dasara
ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯುವ, ಯುವಕ-ಯುವತಿಯರ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವ ಯುವ ಸಂಭ್ರಮಕ್ಕೆ ಬುಧವಾರ ಸಂಜೆ ಮೈಸೂರು ವಿವಿಯ ಬಯಲು ರಂಗಮಂದಿರದಲ್ಲಿ ಚಾಲನೆ ಸಿಕ್ಕಿದೆ.
ನಟ ಯುವ ರಾಜಕುಮಾರ್ ಹಾಗೂ ಮೈಸೂರಿನ ಅಮೃತ ಅಯ್ಯಂಗಾರ್ ಯುವ ಸಂಭ್ರಮಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಸಚಿವ ಕೆ.ವೆಂಕಟೇಶ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾಥ್ ನೀಡಿದರು.
ದಸರಾ ಮಹೋತ್ಸವದ ಅಂಗವಾಗಿ ನಡೆಯುವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಹಬ್ಬವಾದ ಯುವ ಸಂಭ್ರಮ ಸೆ.10ರಿಂದ 17ರವರೆಗೆ ನಡೆಯಲಿದ್ದು, 500 ಕಾಲೇಜಿನ ವಿದ್ಯಾರ್ಥಿಗಳು ವೈವಿಧ್ಯಮಯ ನೃತ್ಯ ಅಭಿನಯದ ಮೂಲಕ ರಂಜಿಸಲಿದ್ದಾರೆ. ರಾಜ್ಯದ ಜಾನಪದ ನೃತ್ಯಗಳು, ಜಿಲ್ಲಾ ಕೇಂದ್ರಿತ ಪ್ರಸಿದ್ದ ನೃತ್ಯ ಪ್ರಕಾರಗಳು, ಕನ್ನಡ ಸಿನಿಮಾ ಆಧಾರಿತ ಆಧುನಿಕ ನೃತ್ಯಗಳು, ಸಾಹಿತ್ಯ, ದೇಶಭಕ್ತಿ, ಮಹಿಳಾ ಸಬಲೀಕರಣ, ಪರಿಸರ-ಅರಣ್ಯ, ಆಡಳಿತ, ಸಾಮಾಜಿಕ ನ್ಯಾಯ, ವಿಜ್ಞಾನ-ತಂತ್ರಜ್ಞಾನ, ಇತಿಹಾಸ-ಪುರಾಣ, ಅಂಗವಿಕಲರ ಯಶೋಗಾಥೆಗಳು, ಶಿಕ್ಷಣ, ಕ್ರೀಡೆ, ಜನಕೇಂದ್ರಿತ, ಆರೋಗ್ಯ ಹೀಗೆ ನಿರ್ದಿಷ್ಟ ಥೀಮ್ ಆಧಾರಿತ ನೃತ್ಯರೂಪಕಗಳನ್ನು ವಿದ್ಯಾರ್ಥಿಗಳು ಪ್ರಸ್ತುತಪಡಿಸಲಿದ್ದಾರೆ.
ಪ್ರತಿದಿನ ಸಂಜೆ 4ರಿಂದ ರಾತ್ರಿ 10.30ರವರೆಗೆ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನವಿರಲಿದೆ. ಆಯ್ದ ತಂಡಗಳಿಗೆ ನವರಾತ್ರಿ ಸಂದರ್ಭದಲ್ಲಿ ನಡೆಯುವ ಯುವ ದಸರಾ ವೇದಿಕೆಯಲ್ಲೂ ಪ್ರದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಸಿನಿ ತಾರೆಯರ ಮೆರಗು
ಯುವ ಸಂಭ್ರಮದ ಉದ್ಘಾಟನಾ ಸಮಾರಂಭಕ್ಕೆ ಪ್ರತಿವರ್ಷದಂತೆ ಈ ಬಾರಿ ಕೂಡ ಸಿನಿಮಾ ತಾರೆಯರು ಮೆರಗು ನೀಡಿದರು.
ಪ್ರತಿಭೆ ಅನಾವರಣಕ್ಕೆ ಸಾಕ್ಷಿ
ದಸರಾ ಹಿನ್ನೆಲೆಯಲ್ಲಿ ಹತ್ತು ದಿನಗಳು ನಡೆಯುವ ಯುವ ಸಂಭ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಹಲವು ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆ. ಪ್ರಮುಖವಾಗಿ ಮೈಸೂರು, ಮಂಡ್ಯ, ಹಾಸನ, ಮಂಗಳೂರು, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳ ತಂಡ ವಿವಿಧ ವಿಷಯಗಳಿಂದ ಕೂಡಿದ ಹಾಡು, ನೃತ್ಯ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನದ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…