪೂರವೇ ಹರಿದು ಬಂದಿದೆ. ಮೇಳದಲ್ಲಿ 120 ಮಳಿಗೆಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, 250 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಉತ್ತಮವಾಗಿ ವಿಶೇಷ ಆಹಾರ ಪದಾರ್ಥಗಳನ್ನು ತಯಾರಿಸುವ ಹೋಟೆಲ್ ಅಥವಾ ವರ್ತಕರಿಗೆ ಮಳಿಗೆಗಳನ್ನು ಬಾಡಿಗೆಗೆ ನೀಡಲಾಗುವುದು ಎನ್ನುತ್ತಾರೆ ಆಹಾರ ಮೇಳದ ಅಧಿಕಾರಿಗಳು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

2 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

2 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

2 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago