ಮೈಸೂರು : ಮುಂಬರುವ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿಗೆ ಆಗಮಿಸಲಿರುವ ಪ್ರವಾಸಿಗರಿಗೆ ಸುರಕ್ಷತೆಯನ್ನು ಒದಗಿಸಬೇಕು ಹಾಗೂ ಹೋಟೆಲ್ನಲ್ಲಿ ಉಳಿದುಕೊಳ್ಳವ ಪ್ರವಾಸಿಗರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿಟ್ಟಕೊಳ್ಳಬೇಕುಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ ಸೂಚನೆ ನೀಡಿದ್ದಾರೆ.
ಗುರುವಾರ ನಗರದ ಖಾಸಗಿ ಹೋಟೆಲ್ನಲ್ಲಿ ಹೋಟೆಲ್ ಮಾಲೀಕರು ಹಾಗೂ ವ್ಯವಸ್ಥಪಾಕರ ಸಭೆಯಲ್ಲಿ ದಸರಾ ವೇಳೆ ತೆಗೆದುಕೊಳ್ಳಬೇಕಾದ ಜಾಗೃತ ಕ್ರಮಗಳ ಬಗ್ಗೆ ಹೋಟೆಲ್ ಮಾಲೀಕರುಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ದಸಾರ ವೇಳೆ ಮೈಸೂರು ನಗರಕ್ಕೆ ದೇಶ ವಿದೇಶಗಳೀಂದ ಲಕ್ಷಾಂತರ ಮಂದಿ ಪ್ರವಾಸಿಗರು ಆಗಮಿಸಲಿದ್ದಾರೆ ಆದರಲ್ಲಿಯೂ ಜಂಬೂ ಸವಾರಿ ಮುನ್ನ ದಿನ ನಗರದ ಹೋಟೆಲಗಳಲ್ಲಿ ಎಲ್ಲಾ ಕೋಠಡಿಗಳು ಭರ್ತಿಯಾಗುವ ಸಾಧ್ಯತೆಗಳು ಹೆಚ್ಚು ಆದ್ದರಿಂದ ಪ್ರವಾಸಿಗರಿಗೆ ಸುರಕ್ಷತೆ ಒದಗಿಸಿವುದು ನಿಮ್ಮೆಲ್ಲರ ಜವಬ್ದಾರಿ ಎಂದು ಹೇಳಿದರು.
ಹೋಟೆಲ್ ಹಾಗೂ ವಸತಿಗೃಹಗಳ ಆಳವಡಿಸಿರುವ ಸಿಸಿ ಟಿವಿ ಕ್ಯಾಮರಗಳನ್ನು ಸುಸ್ಥಿಯಲ್ಲಿ ಇಟ್ಟಕೊಳ್ಳಬೇಕು, ವಸತಿ ಗೃಹದಲ್ಲಿ ತಗ್ಗುವವರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ಇಟ್ಟಿಕೊಳ್ಳಬೇಕು. ಎಲ್ಲಾ ಆಧಾರ್ ಹಾಗೂ ವಿಳಾಸ ಧೃಢಿಕರಣ ಗುರುತಿನ ಚೀಟಿ ನಕಲು ಪ್ರತಿಗಳನ್ನು ಸಂಗ್ರಹಿಸಿ ಇಟ್ಟಿಕೋಳಬೇಕು ಈ ಸಂಬಂಧ ಯಾವುದೇ ಪ್ರವಾಸಿಗರು ಅನುಮಾನಸ್ಪಂದವಾಗಿ ನಡೆದುಕೊಂಡಲ್ಲಿ ಕೊಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಒಟ್ಟಾರೆ ದಸರಾ ಸಂದರ್ಭದಲ್ಲಿ ನಗರಕ್ಕೆ ಆಗಮಿಸುವ ಪ್ರವಾಸಿಗರಿಗೆ ಯಾವುದೇ ಅನಾನುಕೂಲತೆಗಳು ಆಗದಂತೆ ನೀಗವಹಿಸಬೇಕು. ಇದರ ಜೊತೆಗೆ ಪೊಲೀಸರು ಯಾವುದೇ ಸಂದರ್ಭದಲ್ಲಿ ಹೋಮ್ಸ್ಟೇ ರೆಸಾರ್ಟ್ ಹಾಗೂ ವಸತಿ ಗೃಹಗಳಿಗೆ ಆಗಮಿಸಿ ಮಾಹಿತಿ ಕೇಳಿದಲ್ಲಿ ನಿವುಗಳು ನೀಡಬೇಕು. ಈ ಸಂಬಂಧ ಸೂಕ್ತ ಹೆಚ್ಚರಿಕೆಯಿಂದ ಹಾಗೂ ಜವಬ್ದಾರಿ ನಿಮ್ಮ ಕೆಲಸವನ್ನು ನಿರ್ವಹಿಸಬೇಕು ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ ತಿಳಿಸಿದರು.
ಸಭೆಯಲ್ಲಿ ಡಿಸಿಪಿಗಳಾದ ಬಿಂದುಮಣಿ, ಕೆ.ಎಸ್,ಸುದರ್ರಾಜು, ಹಾಗೂ ಮತ್ತಿತ್ತರ ಅಧಿಕಾರಿಗಳು ಉಪಸ್ಥಿತರಿದ್ದರು.
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…