ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ನಾಡು, ನುಡಿಯ ಮಹತ್ವ ಸಾರಿದ ಯುವ ಸಂಭ್ರಮ

ಮೈಸೂರು : ದಸರಾ ದಿನದಿಂದ ದಿನಕ್ಕೆ ಕಳೆಗಟ್ಟಿದೆ. ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಎರಡನೇ ದಿನದ ಯುವ ಸಂಭ್ರಮ ನಾಡು, ನುಡಿಯ ಸಂಭ್ರಮವನ್ನು ತೆರೆದಿಡುವ ಪ್ರಯತ್ನ ಮಾಡಿತು.

ವಿವೇಕಾನಂದ ಪ್ರಿಯುನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿಗಳು, ಕನ್ನಡ ನಾಡು ನುಡಿ ನೃತ್ಯಕ್ಕೆ ಹೆಜ್ಜೆ ಹಾಕಿ ಕನ್ನಡ ನಾಡು ನುಡಿಯ ಸೋಬಗನ್ನು ತೆರೆದಿಟ್ಟರು. ಡಿ.ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜಿನ ವಿದ್ಯಾರ್ಥಿಗಳು ದೇಶಭಕ್ತಿ ನೃತ್ಯ ಪ್ರದರ್ಶನ ಮಾಡಿ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸುವಂತೆ ಮಾಡಿದರು.

ಮೈಸೂರಿನ ಶ್ರೀಕಂಠೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಮೊಬೈಲ್ ಬಳಕೆ ಹಾಗೂ ಯುವಕರ ನಡಿಗೆ ಪುಸ್ತಕದ ಕಡೆಗೆ ಎಂಬ ನೃತ್ಯ ಪ್ರದರ್ಶಿಸಿ ಯುವಕರಲ್ಲಿ ಅರಿವು ಮೂಡಿಸುವ ಸಲುವಾಗಿ ಹೆಜ್ಜೆ ಹಾಕಿದರು, ಶ್ರೀ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿನ ತಂಡ ಸಮಾನತೆಯೊಂದಿಗೆ ಮಹಿಳಾ ಸಬಲೀಕರಣ ನೃತ್ಯ ಕುರಿತಾದ ನೃತ್ಯವನ್ನು ಪ್ರದರ್ಶಿಸಿದರು ಹೆಣ್ಣಿನ ಮಹತ್ವ ಸಾರಿದರು.

ಮೈಸೂರಿನ ಎಸ್.ಎನ್.ಜಿ.ಯು ಕಾಲೇಜ್ ಕಾರಣಕುಪ್ಪೆ ತಂಡದ ಅರ್ಜುನ ಆನೆ ಕುರಿತು ಮಾಡಿದ ನೃತ್ಯ ಪ್ರದರ್ಶನವೂ ಅರ್ಜುನ ಆನೆಯನ್ನು ನೆನೆಯುವಂತೆ ಮಾಡಿತು, ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನ ತಂಡವು ವಿದ್ಯಾರ್ಥಿಗಳು ಆತ್ಮಹತ್ಯೆ ಬಗ್ಗೆ ಕುರಿತು ಯುವಕರಿಗೆ ಪ್ರದರ್ಶನದ ಮೂಲಕ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ 58 ನೃತ್ಯ ‌ಪ್ರದರ್ಶನವನ್ನು ಮಾಡಲಾಯಿತು. ಮೈಥಾಲಜಿ, ನಶಮುಕ್ತ ಭಾರತ, ಕನ್ನಡ ವೈಭವ, ಶಾಸ್ತ್ರೀಯ ಕಲೆಗಳು, ಇತಿಹಾಸ ಪೌರಾಣಿಕ, ವಿಶೇಷ ಚೇತನರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪಾತ್ರ, ಭಾರತೀಯ ಯೋಧರ ಪಾತ್ರ, ರಾಷ್ಟ್ರೀಯ ಭಾವ್ಯಕ್ಯತೆ, ಪರಿಸರ ಸಂರಕ್ಷಣೆ, ಮೈಸೂರು ಮಹಾರಾಜರ ಕೊಡುಗೆ ಸೇರಿದಂತೆ ವಿವಿಧ ಥೀಮ್ ಗಳಿಗೆ ಕಾಲೇಜು ವಿದ್ಯಾರ್ಥಿಗಳು ನೃತ್ಯ ಮಾಡಿ ಪ್ರೇಕ್ಷಕರನ್ನು ರಂಜಿಸಿದರು.

ಆಂದೋಲನ ಡೆಸ್ಕ್

Recent Posts

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

47 mins ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

55 mins ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

6 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

6 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

6 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

7 hours ago