ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ನಾಡು, ನುಡಿಯ ಮಹತ್ವ ಸಾರಿದ ಯುವ ಸಂಭ್ರಮ

ಮೈಸೂರು : ದಸರಾ ದಿನದಿಂದ ದಿನಕ್ಕೆ ಕಳೆಗಟ್ಟಿದೆ. ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಎರಡನೇ ದಿನದ ಯುವ ಸಂಭ್ರಮ ನಾಡು, ನುಡಿಯ ಸಂಭ್ರಮವನ್ನು ತೆರೆದಿಡುವ ಪ್ರಯತ್ನ ಮಾಡಿತು.

ವಿವೇಕಾನಂದ ಪ್ರಿಯುನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿಗಳು, ಕನ್ನಡ ನಾಡು ನುಡಿ ನೃತ್ಯಕ್ಕೆ ಹೆಜ್ಜೆ ಹಾಕಿ ಕನ್ನಡ ನಾಡು ನುಡಿಯ ಸೋಬಗನ್ನು ತೆರೆದಿಟ್ಟರು. ಡಿ.ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜಿನ ವಿದ್ಯಾರ್ಥಿಗಳು ದೇಶಭಕ್ತಿ ನೃತ್ಯ ಪ್ರದರ್ಶನ ಮಾಡಿ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸುವಂತೆ ಮಾಡಿದರು.

ಮೈಸೂರಿನ ಶ್ರೀಕಂಠೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಮೊಬೈಲ್ ಬಳಕೆ ಹಾಗೂ ಯುವಕರ ನಡಿಗೆ ಪುಸ್ತಕದ ಕಡೆಗೆ ಎಂಬ ನೃತ್ಯ ಪ್ರದರ್ಶಿಸಿ ಯುವಕರಲ್ಲಿ ಅರಿವು ಮೂಡಿಸುವ ಸಲುವಾಗಿ ಹೆಜ್ಜೆ ಹಾಕಿದರು, ಶ್ರೀ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿನ ತಂಡ ಸಮಾನತೆಯೊಂದಿಗೆ ಮಹಿಳಾ ಸಬಲೀಕರಣ ನೃತ್ಯ ಕುರಿತಾದ ನೃತ್ಯವನ್ನು ಪ್ರದರ್ಶಿಸಿದರು ಹೆಣ್ಣಿನ ಮಹತ್ವ ಸಾರಿದರು.

ಮೈಸೂರಿನ ಎಸ್.ಎನ್.ಜಿ.ಯು ಕಾಲೇಜ್ ಕಾರಣಕುಪ್ಪೆ ತಂಡದ ಅರ್ಜುನ ಆನೆ ಕುರಿತು ಮಾಡಿದ ನೃತ್ಯ ಪ್ರದರ್ಶನವೂ ಅರ್ಜುನ ಆನೆಯನ್ನು ನೆನೆಯುವಂತೆ ಮಾಡಿತು, ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನ ತಂಡವು ವಿದ್ಯಾರ್ಥಿಗಳು ಆತ್ಮಹತ್ಯೆ ಬಗ್ಗೆ ಕುರಿತು ಯುವಕರಿಗೆ ಪ್ರದರ್ಶನದ ಮೂಲಕ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ 58 ನೃತ್ಯ ‌ಪ್ರದರ್ಶನವನ್ನು ಮಾಡಲಾಯಿತು. ಮೈಥಾಲಜಿ, ನಶಮುಕ್ತ ಭಾರತ, ಕನ್ನಡ ವೈಭವ, ಶಾಸ್ತ್ರೀಯ ಕಲೆಗಳು, ಇತಿಹಾಸ ಪೌರಾಣಿಕ, ವಿಶೇಷ ಚೇತನರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪಾತ್ರ, ಭಾರತೀಯ ಯೋಧರ ಪಾತ್ರ, ರಾಷ್ಟ್ರೀಯ ಭಾವ್ಯಕ್ಯತೆ, ಪರಿಸರ ಸಂರಕ್ಷಣೆ, ಮೈಸೂರು ಮಹಾರಾಜರ ಕೊಡುಗೆ ಸೇರಿದಂತೆ ವಿವಿಧ ಥೀಮ್ ಗಳಿಗೆ ಕಾಲೇಜು ವಿದ್ಯಾರ್ಥಿಗಳು ನೃತ್ಯ ಮಾಡಿ ಪ್ರೇಕ್ಷಕರನ್ನು ರಂಜಿಸಿದರು.

ಆಂದೋಲನ ಡೆಸ್ಕ್

Recent Posts

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

16 mins ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

25 mins ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

39 mins ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

1 hour ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

1 hour ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

2 hours ago