ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ: ಪ್ರೇಕ್ಷಕರ ಕಣ್ಮನ ಸೆಳೆದ ಮುದ್ದು ಪ್ರಾಣಿಗಳ ಪ್ರದರ್ಶನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.

ದೇಶ, ವಿದೇಶದ ಶ್ವಾನಗಳು ತಮ್ಮ ತುಂಟಾಟ, ಬೆಡಗು ಬಿನ್ನಾಣದಲ್ಲಿ ಹೆಜ್ಜೆ ಹಾಕುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿ ನೂರಾರು ಮಂದಿಯನ್ನು ಆಕರ್ಷಿಸಿದವು.

ಶ್ವಾನಗಳ ಆಟ-ಪಾಠ, ಬುದ್ಧಿವಂತಿಕೆ, ಜಾಣ್ಮೆ, ಮುಗ್ಧತೆ, ತುಂಟಾಟ, ತಾಳ್ಮೆ ಹಾಗೂ ಅವುಗಳ ಪ್ರೀತಿಯನ್ನು ಪ್ರದರ್ಶನದಲ್ಲಿ ನೆರೆದಿದಂತಹ ಪ್ರೇಕ್ಷಕರು ಕಣ್ತುಂಬಿಕೊಂಡರು. ಪ್ರಾಣಿಪ್ರಿಯರಿಗೆ ಇದೊಂದು ಉತ್ತಮ ವೇದಿಕೆಯಾಗಿದ್ದು, ಮುದ್ದು ಮುದ್ದಾದ ಶ್ವಾನಗಳನ್ನು ಕಂಡು ಪ್ರಾಣಿ ಪ್ರಿಯರು ಖುಷಿ ಪಟ್ಟರು.

ಕೆಲವು ಶ್ವಾನಗಳಿಗೆ ಪಿಂಕ್ ಮತ್ತು ಪರ್ಪಲ್ ಕಲರ್ ಬಟ್ಟೆಯನ್ನು ಧರಿಸಿ ಪ್ರದರ್ಶನ ನೀಡುವುದರ ಮೂಲಕ ಹೆಚ್ಚು ಗಮನ ಸೆಳೆದವು. ಪ್ರದರ್ಶನದಲ್ಲಿ ನೆರೆದಿದ್ದ ಮಕ್ಕಳು ಶ್ವಾನಗಳನ್ನು ಕಂಡು ತುಂಬಾ ಸಂತೋಷ ಪಟ್ಟರು.

ಇದನ್ನೂ ಓದಿ:-ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ: ಮೋದಿ ಸರ್ಕಾರ ರಾಜ್ಯದ ಪರ ನಿಲ್ಲುತ್ತದೆ ಎಂದ ಎಚ್‌ಡಿಕೆ

ಇಂದು ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಜೆ..ಕೆ.ಮೈದಾನದಲ್ಲಿ ನಡೆದ “ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯ” ಕಾರ್ಯಕ್ರಮದಲ್ಲಿ ಸಿಲುಕಿ, ಮುಧೋಳ ಹೌಂಡ್, ಸೈಬೀರಿಯನ್ ಹಸ್ಕಿ, ಗ್ರೇಟ್ ಡೆನ್, ಪೂಡ್ಲೀ, ಡಾಗೂ ಅರ್ಜೆಂಟೀನಾ, ರಾಜ ಪುಲಿಯಂ, ಪಿಟ್ ಬುಲ್, ಕಾಕರ್ ಸ್ಪ್ಯಾನಿಯಲ್, ಬಾಕ್ಸರ್, ಪಗ್, ಕೊಕ್ಕೊಪೋ, ಪ್ರೆಂಚ್ ಬುಲ್ ಡಾಗ್, ಓಲ್ಡ್ ಶೀಪ್ ಡಾಗ್, ಐರಿಷ್ ಸೆಟ್ಟರ್ ಬೀಗಲ್, ಡಚ್ ಶೆಪರ್ಡ್, ಜರ್ಮನ್ ಶೆಪರ್ಡ್, ಚೌ ಚೌ, ಗೋಲ್ಡನ್ ರಿಟ್ರೀವರ್, ಬಾರ್ಡರ್ ಕೋಲಿ, ಬರ್ಮೀಸ್ ಮೌಂಟೇನ್ ಡಾಗ್, ಲಾಸ್ ಅಪ್ಸೋ, ಸೇರಿಂದಂತೆ ಮತ್ತಿತರ ಶ್ವಾನಗಳು ಪ್ರದರ್ಶನ ನೀಡಿದವು.

ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಉತ್ತಮ ತಳಿಗಳ ಶ್ವಾನಗಳನ್ನು ಶ್ವಾನ ವೈದ್ಯಾಧಿಕಾರಿಗಳು ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಅನುಭವ ಹೊಂದಿರುವಂತಹ ತೀರ್ಪುಗಾರರಿಂದ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ವಿತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

6 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

7 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

8 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

9 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

13 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

16 hours ago