ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ನಾಡು, ನುಡಿಯ ಮಹತ್ವ ಸಾರಿದ ಯುವ ಸಂಭ್ರಮ

ಮೈಸೂರು : ದಸರಾ ದಿನದಿಂದ ದಿನಕ್ಕೆ ಕಳೆಗಟ್ಟಿದೆ. ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಎರಡನೇ ದಿನದ ಯುವ ಸಂಭ್ರಮ ನಾಡು, ನುಡಿಯ ಸಂಭ್ರಮವನ್ನು ತೆರೆದಿಡುವ ಪ್ರಯತ್ನ ಮಾಡಿತು.

ವಿವೇಕಾನಂದ ಪ್ರಿಯುನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿಗಳು, ಕನ್ನಡ ನಾಡು ನುಡಿ ನೃತ್ಯಕ್ಕೆ ಹೆಜ್ಜೆ ಹಾಕಿ ಕನ್ನಡ ನಾಡು ನುಡಿಯ ಸೋಬಗನ್ನು ತೆರೆದಿಟ್ಟರು. ಡಿ.ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜಿನ ವಿದ್ಯಾರ್ಥಿಗಳು ದೇಶಭಕ್ತಿ ನೃತ್ಯ ಪ್ರದರ್ಶನ ಮಾಡಿ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸುವಂತೆ ಮಾಡಿದರು.

ಮೈಸೂರಿನ ಶ್ರೀಕಂಠೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಮೊಬೈಲ್ ಬಳಕೆ ಹಾಗೂ ಯುವಕರ ನಡಿಗೆ ಪುಸ್ತಕದ ಕಡೆಗೆ ಎಂಬ ನೃತ್ಯ ಪ್ರದರ್ಶಿಸಿ ಯುವಕರಲ್ಲಿ ಅರಿವು ಮೂಡಿಸುವ ಸಲುವಾಗಿ ಹೆಜ್ಜೆ ಹಾಕಿದರು, ಶ್ರೀ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿನ ತಂಡ ಸಮಾನತೆಯೊಂದಿಗೆ ಮಹಿಳಾ ಸಬಲೀಕರಣ ನೃತ್ಯ ಕುರಿತಾದ ನೃತ್ಯವನ್ನು ಪ್ರದರ್ಶಿಸಿದರು ಹೆಣ್ಣಿನ ಮಹತ್ವ ಸಾರಿದರು.

ಮೈಸೂರಿನ ಎಸ್.ಎನ್.ಜಿ.ಯು ಕಾಲೇಜ್ ಕಾರಣಕುಪ್ಪೆ ತಂಡದ ಅರ್ಜುನ ಆನೆ ಕುರಿತು ಮಾಡಿದ ನೃತ್ಯ ಪ್ರದರ್ಶನವೂ ಅರ್ಜುನ ಆನೆಯನ್ನು ನೆನೆಯುವಂತೆ ಮಾಡಿತು, ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನ ತಂಡವು ವಿದ್ಯಾರ್ಥಿಗಳು ಆತ್ಮಹತ್ಯೆ ಬಗ್ಗೆ ಕುರಿತು ಯುವಕರಿಗೆ ಪ್ರದರ್ಶನದ ಮೂಲಕ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ 58 ನೃತ್ಯ ‌ಪ್ರದರ್ಶನವನ್ನು ಮಾಡಲಾಯಿತು. ಮೈಥಾಲಜಿ, ನಶಮುಕ್ತ ಭಾರತ, ಕನ್ನಡ ವೈಭವ, ಶಾಸ್ತ್ರೀಯ ಕಲೆಗಳು, ಇತಿಹಾಸ ಪೌರಾಣಿಕ, ವಿಶೇಷ ಚೇತನರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪಾತ್ರ, ಭಾರತೀಯ ಯೋಧರ ಪಾತ್ರ, ರಾಷ್ಟ್ರೀಯ ಭಾವ್ಯಕ್ಯತೆ, ಪರಿಸರ ಸಂರಕ್ಷಣೆ, ಮೈಸೂರು ಮಹಾರಾಜರ ಕೊಡುಗೆ ಸೇರಿದಂತೆ ವಿವಿಧ ಥೀಮ್ ಗಳಿಗೆ ಕಾಲೇಜು ವಿದ್ಯಾರ್ಥಿಗಳು ನೃತ್ಯ ಮಾಡಿ ಪ್ರೇಕ್ಷಕರನ್ನು ರಂಜಿಸಿದರು.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

1 hour ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

3 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago