ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ಯುವ ಸಂಭ್ರಮದಲ್ಲಿ ಮೊಳಗಿದ ದೇಶಪ್ರೇಮ

ಮೈಸೂರು : ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ನಾಲ್ಕನೇ ದಿನದ ‘ಯುವಸಂಭ್ರಮ’ದಲ್ಲಿ ದೇಶಭಕ್ತಿ, ರಾಷ್ಟ್ರೀಯತೆ, ಆಪರೇಷನ್‌ ಸಿಂಧೂರ್‌, ಕನ್ನಡ ನಾಡು ನುಡಿ ನೃತ್ಯರೂಪಕಗಳು ಯುವಸಮೂಹದಲ್ಲಿ ದೇಶಪ್ರೇಮದ ಕಿಚ್ಚನ್ನು ಹೆಚ್ಚಿಸಿದವು.

ದೇಶಭಕ್ತಿ, ರಾಷ್ಟ್ರೀಯತೆ, ಮಹಿಳಾ ಸಬಲೀಕರಣ, ಜೈ ಜವಾನ್‌– ಜೈ ಕಿಸಾನ್, ಜಾನಪದ, ಆಪರೇಷನ್ ಸಿಂಧೂರ್ , ಕನ್ನಡ ನಾಡು ನುಡಿ ಸೇರಿದಂತೆ ವಿವಿಧ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರಸ್ತುಪಡಿಸಿದ ರೂಪಕಗಳು ಪ್ರೇಕ್ಷಕ ಸಮೂಹದಲ್ಲಿ ಸಂಚನ ಮೂಡಿಸಿದವು.

ಮೈಸೂರು ಸಾತಗಳ್ಳಿ ವಿಶ್ವ ಭಾರತಿ ಕಾಲೇಜಿನಿಂದ ದಸರಾ ವೈಭವ, ಮೈಸೂರು ಹೆಚ್.ಡಿ ಕೋಟೆ ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜ್ ಸಾಮಾಜಿಕ ನ್ಯಾಯ, ಮೈಸೂರು ಬಿಳಿಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರೈತರು/ ಕೃಷಿ ಚಟುವಟಿಕೆ, ಚಾಮರಾಜನಗರ ಗುಂಡ್ಲುಪೇಟೆ ಬಾಬು ಸರ್ಕಾರಿ ಪದವಿ ಪೂರ್ವ ಕಾಲೇಜು ತೆರಕಣಾಂಬಿ ಕಾಲೇಜಿನ ವಿದ್ಯಾರ್ಥಿಗಳು ಸುದ್ದಿ ಮತ್ತು ಆಹಾರ ಧಾನ್ಯಗಳು, ಬೆಂಗಳೂರು ಹನುಮಂತನಗರ ನಗರ ಶ್ರೀ ಬಾಲಾಜಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದೇಶದ ಸ್ವಾತಂತ್ರ್ಯದಲ್ಲಿ ಗಾಂಧೀಜಿಯವರ ಪಾತ್ರಎಂಬ ನೃತ್ಯ ಪ್ರದರ್ಶನ ಮಾಡಿದರು.

ಇಂದು ನಡೆದ ಕಾರ್ಯಕ್ರಮದಲ್ಲಿ 58 ನೃತ್ಯ ‌ಪ್ರದರ್ಶನಗಳನು ಮಾಡಲಾಯಿತು. ನೃತ್ಯ ಪ್ರಕಾರ, ಸಾಂಸ್ಕೃತಿಕ ಪರಂಪರೆ, ದೇಶಭಕ್ತಿ, ಅಂಬಾರಿ ಆನೆ ಕೃಷ್ಣ, ದಸರಾ ವೈಭವ, ಆರೋಗ್ಯಕ್ಕೆ ಸಂಬಂಧಿಸಿದ, ಜನಕೇಂದ್ರಿತ, ಪರಿಸರ ಸಂರಕ್ಷಣೆಯಲ್ಲಿ ಯುವ ಜನತೆಯ ಪಾತ್ರ, ಫ್ಯೂಜನ್, ಪೌರಾಣಿಕ, ಭಾರತೀಯ ಯೋಧರ ಪಾತ್ರ, ಕೊಡವ ನೃತ್ಯ, ಕರ್ನಾಟಕ ಜಾನಪದ ಹೀಗೆ ನಾನಾ ರೀತಿಯಿಂದ ಹಲವಾರು ಕಾಲೇಜು ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನದಿಂದ ಯುವಕರನ್ನು ರಂಜಿಸಿದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

10 mins ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

2 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

3 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

3 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

3 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

3 hours ago