ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ನಾಡು, ನುಡಿಯ ಮಹತ್ವ ಸಾರಿದ ಯುವ ಸಂಭ್ರಮ

ಮೈಸೂರು : ದಸರಾ ದಿನದಿಂದ ದಿನಕ್ಕೆ ಕಳೆಗಟ್ಟಿದೆ. ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಎರಡನೇ ದಿನದ ಯುವ ಸಂಭ್ರಮ ನಾಡು, ನುಡಿಯ ಸಂಭ್ರಮವನ್ನು ತೆರೆದಿಡುವ ಪ್ರಯತ್ನ ಮಾಡಿತು.

ವಿವೇಕಾನಂದ ಪ್ರಿಯುನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿಗಳು, ಕನ್ನಡ ನಾಡು ನುಡಿ ನೃತ್ಯಕ್ಕೆ ಹೆಜ್ಜೆ ಹಾಕಿ ಕನ್ನಡ ನಾಡು ನುಡಿಯ ಸೋಬಗನ್ನು ತೆರೆದಿಟ್ಟರು. ಡಿ.ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜಿನ ವಿದ್ಯಾರ್ಥಿಗಳು ದೇಶಭಕ್ತಿ ನೃತ್ಯ ಪ್ರದರ್ಶನ ಮಾಡಿ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸುವಂತೆ ಮಾಡಿದರು.

ಮೈಸೂರಿನ ಶ್ರೀಕಂಠೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಮೊಬೈಲ್ ಬಳಕೆ ಹಾಗೂ ಯುವಕರ ನಡಿಗೆ ಪುಸ್ತಕದ ಕಡೆಗೆ ಎಂಬ ನೃತ್ಯ ಪ್ರದರ್ಶಿಸಿ ಯುವಕರಲ್ಲಿ ಅರಿವು ಮೂಡಿಸುವ ಸಲುವಾಗಿ ಹೆಜ್ಜೆ ಹಾಕಿದರು, ಶ್ರೀ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿನ ತಂಡ ಸಮಾನತೆಯೊಂದಿಗೆ ಮಹಿಳಾ ಸಬಲೀಕರಣ ನೃತ್ಯ ಕುರಿತಾದ ನೃತ್ಯವನ್ನು ಪ್ರದರ್ಶಿಸಿದರು ಹೆಣ್ಣಿನ ಮಹತ್ವ ಸಾರಿದರು.

ಮೈಸೂರಿನ ಎಸ್.ಎನ್.ಜಿ.ಯು ಕಾಲೇಜ್ ಕಾರಣಕುಪ್ಪೆ ತಂಡದ ಅರ್ಜುನ ಆನೆ ಕುರಿತು ಮಾಡಿದ ನೃತ್ಯ ಪ್ರದರ್ಶನವೂ ಅರ್ಜುನ ಆನೆಯನ್ನು ನೆನೆಯುವಂತೆ ಮಾಡಿತು, ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನ ತಂಡವು ವಿದ್ಯಾರ್ಥಿಗಳು ಆತ್ಮಹತ್ಯೆ ಬಗ್ಗೆ ಕುರಿತು ಯುವಕರಿಗೆ ಪ್ರದರ್ಶನದ ಮೂಲಕ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ 58 ನೃತ್ಯ ‌ಪ್ರದರ್ಶನವನ್ನು ಮಾಡಲಾಯಿತು. ಮೈಥಾಲಜಿ, ನಶಮುಕ್ತ ಭಾರತ, ಕನ್ನಡ ವೈಭವ, ಶಾಸ್ತ್ರೀಯ ಕಲೆಗಳು, ಇತಿಹಾಸ ಪೌರಾಣಿಕ, ವಿಶೇಷ ಚೇತನರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪಾತ್ರ, ಭಾರತೀಯ ಯೋಧರ ಪಾತ್ರ, ರಾಷ್ಟ್ರೀಯ ಭಾವ್ಯಕ್ಯತೆ, ಪರಿಸರ ಸಂರಕ್ಷಣೆ, ಮೈಸೂರು ಮಹಾರಾಜರ ಕೊಡುಗೆ ಸೇರಿದಂತೆ ವಿವಿಧ ಥೀಮ್ ಗಳಿಗೆ ಕಾಲೇಜು ವಿದ್ಯಾರ್ಥಿಗಳು ನೃತ್ಯ ಮಾಡಿ ಪ್ರೇಕ್ಷಕರನ್ನು ರಂಜಿಸಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

39 mins ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

51 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

2 hours ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

3 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

3 hours ago