ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯುತ್ತಿದ್ದು, ಸಿಬ್ಬಂದಿ ಅರಮನೆಯಿಂದ ಅಂಬಾರಿಯನ್ನು ಹೊರತರುತ್ತಿದ್ದಾರೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಸ್ತಬ್ಧಚಿತ್ರಗಳು ಹಾಗೂ ವಿವಿಧ ಕಲಾ ತಂಡಗಳು ಸಾಗುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ.
ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: 58 ಸ್ತಬ್ಧ ಚಿತ್ರಗಳ ಮೆರುಗು
ಇನ್ನು ಅರಮನೆಯಿಂದ ಚಿನ್ನದ ಅಂಬಾರಿಯನ್ನು ಸಿಬ್ಬಂದಿಗಳು ಹೊರಗಡೆ ತರುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಅಭಿಮನ್ಯು ಆನೆಯ ಮೇಲೆ ಚಿನ್ನದ ಅಂಬಾರಿಯನ್ನು ಕಟ್ಟಲಾಗುತ್ತದೆ.
ಅಂಬಾರಿ ಒಳಗೆ ವಿರಾಜಮಾನಳಾಗಿರುವ ನಾಡದೇವತೆ ಚಾಮುಂಡೇಶ್ವರಿ ಉತ್ಸವಮೂರ್ತಿಯನ್ನು ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜಮಾರ್ಗದಲ್ಲಿ ಗಜಗಾಂಭೀರ್ಯದ ಹೆಜ್ಜೆ ಹಾಕಲಿದ್ದಾನೆ.
ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂಸವಾರಿ ಮೆರವಣಿಗೆಯಲ್ಲಿ ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊತ್ತು ಸಾಗಲಿದ್ದು, ಇದನ್ನು ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ.
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…