ಮೈಸೂರು : ಕೆಂಪು ಮತ್ತು ಬಿಳಿ ಬಣ್ಣದ ಹೊಗೆಯನ್ನಾರಿಸುವುದರ ಜೊತೆಗೆ ಬೆಂಕಿಯ ಉಂಡೆಗಳನ್ನು ಉಗುಳುತ್ತಾ ನಾ ಮುಂದೆ, ನೀ ನನ್ನ ಹಿಂದೆ ಎಂಬಂತೆ ಬಾನಂಗಳದಲ್ಲಿ ಲೋಹದ ಹಕ್ಕಿಗಳು ವೈಮಾನಿಕ ಹಾರಾಟದ ಮೂಲಕ ತನ್ನ ಯಶಸ್ಸು ಮತ್ತು ಧೈರ್ಯವನ್ನು ಪ್ರದರ್ಶಿಸುತ್ತಿದ್ದರೆ, ಇತ್ತ ಮೈಸೂರಿನ ಜನರು ಶಿಳ್ಳೆ, ಚಪ್ಪಾಳೆ ಹಾಗೂ ಜೋರಾದ ಚೀತ್ಕಾರದೊಂದಿಗೆ ಸಂಭ್ರಮಿಸಿದರು.
ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ ಮತ್ತು ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ನಗರದ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಭಾರತೀಯ ವಾಯುಪಡೆ(ಐ.ಎ.ಎಫ್) ಸಾರಂಗ ತಂಡದಿಂದ ನಡೆದ ವೈಮಾನಿಕ ಪ್ರದರ್ಶನದಲ್ಲಿ ನವಿಲಿನ ಚಿತ್ತಾರವಿರುವ ಲೋಹದ ಹಕ್ಕಿಗಳು ನೆರೆದಿದ್ದವರು ಲೋಹದ ಹಕ್ಕಿಯ ಚಮತ್ಕಾರಿ ಪ್ರದರ್ಶನಕ್ಕೆ ಮಾರುಹೋದರು.
ಇದನ್ನೂ ಓದಿ:-ಶ್ರೀರಂಗಪಟ್ಟಣ | ಎಚ್ಐವಿ,ಏಡ್ಸ್ ಜಾಗೃತಿಗೆ ರೆಡ್ ರನ್ ಮ್ಯಾರಥಾನ್
ಸುಮಾರು 22 ರಿಂದ 25 ನಿಮಿಷಗಳ ಕಾಲ ಶರವೇಗದಲ್ಲಿ ನಡೆದಂತಹ ವೈಮಾನಿಕ ಹಾರಾಟದಲ್ಲಿ ಡಾಲ್ಫೀನ್ ಸ್ಲೀಪ್, ಸಾರಂಗ್ ಸ್ಪ್ಲೀಟ್, ಹಾರ್ಟ್ ಫಾರ್ಮೇಷನ್, ಡಿವೈನ್ ಗ್ಲಾಸ್, ಡಬಲ್ ಏರೋ ಕ್ರಾಸ್ ಸೇರಿದಂತೆ ಒಟ್ಟು 16 ರೀತಿಯ ಮಾದರಿಗಳನ್ನು ವೈಮಾನಿಕ ಪ್ರದರ್ಶನದಲ್ಲಿ ಪ್ರದರ್ಶಿಸಲಾಯಿತು. ಇದಕ್ಕಾಗಿ ಒಟ್ಟು 70 ಸಿಬ್ಬಂದಿಗಳು ಶ್ರಮಿಸಿದ್ದು, ಐದು ಸಾರಂಗಗಳು ಅತ್ಯದ್ಭುತವಾದ ಪ್ರದರ್ಶನ ನೀಡುವ ಮೂಲಕ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಮಂದಿಯ ಮನಸ್ಸನ್ನು ಸೂರೆ ಮಾಡಿದರು.
ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖಾ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಡಿ ರವಿಶಂಕರ್, ವಿಧಾನ ಪರಿಷತ್ ಸದಸ್ಯರಾದ ವಿವೇಕಾನಂದ, ಕೆ.ಶಿವಕುಮಾರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…