ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ: ಪ್ರೇಕ್ಷಕರ ಕಣ್ಮನ ಸೆಳೆದ ಮುದ್ದು ಪ್ರಾಣಿಗಳ ಪ್ರದರ್ಶನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.

ದೇಶ, ವಿದೇಶದ ಶ್ವಾನಗಳು ತಮ್ಮ ತುಂಟಾಟ, ಬೆಡಗು ಬಿನ್ನಾಣದಲ್ಲಿ ಹೆಜ್ಜೆ ಹಾಕುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿ ನೂರಾರು ಮಂದಿಯನ್ನು ಆಕರ್ಷಿಸಿದವು.

ಶ್ವಾನಗಳ ಆಟ-ಪಾಠ, ಬುದ್ಧಿವಂತಿಕೆ, ಜಾಣ್ಮೆ, ಮುಗ್ಧತೆ, ತುಂಟಾಟ, ತಾಳ್ಮೆ ಹಾಗೂ ಅವುಗಳ ಪ್ರೀತಿಯನ್ನು ಪ್ರದರ್ಶನದಲ್ಲಿ ನೆರೆದಿದಂತಹ ಪ್ರೇಕ್ಷಕರು ಕಣ್ತುಂಬಿಕೊಂಡರು. ಪ್ರಾಣಿಪ್ರಿಯರಿಗೆ ಇದೊಂದು ಉತ್ತಮ ವೇದಿಕೆಯಾಗಿದ್ದು, ಮುದ್ದು ಮುದ್ದಾದ ಶ್ವಾನಗಳನ್ನು ಕಂಡು ಪ್ರಾಣಿ ಪ್ರಿಯರು ಖುಷಿ ಪಟ್ಟರು.

ಕೆಲವು ಶ್ವಾನಗಳಿಗೆ ಪಿಂಕ್ ಮತ್ತು ಪರ್ಪಲ್ ಕಲರ್ ಬಟ್ಟೆಯನ್ನು ಧರಿಸಿ ಪ್ರದರ್ಶನ ನೀಡುವುದರ ಮೂಲಕ ಹೆಚ್ಚು ಗಮನ ಸೆಳೆದವು. ಪ್ರದರ್ಶನದಲ್ಲಿ ನೆರೆದಿದ್ದ ಮಕ್ಕಳು ಶ್ವಾನಗಳನ್ನು ಕಂಡು ತುಂಬಾ ಸಂತೋಷ ಪಟ್ಟರು.

ಇದನ್ನೂ ಓದಿ:-ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ: ಮೋದಿ ಸರ್ಕಾರ ರಾಜ್ಯದ ಪರ ನಿಲ್ಲುತ್ತದೆ ಎಂದ ಎಚ್‌ಡಿಕೆ

ಇಂದು ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಜೆ..ಕೆ.ಮೈದಾನದಲ್ಲಿ ನಡೆದ “ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯ” ಕಾರ್ಯಕ್ರಮದಲ್ಲಿ ಸಿಲುಕಿ, ಮುಧೋಳ ಹೌಂಡ್, ಸೈಬೀರಿಯನ್ ಹಸ್ಕಿ, ಗ್ರೇಟ್ ಡೆನ್, ಪೂಡ್ಲೀ, ಡಾಗೂ ಅರ್ಜೆಂಟೀನಾ, ರಾಜ ಪುಲಿಯಂ, ಪಿಟ್ ಬುಲ್, ಕಾಕರ್ ಸ್ಪ್ಯಾನಿಯಲ್, ಬಾಕ್ಸರ್, ಪಗ್, ಕೊಕ್ಕೊಪೋ, ಪ್ರೆಂಚ್ ಬುಲ್ ಡಾಗ್, ಓಲ್ಡ್ ಶೀಪ್ ಡಾಗ್, ಐರಿಷ್ ಸೆಟ್ಟರ್ ಬೀಗಲ್, ಡಚ್ ಶೆಪರ್ಡ್, ಜರ್ಮನ್ ಶೆಪರ್ಡ್, ಚೌ ಚೌ, ಗೋಲ್ಡನ್ ರಿಟ್ರೀವರ್, ಬಾರ್ಡರ್ ಕೋಲಿ, ಬರ್ಮೀಸ್ ಮೌಂಟೇನ್ ಡಾಗ್, ಲಾಸ್ ಅಪ್ಸೋ, ಸೇರಿಂದಂತೆ ಮತ್ತಿತರ ಶ್ವಾನಗಳು ಪ್ರದರ್ಶನ ನೀಡಿದವು.

ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಉತ್ತಮ ತಳಿಗಳ ಶ್ವಾನಗಳನ್ನು ಶ್ವಾನ ವೈದ್ಯಾಧಿಕಾರಿಗಳು ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಅನುಭವ ಹೊಂದಿರುವಂತಹ ತೀರ್ಪುಗಾರರಿಂದ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ವಿತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

12 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

12 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

12 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

12 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

12 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

12 hours ago