ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ: ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ.

ದಸರಾ ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ಸಾಗಿದನು. ಕ್ಯಾಪ್ಟನ್‌ ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ಕಾವೇರಿ ಹಾಗೂ ರೂಪ ಆನೆಗಳು ಸಾಥ್‌ ನೀಡಿದವು.

ಇದನ್ನು ಓದಿ : ಮೈಸೂರು ದಸರಾ: ಅಭಿಮನ್ಯುಗೆ ಅಂಬಾರಿ ಕಟ್ಟುವ ಪ್ರಕ್ರಿಯೆ ವೀಕ್ಷಿಸಿದ ರಾಜಮಾತೆ ಪ್ರಮೋದಾದೇವಿ ಒಡೆಯರ್‌

ಬಳಿಕ ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಶಿವರಾಜ್‌ ತಂಗಡಗಿ,  ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಸಂಜೆ 4.42ರಿಂದ 5.06ರೊಳಗೆ ಸಲ್ಲುವ ಶುಭ ಕುಂಭಲಗ್ನದಲ್ಲಿ ಜಂಬೂಸವಾರಿಗೆ ಪುಷ್ಪಾರ್ಚನೆ ಸಲ್ಲಿಸಿದರು.

ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಅರಮನೆ ವೇದಿಕೆಯತ್ತ ಬಂದು ನಿಂತ ಬಳಿಕ ಮೊದಲು ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು. ಆ ತಕ್ಷಣವೇ 21 ಸುತ್ತು ಕುಶಾಲತೋಪುಗಳನ್ನು ಸಿಡಿಸುವ ಮೂಲಕ ಗೌರವ ಸಮರ್ಪಿಸಲಾಯಿತು.

ಬಳಿಕ ಕ್ಯಾಪ್ಟನ್‌ ಅಭಿಮನ್ಯು ಚಿನ್ನದ ಅಂಬಾರಿಯನ್ನು ಹೊತ್ತು ಅರಮನೆಯಿಂದ ಬನ್ನಿಮಂಟಪಕ್ಕೆ ತೆರಳಿದನು.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

2 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

5 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

5 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

5 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

6 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

8 hours ago