ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ಬೆಂಗಳೂರಿನಿಂದ ಮೈಸೂರಿಗೆ 2,300 ವಿಶೇಷ ಬಸ್‌

ಬೆಂಗಳೂರು : ಮೈಸೂರು ದಸರಾ ಉತ್ಸವದ ರಜೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2300ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಿದೆ.

ದಸರಾ ಮಹೋತ್ಸವದ ಅಂಗವಾಗಿ ರಾಜ್ಯ ಹಾಗೂ ದೇಶದ ವಿವಿಧ ಕಡೆಗಳಿಂದ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಹಿನ್ನಲೆ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುವುದನ್ನು ಮನಗಂಡು ಕೆಎಸ್‍ಆರ್‍ಟಿಸಿ ವಿಶೇಷ ಬಸ್ ವ್ಯವಸ್ಥೆ ಒದಗಿಸಿದೆ.

ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್‍ಕ್ಲಾಸ್, ಅಂಬಾರಿ ಕ್ಲಬ್‍ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‍ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ.

ದಿನಾಂಕ ಸೆ.26, 27 ಹಾಗೂ 30ರಂದು ಬೆಂಗಳೂರಿನಿಂದ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ 2300ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ವಿಶೇಷ ಬಸ್‍ಗಳ ಆಚರಣೆ ಮಾಡಲಾಗುವುದು. ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.2 ಹಾಗೂ 5ರಂದು ವಿಶೇಷ ಬಸ್‍ಗಳ ಸೇವೆಯನ್ನು ಒದಗಿಸಲಾಗುವುದು ಎಂದು ಹೇಳಿದೆ.

ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಆಸಕ್ತಿಗೆ ಅನುಗುಣವಾಗಿ ಉಚಿತ ಕೌಶಲ್ಯ ತರಬೇತಿ ನೀಡಿ: ಡಾ.ಕುಮಾರ

ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…

3 mins ago

ಜನರು ಹೆಚ್ಚು ಹೆಚ್ಚು ಗ್ಯಾಸ್‌ ಬುಕ್‌ ಮಾಡಬೇಡಿ: ಸಚಿವ ಕೆ.ಎಚ್.ಮುನಿಯಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…

18 mins ago

ಯುದ್ಧದ ನಡುವೆಯೇ ಭಾರತಕ್ಕೆ ಗುಡ್‌ನ್ಯೂಸ್: 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತು ತಂದ ಹಡಗು

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…

44 mins ago

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

1 hour ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

2 hours ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

2 hours ago