ಮೈಸೂರು : ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ನಾಲ್ಕನೇ ದಿನದ ‘ಯುವಸಂಭ್ರಮ’ದಲ್ಲಿ ದೇಶಭಕ್ತಿ, ರಾಷ್ಟ್ರೀಯತೆ, ಆಪರೇಷನ್ ಸಿಂಧೂರ್, ಕನ್ನಡ ನಾಡು ನುಡಿ ನೃತ್ಯರೂಪಕಗಳು ಯುವಸಮೂಹದಲ್ಲಿ ದೇಶಪ್ರೇಮದ ಕಿಚ್ಚನ್ನು ಹೆಚ್ಚಿಸಿದವು.
ದೇಶಭಕ್ತಿ, ರಾಷ್ಟ್ರೀಯತೆ, ಮಹಿಳಾ ಸಬಲೀಕರಣ, ಜೈ ಜವಾನ್– ಜೈ ಕಿಸಾನ್, ಜಾನಪದ, ಆಪರೇಷನ್ ಸಿಂಧೂರ್ , ಕನ್ನಡ ನಾಡು ನುಡಿ ಸೇರಿದಂತೆ ವಿವಿಧ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರಸ್ತುಪಡಿಸಿದ ರೂಪಕಗಳು ಪ್ರೇಕ್ಷಕ ಸಮೂಹದಲ್ಲಿ ಸಂಚನ ಮೂಡಿಸಿದವು.
ಮೈಸೂರು ಸಾತಗಳ್ಳಿ ವಿಶ್ವ ಭಾರತಿ ಕಾಲೇಜಿನಿಂದ ದಸರಾ ವೈಭವ, ಮೈಸೂರು ಹೆಚ್.ಡಿ ಕೋಟೆ ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜ್ ಸಾಮಾಜಿಕ ನ್ಯಾಯ, ಮೈಸೂರು ಬಿಳಿಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರೈತರು/ ಕೃಷಿ ಚಟುವಟಿಕೆ, ಚಾಮರಾಜನಗರ ಗುಂಡ್ಲುಪೇಟೆ ಬಾಬು ಸರ್ಕಾರಿ ಪದವಿ ಪೂರ್ವ ಕಾಲೇಜು ತೆರಕಣಾಂಬಿ ಕಾಲೇಜಿನ ವಿದ್ಯಾರ್ಥಿಗಳು ಸುದ್ದಿ ಮತ್ತು ಆಹಾರ ಧಾನ್ಯಗಳು, ಬೆಂಗಳೂರು ಹನುಮಂತನಗರ ನಗರ ಶ್ರೀ ಬಾಲಾಜಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದೇಶದ ಸ್ವಾತಂತ್ರ್ಯದಲ್ಲಿ ಗಾಂಧೀಜಿಯವರ ಪಾತ್ರಎಂಬ ನೃತ್ಯ ಪ್ರದರ್ಶನ ಮಾಡಿದರು.
ಇಂದು ನಡೆದ ಕಾರ್ಯಕ್ರಮದಲ್ಲಿ 58 ನೃತ್ಯ ಪ್ರದರ್ಶನಗಳನು ಮಾಡಲಾಯಿತು. ನೃತ್ಯ ಪ್ರಕಾರ, ಸಾಂಸ್ಕೃತಿಕ ಪರಂಪರೆ, ದೇಶಭಕ್ತಿ, ಅಂಬಾರಿ ಆನೆ ಕೃಷ್ಣ, ದಸರಾ ವೈಭವ, ಆರೋಗ್ಯಕ್ಕೆ ಸಂಬಂಧಿಸಿದ, ಜನಕೇಂದ್ರಿತ, ಪರಿಸರ ಸಂರಕ್ಷಣೆಯಲ್ಲಿ ಯುವ ಜನತೆಯ ಪಾತ್ರ, ಫ್ಯೂಜನ್, ಪೌರಾಣಿಕ, ಭಾರತೀಯ ಯೋಧರ ಪಾತ್ರ, ಕೊಡವ ನೃತ್ಯ, ಕರ್ನಾಟಕ ಜಾನಪದ ಹೀಗೆ ನಾನಾ ರೀತಿಯಿಂದ ಹಲವಾರು ಕಾಲೇಜು ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನದಿಂದ ಯುವಕರನ್ನು ರಂಜಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…