Mysore
26
overcast clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

ಮೈಸೂರು| ಮಾವುತ, ಕಾವಾಡಿಗಳ ಕುಟುಂಬದ ಮಹಿಳೆಯರಿಗೆ ಬಾಗಿನ ವಿತರಣೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗಳ ಕುಟುಂಬದ ಮಹಿಳೆಯರಿಗೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳಿಂದ ಬಾಗಿನ ವಿತರಣೆ ಮಾಡಲಾಯಿತು.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಳೆದ ಒಂದೂವರೆ ತಿಂಗಳಿನಿಂದ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರ ಕುಟುಂಬದ ಮಹಿಳೆಯರಿಗೆ ಅರಿಶಿಣ, ಕುಂಕುಮ, ಬಳೆ, ಸೀರೆ ನೀಡುವ ಮೂಲಕ ಬಾಗಿನ ವಿತರಣೆ ಮಾಡಲಾಯಿತು. ಈ ವೇಳೆ ಬಾಗಿನ ಸ್ವೀಕರಿಸಿ ಮಹಿಳೆಯರು ಖುಷಿಪಟ್ಟರು.

Tags:
error: Content is protected !!