ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ: ಪ್ರೇಕ್ಷಕರ ಕಣ್ಮನ ಸೆಳೆದ ಮುದ್ದು ಪ್ರಾಣಿಗಳ ಪ್ರದರ್ಶನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.

ದೇಶ, ವಿದೇಶದ ಶ್ವಾನಗಳು ತಮ್ಮ ತುಂಟಾಟ, ಬೆಡಗು ಬಿನ್ನಾಣದಲ್ಲಿ ಹೆಜ್ಜೆ ಹಾಕುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿ ನೂರಾರು ಮಂದಿಯನ್ನು ಆಕರ್ಷಿಸಿದವು.

ಶ್ವಾನಗಳ ಆಟ-ಪಾಠ, ಬುದ್ಧಿವಂತಿಕೆ, ಜಾಣ್ಮೆ, ಮುಗ್ಧತೆ, ತುಂಟಾಟ, ತಾಳ್ಮೆ ಹಾಗೂ ಅವುಗಳ ಪ್ರೀತಿಯನ್ನು ಪ್ರದರ್ಶನದಲ್ಲಿ ನೆರೆದಿದಂತಹ ಪ್ರೇಕ್ಷಕರು ಕಣ್ತುಂಬಿಕೊಂಡರು. ಪ್ರಾಣಿಪ್ರಿಯರಿಗೆ ಇದೊಂದು ಉತ್ತಮ ವೇದಿಕೆಯಾಗಿದ್ದು, ಮುದ್ದು ಮುದ್ದಾದ ಶ್ವಾನಗಳನ್ನು ಕಂಡು ಪ್ರಾಣಿ ಪ್ರಿಯರು ಖುಷಿ ಪಟ್ಟರು.

ಕೆಲವು ಶ್ವಾನಗಳಿಗೆ ಪಿಂಕ್ ಮತ್ತು ಪರ್ಪಲ್ ಕಲರ್ ಬಟ್ಟೆಯನ್ನು ಧರಿಸಿ ಪ್ರದರ್ಶನ ನೀಡುವುದರ ಮೂಲಕ ಹೆಚ್ಚು ಗಮನ ಸೆಳೆದವು. ಪ್ರದರ್ಶನದಲ್ಲಿ ನೆರೆದಿದ್ದ ಮಕ್ಕಳು ಶ್ವಾನಗಳನ್ನು ಕಂಡು ತುಂಬಾ ಸಂತೋಷ ಪಟ್ಟರು.

ಇದನ್ನೂ ಓದಿ:-ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ: ಮೋದಿ ಸರ್ಕಾರ ರಾಜ್ಯದ ಪರ ನಿಲ್ಲುತ್ತದೆ ಎಂದ ಎಚ್‌ಡಿಕೆ

ಇಂದು ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಜೆ..ಕೆ.ಮೈದಾನದಲ್ಲಿ ನಡೆದ “ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯ” ಕಾರ್ಯಕ್ರಮದಲ್ಲಿ ಸಿಲುಕಿ, ಮುಧೋಳ ಹೌಂಡ್, ಸೈಬೀರಿಯನ್ ಹಸ್ಕಿ, ಗ್ರೇಟ್ ಡೆನ್, ಪೂಡ್ಲೀ, ಡಾಗೂ ಅರ್ಜೆಂಟೀನಾ, ರಾಜ ಪುಲಿಯಂ, ಪಿಟ್ ಬುಲ್, ಕಾಕರ್ ಸ್ಪ್ಯಾನಿಯಲ್, ಬಾಕ್ಸರ್, ಪಗ್, ಕೊಕ್ಕೊಪೋ, ಪ್ರೆಂಚ್ ಬುಲ್ ಡಾಗ್, ಓಲ್ಡ್ ಶೀಪ್ ಡಾಗ್, ಐರಿಷ್ ಸೆಟ್ಟರ್ ಬೀಗಲ್, ಡಚ್ ಶೆಪರ್ಡ್, ಜರ್ಮನ್ ಶೆಪರ್ಡ್, ಚೌ ಚೌ, ಗೋಲ್ಡನ್ ರಿಟ್ರೀವರ್, ಬಾರ್ಡರ್ ಕೋಲಿ, ಬರ್ಮೀಸ್ ಮೌಂಟೇನ್ ಡಾಗ್, ಲಾಸ್ ಅಪ್ಸೋ, ಸೇರಿಂದಂತೆ ಮತ್ತಿತರ ಶ್ವಾನಗಳು ಪ್ರದರ್ಶನ ನೀಡಿದವು.

ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಉತ್ತಮ ತಳಿಗಳ ಶ್ವಾನಗಳನ್ನು ಶ್ವಾನ ವೈದ್ಯಾಧಿಕಾರಿಗಳು ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಅನುಭವ ಹೊಂದಿರುವಂತಹ ತೀರ್ಪುಗಾರರಿಂದ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ವಿತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

2 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

4 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago