ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ: ಪ್ರೇಕ್ಷಕರ ಕಣ್ಮನ ಸೆಳೆದ ಮುದ್ದು ಪ್ರಾಣಿಗಳ ಪ್ರದರ್ಶನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.

ದೇಶ, ವಿದೇಶದ ಶ್ವಾನಗಳು ತಮ್ಮ ತುಂಟಾಟ, ಬೆಡಗು ಬಿನ್ನಾಣದಲ್ಲಿ ಹೆಜ್ಜೆ ಹಾಕುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿ ನೂರಾರು ಮಂದಿಯನ್ನು ಆಕರ್ಷಿಸಿದವು.

ಶ್ವಾನಗಳ ಆಟ-ಪಾಠ, ಬುದ್ಧಿವಂತಿಕೆ, ಜಾಣ್ಮೆ, ಮುಗ್ಧತೆ, ತುಂಟಾಟ, ತಾಳ್ಮೆ ಹಾಗೂ ಅವುಗಳ ಪ್ರೀತಿಯನ್ನು ಪ್ರದರ್ಶನದಲ್ಲಿ ನೆರೆದಿದಂತಹ ಪ್ರೇಕ್ಷಕರು ಕಣ್ತುಂಬಿಕೊಂಡರು. ಪ್ರಾಣಿಪ್ರಿಯರಿಗೆ ಇದೊಂದು ಉತ್ತಮ ವೇದಿಕೆಯಾಗಿದ್ದು, ಮುದ್ದು ಮುದ್ದಾದ ಶ್ವಾನಗಳನ್ನು ಕಂಡು ಪ್ರಾಣಿ ಪ್ರಿಯರು ಖುಷಿ ಪಟ್ಟರು.

ಕೆಲವು ಶ್ವಾನಗಳಿಗೆ ಪಿಂಕ್ ಮತ್ತು ಪರ್ಪಲ್ ಕಲರ್ ಬಟ್ಟೆಯನ್ನು ಧರಿಸಿ ಪ್ರದರ್ಶನ ನೀಡುವುದರ ಮೂಲಕ ಹೆಚ್ಚು ಗಮನ ಸೆಳೆದವು. ಪ್ರದರ್ಶನದಲ್ಲಿ ನೆರೆದಿದ್ದ ಮಕ್ಕಳು ಶ್ವಾನಗಳನ್ನು ಕಂಡು ತುಂಬಾ ಸಂತೋಷ ಪಟ್ಟರು.

ಇದನ್ನೂ ಓದಿ:-ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ: ಮೋದಿ ಸರ್ಕಾರ ರಾಜ್ಯದ ಪರ ನಿಲ್ಲುತ್ತದೆ ಎಂದ ಎಚ್‌ಡಿಕೆ

ಇಂದು ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಜೆ..ಕೆ.ಮೈದಾನದಲ್ಲಿ ನಡೆದ “ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯ” ಕಾರ್ಯಕ್ರಮದಲ್ಲಿ ಸಿಲುಕಿ, ಮುಧೋಳ ಹೌಂಡ್, ಸೈಬೀರಿಯನ್ ಹಸ್ಕಿ, ಗ್ರೇಟ್ ಡೆನ್, ಪೂಡ್ಲೀ, ಡಾಗೂ ಅರ್ಜೆಂಟೀನಾ, ರಾಜ ಪುಲಿಯಂ, ಪಿಟ್ ಬುಲ್, ಕಾಕರ್ ಸ್ಪ್ಯಾನಿಯಲ್, ಬಾಕ್ಸರ್, ಪಗ್, ಕೊಕ್ಕೊಪೋ, ಪ್ರೆಂಚ್ ಬುಲ್ ಡಾಗ್, ಓಲ್ಡ್ ಶೀಪ್ ಡಾಗ್, ಐರಿಷ್ ಸೆಟ್ಟರ್ ಬೀಗಲ್, ಡಚ್ ಶೆಪರ್ಡ್, ಜರ್ಮನ್ ಶೆಪರ್ಡ್, ಚೌ ಚೌ, ಗೋಲ್ಡನ್ ರಿಟ್ರೀವರ್, ಬಾರ್ಡರ್ ಕೋಲಿ, ಬರ್ಮೀಸ್ ಮೌಂಟೇನ್ ಡಾಗ್, ಲಾಸ್ ಅಪ್ಸೋ, ಸೇರಿಂದಂತೆ ಮತ್ತಿತರ ಶ್ವಾನಗಳು ಪ್ರದರ್ಶನ ನೀಡಿದವು.

ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಉತ್ತಮ ತಳಿಗಳ ಶ್ವಾನಗಳನ್ನು ಶ್ವಾನ ವೈದ್ಯಾಧಿಕಾರಿಗಳು ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಅನುಭವ ಹೊಂದಿರುವಂತಹ ತೀರ್ಪುಗಾರರಿಂದ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ವಿತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

10 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

10 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

10 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

10 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

10 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

10 hours ago