ನಮ್ಮ ಮೈಸೂರ ದಸರಾ 2025

Mysuru dasara | ಮೈಸೂರಿಗೆ 610 ವಿಶೇಷ ಬಸ್ ; ದಿನದ ಪ್ರವಾಸಕ್ಕೆ ವಿಶೇಷ ಪ್ಯಾಕೇಜ್‌

ಮೈಸೂರು : ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ಬಸ್ ಸೇರಿದಂತೆ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣ ಸೇರಿದಂತೆ 610 ಬಸ್‌ಗಳನ್ನು ಒದಗಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್ ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು, ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 350 ಹೆಚ್ಚುವರಿ ಬಸ್‍ಗಳು ಸೇರಿದಂತೆ ಒಟ್ಟಾರೆ 610 ದಸರಾ ವಿಶೇಷ ಬಸ್‍ಗಳನ್ನು ಒದಗಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ.

ಒಂದು ದಿನದ ವಿಶೇಷ ಪ್ರವಾಸ ಸಾರಿಗೆ

ಗಿರಿದರ್ಶಿನಿ : ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ (ಪ್ರಯಾಣದರ ವಯಸ್ಕರಿಗೆ: 450 ರೂ. ಮಕ್ಕಳಿಗೆ 300 ರೂ.)

ಜಲದರ್ಶಿನಿ: ಗೋಲ್ಡನ್‍ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ.ಆರ್.ಎಸ್. (ಪ್ರಯಾಣದರ ವಯಸ್ಕರಿಗೆ:.500 ರೂ. ಮತ್ತು ಮಕ್ಕಳಿಗೆ 350)

ದೇವದರ್ಶಿನಿ: ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ಪ್ರಯಾಣದರ ವಯಸ್ಕರಿಗೆ: 330 ರೂ. ಮತ್ತು ಮಕ್ಕಳಿಗೆ 225 ರೂ.)
ಈ ಪ್ಯಾಕೇಜ್‍ಗಳನ್ನು ಸೆ.27ರಿಂದ ಅ.7ರವರೆಗೆ ಕಲ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

30 mins ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

1 hour ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

5 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

5 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

5 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

5 hours ago