ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | 8 ದಿನಗಳ ಕಾಲ ಸಾಂಸ್ಕೃತಿಕ ಉತ್ಸವ

ಮೈಸೂರು : ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ದಸರಾದಲ್ಲಿ ಕಲಾಸಕ್ತರ ಮುಂದೆ ತಮ್ಮ ಕಲೆಯನ್ನು ಪ್ರದರ್ಶಿಸಲು ಕಲಾವಿದರು ಸಿದ್ಧವಾಗಿದ್ದು, ಅವಕಾಶ ಕೋರಿ ಬರೋಬ್ಬರಿ 3173 ಮಂದಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ.

ನಾಡಹಬ್ಬ ದಸರೆಯ ಒಂಬತ್ತು ದಿನಗಳಲ್ಲಿ ದೇಶದ ವಿವಿಧೆಡೆಗಳಿಂದ ಆಗಮಿಸುವ ಕಲಾವಿದರು, ಕಲಾರಸಿಕರಿಗೆ ತಮ್ಮಲ್ಲಿರುವ ಕಲೆಯನ್ನು ಉಣಬಡಿಸುತ್ತಾರೆ. ಈ ಬಾರಿ ಸೆ.22 ರಂದು ದಸರಾ ಉದ್ಘಾಟನೆಯಾಗಲಿದ್ದು, 29ರ ವರೆಗೆ ಅರಮನೆ ವೇದಿಕೆ ಸೇರಿದಂತೆ ನಗರದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ದಸರಾ ವೇಳೆ ಅರಮನೆಯ ವೇದಿಕೆಯಲ್ಲಿ 8 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಉಳಿದಂತೆ ನಗರದ ಒಂಬತ್ತು ವಿವಿಧ ಸ್ಥಳಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಈ ಹಿನ್ನೆಲೆಯಲ್ಲಿ ದಸರಾ ಸಾಂಸ್ಕೃತಿಕ ಉಪ ಸಮಿತಿಯು ಒಟ್ಟು 488 ಕಾರ್ಯಕ್ರಮಗಳನ್ನು ವಿವಿಧ ವೇದಿಕೆಗಳಲ್ಲಿ ಆಯೋಜಿಸಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಅರ್ಜಿ ಕೂಡ ಆಹ್ವಾನಿಸಿತ್ತು. ಹೀಗಾಗಿ 3173 ಮಂದಿ ಅವಕಾಶಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

ನಗರದ ಜಗನ್ಮೋಹನ ಅರಮನೆ, ಕಲಾಮಂದಿರ, ಕಿರುರಂಗಮಂದಿರ, ನಾದಬ್ರಹ್ಮ, ಗಾನಭಾರತಿ, ಚಿಕ್ಕ ಗಡಿಯಾರ, ಪುರಭವನ, ನಂಜನಗೂಡಿನ ಅರಮನೆ ಮಾಳ ಹೀಗೆ ಮೈಸೂರು ಅರಮನೆ ಆವರಣ ಸೇರಿದಂತೆ 10 ವೇದಿಕೆಗಳಲ್ಲಿ ಕಾರ್ಯಕ್ರಮ ಜರುಗಲಿದೆ.

ನಾಟಕ, ಭರತನಾಟ್ಯ, ಸಮೂಹ ಗಾಯನ, ನೃತ್ಯ ರೂಪಕ, ಸಂಗೀತ, ಭಾವಗೀತೆ, ಕೂಚುಪುಡಿ, ವಚನ ಗಾಯನ, ವಚನ ರೂಪಕ ಸೇರಿದಂತೆ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳು ಜನರನ್ನು ಸೆಳೆಯಲಿವೆ.

ಹೊರ ರಾಜ್ಯದ ಕಲಾವಿದರು
ಇದೇ ವೇಳೆ ನಮ್ಮ ರಾಜ್ಯದ ಕಲಾವಿದರ ಜೊತೆಗೆ ಹೊರ ರಾಜ್ಯಗಳಿಂದಲೂ ಕಲಾವಿದರು ತಮ್ಮ ಪರಂಪರೆ ಹಾಗೂ ಸಂಸ್ಕೃತಿಯನ್ನು ಮೈಸೂರಿನಲ್ಲಿ ಅನಾವರಣಗೊಳಿಸಲಿದ್ದಾರೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಹೊಸದಿಲ್ಲಿ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಆಗಮಿಸಿ ಪ್ರದರ್ಶನ ನೀಡಲಿದ್ದಾರೆ. ನಾಗಪುರದಿಂದ ಆಗಮಿಸುವ ಕಲಾವಿದರು. ಸೆ.22 ರಂದು ಸಂಜೆ ಕಲಾಮಂದಿರದಲ್ಲಿ ‘ಸಾಮ್ರಾಟ್ ಅಶೋಕ’ ನಾಟಕ ಪ್ರಸ್ತುತಪಡಿಸಲಿದ್ದು, ಇದು ವಿಶೇಷ ಆಕರ್ಷಣೆಯಾಗಲಿದೆ.

ನಾಡಹಬ್ಬ ದಸರಾ ವೇಳೆ ನಡೆಯುವ ಕಾರ್ಯಕ್ರಮಗಳ ಪಟ್ಟಿ ಈಗಾಗಲೇ ಅಂತಿಮ ಹಂತದಲ್ಲಿದ್ದು, ಸೋಮವಾರ ಜಿಲ್ಲಾಧಿಕಾರಿಯವರು ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಜಾತಿ, ಧರ್ಮ, ಲಿಂಗಬೇಧವಿಲ್ಲದೆ ಅರ್ಹ ಕಲಾವಿದರಿಗೆ ದಸರಾದಲ್ಲಿ ವೇದಿಕೆ ನೀಡಲಾಗುತ್ತಿದೆ. ಹೊರ ರಾಜ್ಯಗಳ ಪರಂಪರೆ, ಸಂಸ್ಕೃತಿ ಕೂಡ ಅನಾವರಣಗೊಳ್ಳಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

11 mins ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

45 mins ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

1 hour ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

1 hour ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

4 hours ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

5 hours ago