ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ನೀಲಾಗಸದಲ್ಲಿ ಉಕ್ಕಿನ ಹಕ್ಕಿಗಳ ರಂಗಿನಾಟ

ಮೈಸೂರು : ಕೆಂಪು ಮತ್ತು ಬಿಳಿ ಬಣ್ಣದ ಹೊಗೆಯನ್ನಾರಿಸುವುದರ ಜೊತೆಗೆ ಬೆಂಕಿಯ ಉಂಡೆಗಳನ್ನು ಉಗುಳುತ್ತಾ ನಾ ಮುಂದೆ, ನೀ‌ ನನ್ನ ಹಿಂದೆ ಎಂಬಂತೆ ಬಾನಂಗಳದಲ್ಲಿ ಲೋಹದ ಹಕ್ಕಿಗಳು ವೈಮಾನಿಕ ಹಾರಾಟದ ಮೂಲಕ ತನ್ನ ಯಶಸ್ಸು ಮತ್ತು ಧೈರ್ಯವನ್ನು ಪ್ರದರ್ಶಿಸುತ್ತಿದ್ದರೆ, ಇತ್ತ ಮೈಸೂರಿನ ಜನರು ಶಿಳ್ಳೆ, ಚಪ್ಪಾಳೆ ಹಾಗೂ ಜೋರಾದ ಚೀತ್ಕಾರದೊಂದಿಗೆ ಸಂಭ್ರಮಿಸಿದರು.

ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ ಮತ್ತು‌ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ನಗರದ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಭಾರತೀಯ ವಾಯುಪಡೆ(ಐ.ಎ.ಎಫ್) ಸಾರ‌ಂಗ ತಂಡದಿಂದ ನಡೆದ ವೈಮಾನಿಕ ಪ್ರದರ್ಶನದಲ್ಲಿ ನವಿಲಿನ ಚಿತ್ತಾರವಿರುವ ಲೋಹದ ಹಕ್ಕಿಗಳು ನೆರೆದಿದ್ದವರು ಲೋಹದ ಹಕ್ಕಿಯ ಚಮತ್ಕಾರಿ ಪ್ರದರ್ಶನಕ್ಕೆ ಮಾರುಹೋದರು.

ಇದನ್ನೂ ಓದಿ:-ಶ್ರೀರಂಗಪಟ್ಟಣ | ಎಚ್‌ಐವಿ,ಏಡ್ಸ್‌ ಜಾಗೃತಿಗೆ ರೆಡ್‌ ರನ್‌ ಮ್ಯಾರಥಾನ್‌

ಸುಮಾರು 22 ರಿಂದ‌ 25 ನಿಮಿಷಗಳ‌ ಕಾಲ‌ ಶರವೇಗದಲ್ಲಿ ನಡೆದಂತಹ ವೈಮಾನಿಕ ಹಾರಾಟದಲ್ಲಿ ಡಾಲ್ಫೀನ್ ಸ್ಲೀಪ್, ಸಾರಂಗ್ ಸ್ಪ್ಲೀಟ್, ಹಾರ್ಟ್ ಫಾರ್ಮೇಷನ್, ಡಿವೈನ್ ಗ್ಲಾಸ್, ಡಬಲ್ ಏರೋ ಕ್ರಾಸ್ ಸೇರಿದಂತೆ ಒಟ್ಟು 16 ರೀತಿಯ ಮಾದರಿಗಳನ್ನು ವೈಮಾನಿಕ ಪ್ರದರ್ಶನದಲ್ಲಿ ಪ್ರದರ್ಶಿಸಲಾಯಿತು. ಇದಕ್ಕಾಗಿ ಒಟ್ಟು 70 ಸಿಬ್ಬಂದಿಗಳು ಶ್ರಮಿಸಿದ್ದು, ಐದು ಸಾರಂಗಗಳು ಅತ್ಯದ್ಭುತವಾದ ಪ್ರದರ್ಶನ‌ ನೀಡುವ ಮೂಲಕ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಮಂದಿಯ ಮನಸ್ಸನ್ನು ಸೂರೆ ಮಾಡಿದರು.

ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ, ಪಶುಸಂಗೋಪನೆ‌ ಮತ್ತು ರೇಷ್ಮೆ ಇಲಾಖಾ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಡಿ ರವಿಶಂಕರ್, ವಿಧಾನ ಪರಿಷತ್‌ ಸದಸ್ಯರಾದ ವಿವೇಕಾನಂದ, ಕೆ.ಶಿವಕುಮಾರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

4 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

4 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

4 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

4 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

4 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

4 hours ago