ಮೈಸೂರು: ಸಿನಿಮಾ ಎಂದರೆ ಅರಿವು, ಸಾಮಾಜಿಕ ಜವಾಬ್ದಾರಿಯಾಗಿದೆ. ತಮ್ಮ ಸಾಹಿತ್ಯ, ಸಂಗೀತದ ಮೂಲಕದ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ನಗರದ ಮಾಲ್ ಆಫ್ ಮೈಸೂರು ಮಳಿಗೆಯಲ್ಲಿ ದಸರಾ ಚಲನಚಿತ್ರೋತ್ಸವ ಉಪ ಸಮಿತಿವತಿಯಿಂದ ಶನಿವಾರ ಆಯೋಜಿಸಿದ್ದ ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತದ ಜನ ಜೀವನದ ಮೇಲೆ ಗಂಭೀರ ಪರಿಣಾಮ ಬೀರುವ ಸಿನಿಮಾಗಳ ಕ್ಷೇತ್ರದ ಮೂಲಕ ದೇಶದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯ ಪ್ರಜ್ಞೆಯನ್ನು ಮೂಡಿಸಬೇಕು ಎಂದರು.
ನಟರು ತಮ್ಮ ಅಭಿನಯ, ಸಂಗೀತ, ಸಾಹಿತ್ಯದ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸಗಳನ್ನು ಸಿನಿಮಾಗಳು ಮಾಡುತ್ತಿವೆ. ಹೀಗಾಗಿ ಅತ್ಯಂತ ಪ್ರಭಾವಶಾಲಿಯಾಗಿ ಯುವ ಜನರಲ್ಲಿ ಜಾತ್ಯತೀತತೆಯ ಅರಿವು ಮೂಡಿಸಿ ಸಮಾಜಮುಖಿ ಕೆಲಸ ಸಿನಿಮಾಗಳಿಂದ ಆಗಬೇಕು ಎಂದರು.
ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ಖ್ಯಾತಿಯ ಬಿ.ಸರೋಜಾದೇವಿ ಅಗಲಿದ್ದಾರೆ. ಕನ್ನಡ, ತಮಿಳು,ತೆಲುಗು, ಹಿಂದಿ ಚಿತ್ರಗಳಲ್ಲಿ ಅಭಿನಯಿಸಿ ತಮ್ಮ ನಟನೆಯ ಮೂಲಕ ಸಾಮಾಜಿಕ ಸಂದೇಶಗಳನ್ನು ಸಾರುವ ಮೂಲಕ ಖ್ಯಾತಿ ಪಡೆದಿದ್ದರು. ಇವರ ಕೊಡುಗೆಯನ್ನು ಸ್ಮರಿಸಿ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಿದರು.
ದಸರಾ ಎನ್ನುವುದು ಸಾಮಾಜಿಕ, ಶೈಕ್ಷಣಿಕ, ಕ್ರೀಡೆ-ಸಂಗೀತ, ಸಾಂಸ್ಕೃತಿಕ ಕಲಾ ಪ್ರಕಾರಗಳ ಮೂಲಕ ದೇಶದ ಏಕತೆ ಸಾರಿ ಭಾರತೀಯೆಲ್ಲರೂ ಒಂದೇ ಎನ್ನುವ ಸಂದೇಶ ನೀಡುವ ನಾಡಹಬ್ಬ. ಈ ನಾಡಹಬ್ಬದಲ್ಲಿ ಸಮಸ್ತ ಜನರು ಒಟ್ಟಿಗೆ ಸೇರಿ ಕನ್ನಡಾಂಬೆಯನ್ನು ಗೌರವಿಸಿ ಸೋದರತೆಯಿಂದ ಬದುಕುವ ವಾತಾವರಣವನ್ನು ನಿರ್ಮಿಸಲಿದೆ. ಜೊತೆಗೆ ನಮ್ಮ ಸಂಸ್ಕೃತಿ, ಪರಂಪರೆಯ ವೈಭವವನ್ನು ಉಳಿಸಿಕೊಳ್ಳುವ ಕೆಲಸವಾಗಲಿದೆ ಎಂದರು.
ನಟಿ ಸಂಧ್ಯಾ ಅರಕೆರೆ ಮಾತನಾಡಿ, ನಾನು ಮೈಸೂರಿನವಳಾಗಿರುವುದು ನನಗೆ ತುಂಬಾ ಸಂತೋಷವಾಗಿದೆ. ಪ್ರತಿ ಬಾರಿ ನಾನು ಮೈಸೂರಿನವರಾಗಿ ದಸರಾ ವೀಕ್ಷಣೆಮಾಡುತ್ತಿದೆ. ಆದರೆ ಈಗ ಸಿನಿಮಾರಂಗದಿಂದ ಬಂದು ಈ ದಸರಾದಲ್ಲಿ ಭಾಗಿಯಾಗಿರುವುದು ನನಗೆ ತುಂಬಾ ಸಂತೋಷ ಉಂಟುಮಾಡಿದೆ ಎಂದು ಹೇಳಿದರು.
ನಟ ಪೃಥ್ವಿ ಅಂಬರ್ ಮಾತನಾಡಿ, ಕೆಡುಕನ್ನು ಗೆಲ್ಲುವಂತಹ ಒಳಿತನ್ನು ಮಾಡುವಂತಹ ಒಂದು ಹಬ್ಬ ಎಂದರೆ ನಮ್ಮ ಮೈಸೂರು ದಸರಾ ಹಬ್ಬ, ಮೈಸೂರು ಎಂದರೆ ನನಗೆ ಚಿಕ್ಕ ವಯಸ್ಸಿನಿಂದಲೂ ಒಂದು ದೊಡ್ಡ ಸೆಳೆತ. ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಜಿಲ್ಲೆ ಎಂದರೆ ಮೈಸೂರು. ಮೈಸೂರು ಎಂದರೆ ನನಗೆ ಹೆಚ್ಚು ಪ್ರೀತಿ ಎಂದು ಹೇಳಿದರು.
ಪ್ರೇಕ್ಷಕರಿಗೆ ಚಲನಚಿತ್ರಗಳನ್ನು ಕೊಡುವುದು ಚಲನ ಚಿತ್ರೋತ್ಸವ. ಸಿನಿಮಾ ಕ್ಷೇತ್ರ ಎಂದರೆ ಒಂದು ಪ್ರಭಾವಿ ಕ್ಷೇತ್ರ. ಪ್ರತಿಯೊಂದು ಚಲನ ಚಿತ್ರಗಳು ಸಮಾಜದಲ್ಲಿ ರಚನಾತ್ಮಕ ಬದಲಾವಣೆಗಳಾಗುತ್ತದೆ. ಪ್ರೇಕ್ಷಕರು ಹೆಚ್ಚು ಸಿನಿಮಾಗಳನ್ನು ನೋಡಬೇಕು ಅದರಲ್ಲಿ ಬರುವಂತಹ ಒಳ್ಳೆಯ ವಿಚಾರಗಳನ್ನು ಪ್ರೇಕ್ಷಕರು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಗಾಯಕ ಜಸ್ಕರನ್ ಸಿಂಗ್ ಅವರು ಕೃಷ್ಣಂ ಪ್ರಣಯ ಸಖಿ ಚಿತ್ರದ ದ್ವಾಪರ ದಾಟುತ ನನ್ನನೆ ನೋಡಲು ನನ್ನನ್ನೇ ಸೇರಲು ಬಂದ ರಾಧಿಕೆ… ಎಂಬ ಹಾಡು ಹೇಳುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…