ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.
ದೇಶ, ವಿದೇಶದ ಶ್ವಾನಗಳು ತಮ್ಮ ತುಂಟಾಟ, ಬೆಡಗು ಬಿನ್ನಾಣದಲ್ಲಿ ಹೆಜ್ಜೆ ಹಾಕುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿ ನೂರಾರು ಮಂದಿಯನ್ನು ಆಕರ್ಷಿಸಿದವು.
ಶ್ವಾನಗಳ ಆಟ-ಪಾಠ, ಬುದ್ಧಿವಂತಿಕೆ, ಜಾಣ್ಮೆ, ಮುಗ್ಧತೆ, ತುಂಟಾಟ, ತಾಳ್ಮೆ ಹಾಗೂ ಅವುಗಳ ಪ್ರೀತಿಯನ್ನು ಪ್ರದರ್ಶನದಲ್ಲಿ ನೆರೆದಿದಂತಹ ಪ್ರೇಕ್ಷಕರು ಕಣ್ತುಂಬಿಕೊಂಡರು. ಪ್ರಾಣಿಪ್ರಿಯರಿಗೆ ಇದೊಂದು ಉತ್ತಮ ವೇದಿಕೆಯಾಗಿದ್ದು, ಮುದ್ದು ಮುದ್ದಾದ ಶ್ವಾನಗಳನ್ನು ಕಂಡು ಪ್ರಾಣಿ ಪ್ರಿಯರು ಖುಷಿ ಪಟ್ಟರು.
ಕೆಲವು ಶ್ವಾನಗಳಿಗೆ ಪಿಂಕ್ ಮತ್ತು ಪರ್ಪಲ್ ಕಲರ್ ಬಟ್ಟೆಯನ್ನು ಧರಿಸಿ ಪ್ರದರ್ಶನ ನೀಡುವುದರ ಮೂಲಕ ಹೆಚ್ಚು ಗಮನ ಸೆಳೆದವು. ಪ್ರದರ್ಶನದಲ್ಲಿ ನೆರೆದಿದ್ದ ಮಕ್ಕಳು ಶ್ವಾನಗಳನ್ನು ಕಂಡು ತುಂಬಾ ಸಂತೋಷ ಪಟ್ಟರು.
ಇದನ್ನೂ ಓದಿ:-ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ: ಮೋದಿ ಸರ್ಕಾರ ರಾಜ್ಯದ ಪರ ನಿಲ್ಲುತ್ತದೆ ಎಂದ ಎಚ್ಡಿಕೆ
ಇಂದು ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಜೆ..ಕೆ.ಮೈದಾನದಲ್ಲಿ ನಡೆದ “ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯ” ಕಾರ್ಯಕ್ರಮದಲ್ಲಿ ಸಿಲುಕಿ, ಮುಧೋಳ ಹೌಂಡ್, ಸೈಬೀರಿಯನ್ ಹಸ್ಕಿ, ಗ್ರೇಟ್ ಡೆನ್, ಪೂಡ್ಲೀ, ಡಾಗೂ ಅರ್ಜೆಂಟೀನಾ, ರಾಜ ಪುಲಿಯಂ, ಪಿಟ್ ಬುಲ್, ಕಾಕರ್ ಸ್ಪ್ಯಾನಿಯಲ್, ಬಾಕ್ಸರ್, ಪಗ್, ಕೊಕ್ಕೊಪೋ, ಪ್ರೆಂಚ್ ಬುಲ್ ಡಾಗ್, ಓಲ್ಡ್ ಶೀಪ್ ಡಾಗ್, ಐರಿಷ್ ಸೆಟ್ಟರ್ ಬೀಗಲ್, ಡಚ್ ಶೆಪರ್ಡ್, ಜರ್ಮನ್ ಶೆಪರ್ಡ್, ಚೌ ಚೌ, ಗೋಲ್ಡನ್ ರಿಟ್ರೀವರ್, ಬಾರ್ಡರ್ ಕೋಲಿ, ಬರ್ಮೀಸ್ ಮೌಂಟೇನ್ ಡಾಗ್, ಲಾಸ್ ಅಪ್ಸೋ, ಸೇರಿಂದಂತೆ ಮತ್ತಿತರ ಶ್ವಾನಗಳು ಪ್ರದರ್ಶನ ನೀಡಿದವು.
ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಉತ್ತಮ ತಳಿಗಳ ಶ್ವಾನಗಳನ್ನು ಶ್ವಾನ ವೈದ್ಯಾಧಿಕಾರಿಗಳು ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಅನುಭವ ಹೊಂದಿರುವಂತಹ ತೀರ್ಪುಗಾರರಿಂದ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ವಿತರಿಸಲಾಯಿತು.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…