ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಚಾಲನೆ ಸಿಗಲಿದೆ.
750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದು, ಕ್ಯಾಪ್ಟನ್ ಅಭಿಮನ್ಯು ಈಗಾಗಲೇ ಚಿನ್ನದ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದಾನೆ.
ಇನ್ನೇನು ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹಾಗೂ ಅಧಿಕಾರಿಗಳು ಜಂಬೂಸವಾರಿಗೆ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ಇದನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದಾರೆ.





