ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ಪ್ರವಾಸಿಗರಿಗೆ ಸುರಕ್ಷತೆ ಜೊತೆಗೆ ಮಾಹಿತಿ ಸಂಗ್ರಹಿಸಲು ಕಮಿಷನರ್‌ ಸೂಚನೆ

ಮೈಸೂರು : ಮುಂಬರುವ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿಗೆ ಆಗಮಿಸಲಿರುವ ಪ್ರವಾಸಿಗರಿಗೆ ಸುರಕ್ಷತೆಯನ್ನು ಒದಗಿಸಬೇಕು ಹಾಗೂ ಹೋಟೆಲ್‌ನಲ್ಲಿ ಉಳಿದುಕೊಳ್ಳವ ಪ್ರವಾಸಿಗರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿಟ್ಟಕೊಳ್ಳಬೇಕುಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ ಸೂಚನೆ ನೀಡಿದ್ದಾರೆ.

ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಹೋಟೆಲ್ ಮಾಲೀಕರು ಹಾಗೂ ವ್ಯವಸ್ಥಪಾಕರ ಸಭೆಯಲ್ಲಿ ದಸರಾ ವೇಳೆ ತೆಗೆದುಕೊಳ್ಳಬೇಕಾದ ಜಾಗೃತ ಕ್ರಮಗಳ ಬಗ್ಗೆ ಹೋಟೆಲ್ ಮಾಲೀಕರುಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.

ದಸಾರ ವೇಳೆ ಮೈಸೂರು ನಗರಕ್ಕೆ ದೇಶ ವಿದೇಶಗಳೀಂದ ಲಕ್ಷಾಂತರ ಮಂದಿ ಪ್ರವಾಸಿಗರು ಆಗಮಿಸಲಿದ್ದಾರೆ ಆದರಲ್ಲಿಯೂ ಜಂಬೂ ಸವಾರಿ ಮುನ್ನ ದಿನ ನಗರದ ಹೋಟೆಲಗಳಲ್ಲಿ ಎಲ್ಲಾ ಕೋಠಡಿಗಳು ಭರ್ತಿಯಾಗುವ ಸಾಧ್ಯತೆಗಳು ಹೆಚ್ಚು ಆದ್ದರಿಂದ ಪ್ರವಾಸಿಗರಿಗೆ ಸುರಕ್ಷತೆ ಒದಗಿಸಿವುದು ನಿಮ್ಮೆಲ್ಲರ ಜವಬ್ದಾರಿ ಎಂದು ಹೇಳಿದರು.

ಹೋಟೆಲ್ ಹಾಗೂ ವಸತಿಗೃಹಗಳ ಆಳವಡಿಸಿರುವ ಸಿಸಿ ಟಿವಿ ಕ್ಯಾಮರಗಳನ್ನು ಸುಸ್ಥಿಯಲ್ಲಿ ಇಟ್ಟಕೊಳ್ಳಬೇಕು, ವಸತಿ ಗೃಹದಲ್ಲಿ ತಗ್ಗುವವರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ಇಟ್ಟಿಕೊಳ್ಳಬೇಕು. ಎಲ್ಲಾ ಆಧಾರ್ ಹಾಗೂ ವಿಳಾಸ ಧೃಢಿಕರಣ ಗುರುತಿನ ಚೀಟಿ ನಕಲು ಪ್ರತಿಗಳನ್ನು ಸಂಗ್ರಹಿಸಿ ಇಟ್ಟಿಕೋಳಬೇಕು ಈ ಸಂಬಂಧ ಯಾವುದೇ ಪ್ರವಾಸಿಗರು ಅನುಮಾನಸ್ಪಂದವಾಗಿ ನಡೆದುಕೊಂಡಲ್ಲಿ ಕೊಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಒಟ್ಟಾರೆ ದಸರಾ ಸಂದರ್ಭದಲ್ಲಿ ನಗರಕ್ಕೆ ಆಗಮಿಸುವ ಪ್ರವಾಸಿಗರಿಗೆ ಯಾವುದೇ ಅನಾನುಕೂಲತೆಗಳು ಆಗದಂತೆ ನೀಗವಹಿಸಬೇಕು. ಇದರ ಜೊತೆಗೆ ಪೊಲೀಸರು ಯಾವುದೇ ಸಂದರ್ಭದಲ್ಲಿ ಹೋಮ್‌ಸ್ಟೇ ರೆಸಾರ್ಟ್ ಹಾಗೂ ವಸತಿ ಗೃಹಗಳಿಗೆ ಆಗಮಿಸಿ ಮಾಹಿತಿ ಕೇಳಿದಲ್ಲಿ ನಿವುಗಳು ನೀಡಬೇಕು. ಈ ಸಂಬಂಧ ಸೂಕ್ತ ಹೆಚ್ಚರಿಕೆಯಿಂದ ಹಾಗೂ ಜವಬ್ದಾರಿ ನಿಮ್ಮ ಕೆಲಸವನ್ನು ನಿರ್ವಹಿಸಬೇಕು ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ ತಿಳಿಸಿದರು.

ಸಭೆಯಲ್ಲಿ ಡಿಸಿಪಿಗಳಾದ ಬಿಂದುಮಣಿ, ಕೆ.ಎಸ್,ಸುದರ್‌ರಾಜು, ಹಾಗೂ ಮತ್ತಿತ್ತರ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇಂಧನದ ಮೇಲಿನ ತೆರಿಗೆ ಇಳಿಸಿ

ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು…

5 mins ago

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

4 hours ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

4 hours ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

4 hours ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

4 hours ago